ನಾಳೆ ಜುಲೈ 5ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿ ಬಜೆಟ್ ಮಂಡಿಸುವ ತಯಾರಿಯಲ್ಲಿದ್ದಾರೆ.
ನಾಳೆ ಜುಲೈ 5ರಂದು ಕೇಂದ್ರ ಬಜೆಟ್ - 2019 ಮಂಡನೆಯಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿ ಬಜೆಟ್ ಮಂಡಿಸುವ ತಯಾರಿಯಲ್ಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಸನ್ನಿವೇಶಗಳಿವೆ, ಕೆಲ ರಾಜ್ಯಗಳು ಬರಕ್ಕೆ ತುತ್ತಾಗಿವೆ. ಇಂತಹ ಸಂದರ್ಭದಲ್ಲಿ ನರೆಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಗೆ ಮೊದಲ ಬಜೆಟ್ 2019 ಮಂಡಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಣಾಳಿಕೆ ಪರಿಗಣಿಸುವುದಾದರೆ ಈ ಕೆಳಗಿನ ಅಂಶಗಳಿಗೆ ಆದ್ಯತೆ ನೀಡಬಹುದು.
ರೈತರಿಗೆ ಪ್ರಥಮ ಆದ್ಯತೆ
ಲೋಕಸಭಾ ಚುನಾವಣೆ ಪೂರ್ವದ ಮಧ್ಯಂತರ ಬಜೆಟ್ ನಲ್ಲಿ ರೈತರಿಗೆ ಸಾಕಷ್ಟು ಕೊಡುಗೆಗಳನ್ನು ಘೋಷಿಸಲಾಗಿತ್ತು. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಸಹಾಯಧನ ಘೋಷಿಸಲಾಯಿತು. ಅದರ ಮುಂದುವರೆದ ಭಾಗವಾಗಿ ಈ ಪ್ರಮಾಣವನ್ನು ಹೆಚ್ಚಿಸಬಹುದು. ಪ್ರಮಾನಿಕೆಯಲ್ಲಿ ಹೇಲಿರುವಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 1-5 ವರ್ಷಗಳ ಅವಧಿಗೆ 1 ಲಕ್ಷ ಸಾಲವನ್ನು ಶೇ. ೭ ಬಡ್ಡಿದರದಂತರ ಒದಗಿಸಲಾಗುತ್ತದೆ. ರೈತರಿಗೆ ಬಡ್ಡಿ ರಹಿತ ಸಾಲ ಸಿಗಬಹುದೇ ನೋಡಬೇಕು.
ಉದ್ಯಮಶೀಲತೆಗೆ ಉತ್ತೇಜನ
ಉದ್ಯಮಶಿಲರಿಗಾಗಿ ಹಾಗು ಸ್ಟಾರ್ಟ್ಅಪ್ ಗಳಿಗಾಗಿ ಮುದ್ರಾ ಯೋಜನೆಯಡಿ ಸಿಗುವ ಸಾಲಕ್ಕೆ ಈ ಬಜೆಟ್ ನಲ್ಲಿ ಆದ್ಯತೆ ಸಿಗಬಹುದು. ಉದ್ಯಮಶೀಲ ಮಹಿಳೆಯರಿಗೆ ಶೇ. ೫೦ರಷ್ಟು, ಪರುಷರಿಗೆ ಶೇ. ೨೫ರಷ್ಟು ಸಾಲಕ್ಕೆ ಖಾತರಿ ನೀಡಬಹುದು.
ಪಿಡಿಎಸ್
ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಬಡ ಕುಟುಂಬಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಘೋಷಿಸಬಹುದು. ಸಬ್ಸಿಡಿ ದರದ ಸಕ್ಕರೆ ಪ್ರಮಾಣ ಹೆಚ್ಚಿಸುವ ನಿರೀಕ್ಷೆ ಇದೆ.
ಆಯುಷ್ಮಾನ್ ಭಾರತ ಯೋಜನೆ
ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್ ಭಾರತ್ ಬಹುದೊಡ್ಡ ಯೋಜನೆಯಾಗಿದೆ. ಇದರ ವ್ಯಾಪಕವಾದ ವಿಸ್ತರಣೆಗೆ ಆದ್ಯತೆ ಸಿಗಬಹುದು.
ರೈತರ ಸಹಕಾರ ಸೊಸೈಟಿ
ಬಿಜೆಪಿಯ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ 2022 ರ ವೆಳೆಗೆ ೧೦ ಸಾವಿರ ಹೊಸ ರೈತ ಉತ್ಪಾದಕರ ಸೊಸೈಟಿಗಳನ್ನು ಜಾರಿ ತರುವ ಬಗ್ಗೆ ಭರವಸೆ ನೀಡಲಾಗಿತ್ತು. ಕೃಷಿ ಉತ್ಪನ್ನಗಳ ನೇರ ಮಾರಾಟಕ್ಕೆ ಇದು ಸಹಕಾರಿಯಾಗಬಲ್ಲದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications