ಆಧಾರ್ ನೀಡಿದವರಿಗೆ ತೆರಿಗೆ ಇಲಾಖೆಯೇ ಪ್ಯಾನ್ ಕಾರ್ಡ್ ವಿತರಣೆ
ನಿರ್ಮಲಾ ಸೀತಾರಾಮನ್ ಅವರು ಜುಲೈ ೫ರಂದು ಮಂಡಿಸಿರುವ ಬಜೆಟ್ ನಲ್ಲಿ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ದಾಖಲಿಸಲು ಪ್ಯಾನ್ಗೆ ಪರ್ಯಾಯವಾಗಿ ಆಧಾರ್ ಕಾರ್ಡ್ ನೀಡಬಹುದು ಎಂದು ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಜುಲೈ ೫ರಂದು ಮಂಡಿಸಿರುವ ಬಜೆಟ್ ನಲ್ಲಿ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ದಾಖಲಿಸಲು ಪ್ಯಾನ್ಗೆ ಪರ್ಯಾಯವಾಗಿ ಆಧಾರ್ ಕಾರ್ಡ್ ನೀಡಬಹುದು ಎಂದು ಹೇಳಿದ್ದಾರೆ. ಆದರೆ ಪ್ಯಾನ್ ಕಾರ್ಡ್ ಅಪ್ರಸ್ತುತವಾಗುವ ಪ್ರಶ್ನೆಯೇ ಇಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಆಧಾರ್ ಕಾರ್ಡ್ ಒದಗಿಸಿ ಐಟಿಆರ್ ಸಲ್ಲಿಸಿದವರಿಗೆ ಆದಾಯ ತೆರಿಗೆ ಇಲಾಖೆಯೇ ಪ್ಯಾನ್ ಅನ್ನು ಸ್ವಯಂ ಪ್ರೇರಣೆಯಿಂದ ವಿತರಿಸಲಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಈ ಹಿಂದೆ ಆದಾಯ ತೆರಿಗೆ ರಿಟರ್ನ್ ಗಾಗಿ (ಐಟಿಆರ್) ಆಧಾರ್ ಮತ್ತು ಪ್ಯಾನ್ ಸಂಖ್ಯೆ ಜೋಡಣೆ ಮಾಡುವುದನ್ನು ಸಿಬಿಡಿಟಿ ಕಡ್ಡಾಯಗೊಳಿಸಿತ್ತು. ತೆರಿಗೆದಾರರನ್ನು ಉತ್ತೇಜಿಸುವ ಸಲುವಾಗಿ ಪ್ಯಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಲು ಬಜೆಟ್ ಮಂಡನೆ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ.
ಹಣಕಾಸು ವ್ಯವಹಾರಗಳ ಸಂದರ್ಭಗಳಲ್ಲಿ ಪ್ಯಾನ್ ಕಾರ್ಡ್ ಮುಖ್ಯವಾಗಿ ಬೇಕು. ಹೀಗಾಗಿ ತೆರಿಗೆದಾರರಿಗೆ ಹೆಚ್ಚುವರಿ ಆಯ್ಕೆಯಾಗಿ ಪ್ಯಾನ್ಗೆ ಪರ್ಯಾಯವಾಗಿ ಆಧಾರ್ ಬಳಸಲು ಅವಕಾಶ ನೀಡಲಾಗಿದೆ. ಪ್ಯಾನ್ ಸಂಖ್ಯೆ ಬದಲಿಗೆ ಆಧಾರ್ ನಮೂದಿಸಿದವರಿಗೆ ತೆರಿಗೆ ಇಲಾಖೆಯೇ ಪ್ಯಾನ್ ಕಾರ್ಡ್ ತಲುಪಿಸುತ್ತದೆ. ಪ್ರಸ್ತುತ ದೇಶದಾದ್ಯಂತ 120 ಕೋಟಿ ಆಧಾರ್ ಕಾರ್ಡ್ ಗಳನ್ನು, 41 ಕೋಟಿ ಪ್ಯಾನ್ ಕರ್ಡ್ ಗಳನ್ನು ವಿತರಿಸಲಾಗಿದೆ. ಇವುಗಳ ಪೈಕಿ 22 ಕೋಟಿ ಪ್ಯಾನ್ ಕಾರ್ಡ್ಗಳು ಆಧಾರ್ ನೊಂದಿಗೆ ಲಿಂಕ್ ಆಗಿವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications