ಕೇಂದ್ರ ಬಜೆಟ್ 2019: ನಿರ್ಮಲಾ ಸೀತಾರಾಮನ್ ರಿಂದ ಮೊದಲ ಬಜೆಟ್, ನಿರೀಕ್ಷೆಗಳು ನೂರಾರು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದ ಬಜೆಟ್ ಮಂಡನೆಗೆ ಕ್ಷಣಗಣನೆ ರಂಭವಾಗಿದೆ. ಇದೇ ಮೊದಲ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಮೊದಲ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಕೇಂದ್ರ ಬಜೆಟ್ - 2019 ಮಂಡನೆ ಮಾಡಲಿದ್ದಾರೆ.

ಕಳೆದ ಅವಧಿಯಲ್ಲಿ ಹಲವಾರು ಆರ್ಥಿಕ ಸಮಸ್ಯೆಗಳನ್ನು ಎದುರಿಸಿರುವ ಮೋದಿ ಸರ್ಕಾರವು ಕುಂಠಿತಗೊಂಡಿರುವ ಆರ್ಥಿಕತೆಯನ್ನು ಸಮತೋಲನಕ್ಕೆ ತರುವ ಮಹತ್ವದ ಜವಾಬ್ದಾರಿ ಹೊಂದಿದೆ.
ಕಳೆದ ಅವಧಿಯ ತಪ್ಪುಗಳನ್ನು ಸರಿಪಡಿಸಿ ಆರ್ಥಿಕ ಸಮತೋಲನ ಸಾಧಿಸಲೇಬೇಕಾದ ನಿರೀಕ್ಷೆಗಳು ಗರಿಗೆದರಿವೆ. ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರ ಮೊದಲ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಲೆ ನಿರೀಕ್ಷೆಗಳ ಭಾರ ಸಾಕಷ್ಟಿದೆ.
ಹಣಕಾಸು ಖಾತೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು ಭಾರತದ ಸಂಸತ್ತಿನ ಇತಿಹಾಸದಲ್ಲಿ ವಿತ್ತ ಖಾತೆ ಪಡೆದು ಬಜೆಟ್ ಮಂಡಿಸುತ್ತಿರುವ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಡೆಯಲಿದ್ದಾರೆ.
ಲೋಕಸಭಾ ಚುನಾವಣೆಯ ಪೂರ್ವಧಲ್ಲಿ ಪಿಯೂಷ್ ಗೋಯಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಹೀಗಾಗಿ ಅದರಲ್ಲಿನ ಬಹುತೇಕ ಅಂಶಗಳನ್ನು ಪ್ರಸ್ತುತ ಬಜೆಟ್ ನಲ್ಲಿ ಕಾಣಬಹುದು.
ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಮೊದಲ ಬಜೆಟ್ ನಲ್ಲಿ ಎಲ್ಲಾ ವಲಯದವರೂ ಹಾಗು ಎಲ್ಲಾ ವರ್ಗದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ, ಆದರೂ ಎಲ್ಲಾ ಪರಿಸ್ಥಿತಿಗಳನ್ನು ಗಮನಿಸಿ ಬಿಗಿ ಹೆಜ್ಜೆಗಳನ್ನಿಡಬೇಕಾದ ಅಗತ್ಯತೆ ಇದೆ. ಆದಾಯ ತೆರಿಗೆ ವಿನಾಯಿತಿಯೂ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳ ಕಡೆಗೆ ಜನಸಾಮಾನ್ಯರ ಕಣ್ಣಿದೆ.
ಏನೇ ಆದರೂ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್ ಮೂಲಕ ಆರ್ಥಿಕ ಸುಸ್ಥಿರತೆ, ಉತ್ಪಾದನಾ ವಲಯಕ್ಕೆ ಉತ್ತೇಜನ, ರೈತರಿಗೆ ಬಲ, ಬ್ಯಾಂಕಿಂಗ್ ವರ್ಧನೆ ಮತ್ತು ಸರ್ವ ಅಭಿವೃದ್ಧಿ ಮೇಲುಗೈ ಸಾಧಿಸಬೇಕಾಗಿದೆ. ಬಜೆಟ್ ಮಂಡನೆ ಮುಗಿದ ನಂತರ ಸರಕಾರದ ಅಧಿಕೃತ ವೆಬ್ಸೈಟ್ಲ್ಲಿ ಬಜೆಟ್ ಪ್ರತಿ ಲಭ್ಯವಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications