For Quick Alerts
For Daily Alerts
ಗುಡ್ ನ್ಯೂಸ್! ರೈತರ ಖಾತೆಗೆ ನೇರವಾಗಿ ರಸಗೊಬ್ಬರ ಸಬ್ಸಿಡಿ ವರ್ಗಾವಣೆ
ರಾಸಾಯನಿಕ ಗೊಬ್ಬರಗಳ ಸಬ್ಸಿಡಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮಾಡುವ ದೀರ್ಘಾವಧಿಯ ಪರಿಗಣನೆಯ ಪ್ರಸ್ತಾಪವನ್ನು ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
|
ರಾಸಾಯನಿಕ ಗೊಬ್ಬರಗಳ ಸಬ್ಸಿಡಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮಾಡುವ ದೀರ್ಘಾವಧಿಯ ಪರಿಗಣನೆಯ ಪ್ರಸ್ತಾಪವನ್ನು ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
ಎಲ್ಪಿಜಿ ಸಬ್ಸಿಡಿ ಮಾದರಿಯಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ರಾಸಾಯನಿಕ ರಸಗೊಬ್ಬರ ಅತಿಯಾದ ಬಳಕೆಯ ಹಿನ್ನೆಲೆಯಲ್ಲಿ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ವರ್ಗಾವಣೆ ಮಾಡುವ ಯೋಜನೆಗೆ ಸಿದ್ದತೆ ನಡೆಸಿದೆ. ಇದರಿಂದ ರಸಗೊಬ್ಬರ ಪ್ರಮಾಣ ನಿಯಂತ್ರಣಕ್ಕೆ ಬರಲಿದ್ದು, ಅಲ್ಲದೇ ನಿಗದಿಗಿಂತ ಹೆಚ್ಚು ರಸಗೊಬ್ಬರ ಬಳಸಿದರೆ ಸಬ್ಸಿಡಿ ಸಿಗುವುದಿಲ್ಲ ಎನ್ನಲಾಗಿದೆ.
ನೀತಿ ಆಯೋಗ ಈ ಕುರಿತ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ. ರೈತರ ಬ್ಯಾಂಕ್ ಖಾತೆಗಳಿಗೆ ರಸಗೊಬ್ಬರ ಸಬ್ಸಿಡಿ ವರ್ಗಾವಣೆ ಮಾಡಲಾಗುವುದು ಅಥವಾ ಎಕರೆಗೆ ಇಷ್ಟು ಸಬ್ಸಿಡಿ ಮೊತ್ತವನ್ನು ನಿಗದಿಪಡಿಸಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ನೀಡುವ ಚಿಂತನೆ ಇದೆ. ಮಾಹಿತಿಯ ಪ್ರಕಾರ ರಸಗೊಬ್ಬರ ಸಬ್ಸಿಡಿ ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಡಿಬಿಟಿ (ನೇರ ಲಾಭ ವರ್ಗಾವಣೆ) ವಿಧಾನದ ಅಡಿಯಲ್ಲಿ ರಸಗೊಬ್ಬರ ಸಬ್ಸಿಡಿಗಳನ್ನು ನಿರ್ವಹಿಸಲಾಗುವುದು.
2016-17ರಲ್ಲಿ ರಸಗೊಬ್ಬರಕ್ಕಾಗಿ ವಾರ್ಷಿಕ ಸಬ್ಸಿಡಿ ರೂ. 70,000 ಕೋಟಿ, 2017-18ರಲ್ಲಿ ರೂ. 69,000 ಕೋಟಿ ಮತ್ತು ಕಳೆದ ಹಣಕಾಸು ವರ್ಷದಲ್ಲಿ ರೂ. 73,435 ಕೋಟಿ ಹಾಗು ಜೂನ್ ಅಂತ್ಯದವರೆಗೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 29,000 ಕೋಟಿ ಸಬ್ಸಿಡಿ ಮೊತ್ತ ಖರ್ಚಾಗಿದೆ.
English summary
Govt eyes direct transfer of fertilizer subsidy
Story first published: Tuesday, July 16, 2019, 11:35 [IST]