ಗುಡ್ ನ್ಯೂಸ್! ರೈತರ ಖಾತೆಗೆ ನೇರವಾಗಿ ರಸಗೊಬ್ಬರ ಸಬ್ಸಿಡಿ ವರ್ಗಾವಣೆ
ರಾಸಾಯನಿಕ ಗೊಬ್ಬರಗಳ ಸಬ್ಸಿಡಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮಾಡುವ ದೀರ್ಘಾವಧಿಯ ಪರಿಗಣನೆಯ ಪ್ರಸ್ತಾಪವನ್ನು ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
ರಾಸಾಯನಿಕ ಗೊಬ್ಬರಗಳ ಸಬ್ಸಿಡಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮಾಡುವ ದೀರ್ಘಾವಧಿಯ ಪರಿಗಣನೆಯ ಪ್ರಸ್ತಾಪವನ್ನು ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
ಎಲ್ಪಿಜಿ ಸಬ್ಸಿಡಿ ಮಾದರಿಯಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ರಾಸಾಯನಿಕ ರಸಗೊಬ್ಬರ ಅತಿಯಾದ ಬಳಕೆಯ ಹಿನ್ನೆಲೆಯಲ್ಲಿ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ವರ್ಗಾವಣೆ ಮಾಡುವ ಯೋಜನೆಗೆ ಸಿದ್ದತೆ ನಡೆಸಿದೆ. ಇದರಿಂದ ರಸಗೊಬ್ಬರ ಪ್ರಮಾಣ ನಿಯಂತ್ರಣಕ್ಕೆ ಬರಲಿದ್ದು, ಅಲ್ಲದೇ ನಿಗದಿಗಿಂತ ಹೆಚ್ಚು ರಸಗೊಬ್ಬರ ಬಳಸಿದರೆ ಸಬ್ಸಿಡಿ ಸಿಗುವುದಿಲ್ಲ ಎನ್ನಲಾಗಿದೆ.
ನೀತಿ ಆಯೋಗ ಈ ಕುರಿತ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ. ರೈತರ ಬ್ಯಾಂಕ್ ಖಾತೆಗಳಿಗೆ ರಸಗೊಬ್ಬರ ಸಬ್ಸಿಡಿ ವರ್ಗಾವಣೆ ಮಾಡಲಾಗುವುದು ಅಥವಾ ಎಕರೆಗೆ ಇಷ್ಟು ಸಬ್ಸಿಡಿ ಮೊತ್ತವನ್ನು ನಿಗದಿಪಡಿಸಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ನೀಡುವ ಚಿಂತನೆ ಇದೆ. ಮಾಹಿತಿಯ ಪ್ರಕಾರ ರಸಗೊಬ್ಬರ ಸಬ್ಸಿಡಿ ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಡಿಬಿಟಿ (ನೇರ ಲಾಭ ವರ್ಗಾವಣೆ) ವಿಧಾನದ ಅಡಿಯಲ್ಲಿ ರಸಗೊಬ್ಬರ ಸಬ್ಸಿಡಿಗಳನ್ನು ನಿರ್ವಹಿಸಲಾಗುವುದು.
2016-17ರಲ್ಲಿ ರಸಗೊಬ್ಬರಕ್ಕಾಗಿ ವಾರ್ಷಿಕ ಸಬ್ಸಿಡಿ ರೂ. 70,000 ಕೋಟಿ, 2017-18ರಲ್ಲಿ ರೂ. 69,000 ಕೋಟಿ ಮತ್ತು ಕಳೆದ ಹಣಕಾಸು ವರ್ಷದಲ್ಲಿ ರೂ. 73,435 ಕೋಟಿ ಹಾಗು ಜೂನ್ ಅಂತ್ಯದವರೆಗೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 29,000 ಕೋಟಿ ಸಬ್ಸಿಡಿ ಮೊತ್ತ ಖರ್ಚಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications