ವಿ.ಜಿ. ಸಿದ್ದಾರ್ಥ ನಾಪತ್ತೆ ಬೆನ್ನಲ್ಲೇ ಕೆಫೆ ಕಾಫಿ ಡೇ ಷೇರು ಮೌಲ್ಯ ಶೇ. 20ರಷ್ಟು ಕುಸಿತ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕರಾಗಿರುವ ವಿ. ಜಿ ಸಿದ್ದಾರ್ಥ ಸೋಮವಾರ ಸಂಜೆಯಿಂದ ನಾಪತ್ತೆಯಾಗಿರುವ ಪರಿಣಾಮ ಮಂಗಳವಾರ ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ನ ಷೇರುಗಳ ಮೌಲ್ಯ ಶೇ. 20 ಕುಸಿತ ಕಂಡಿವೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕರಾಗಿರುವ ವಿ. ಜಿ ಸಿದ್ದಾರ್ಥ ಸೋಮವಾರ ಸಂಜೆಯಿಂದ ನಾಪತ್ತೆಯಾಗಿರುವ ಪರಿಣಾಮ ಮಂಗಳವಾರ ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ನ ಷೇರುಗಳ ಮೌಲ್ಯ ಶೇ. 20 ಕುಸಿತ ಕಂಡಿವೆ. ವಿ. ಜಿ ಸಿದ್ದಾರ್ಥ ಅವರನ್ನು ಪತ್ತೆ ಮಾಡಲು ದಕ್ಷಿಣ ಕನ್ನಡ ಪೊಲೀಸರು ಭಾರಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬೆಂಗಳೂರಿನಿಂದ ಸುಮಾರು 375 ಕಿ.ಮೀ ದೂರದಲ್ಲಿರುವ ಮಂಗಳೂರು ಬಳಿಯ ನೇತ್ರಾವತಿ ನದಿಯ ಸೇತುವೆಯೊಂದರ ಬಳಿ ತನ್ನ ಕಾರಿನಿಂದ ಇಳಿದ ಒಂದು ಗಂಟೆಯ ನಂತರವೂ ಹಿಂತಿರುಗಲಿಲ್ಲ. ಇದರಿಂದ ಭಯಭೀತರಾದ ಚಾಲಕನು ಅವರನ್ನು ಹುಡುಕಾಡಿದರು. ಆದರೆ ಎಲ್ಲಿಯೂ ಕಾಣದಿದ್ದಾಗ ಅವರ ಕುಟುಂಬ ಸದಸ್ಯರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಇಂದು ಬೆಳಿಗ್ಗೆ 9.19ಕ್ಕೆ ಕಾಫಿ ಡೇ ಷೇರುಗಳು ಶೇರುಗಳು ಶೇ. 20ರಷ್ಟು ಕುಸಿತ ಕಂಡು 153.40ಕ್ಕೆ ಸರ್ಕೂಟ್ ಆಗಿದ್ದವು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯನೂ ಆಗಿರುವ ಸಿಸಿಡಿ ಸಂಸ್ಥಾಪಕ ಮತ್ತು ಏಷ್ಯಾದ ಏಕೈಕ ಅತಿದೊಡ್ಡ ಕಾಫಿ ಎಸ್ಟೇಟ್ ಮಾಲೀಕ ಸಿದ್ಧಾರ್ಥ ಅವರು ಇತ್ತೀಚೆಗೆ ಮೈಂಡ್ಟ್ರೀನಲ್ಲಿದ್ದ ತನ್ನ ಶೇ. 20.41ರಷ್ಟು ಪಾಲನ್ನು ಎಲ್ & ಟಿ ಸಂಸ್ಥೆಗೆ ಮಾರಿದಾಗ ಸುದ್ದಿಯಲ್ಲಿದ್ದರು. ಈ ವಹಿವಾಟಿನಿಂದ ಅವರು ಸುಮಾರು 2,858 ಕೋಟಿ ರೂ. ಲಾಭ ಗಳಿಸಿದ್ದರು.
ಚಿಕ್ಕಮಗಳೂರಿನಲ್ಲಿ ಜನಿಸಿದ ಸಿದ್ಧಾರ್ಥ, ಮುಂಬೈನ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಜೆಎಂ ಫೈನಾನ್ಷಿಯಲ್ನಲ್ಲಿ ಮ್ಯಾನೇಜ್ಮೆಂಟ್ ಟ್ರೈನಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಅವರು 1984 ರಲ್ಲಿ ಶಿವನ್ ಸೆಕ್ಯುರಿಟೀಸ್ ಅನ್ನು ಖರೀದಿಸಿದರು ಮತ್ತು ಅದನ್ನು ಅತ್ಯಂತ ಯಶಸ್ವಿ ಹೂಡಿಕೆ ಬ್ಯಾಂಕಿಂಗ್ ಮತ್ತು ಸ್ಟಾಕ್ ಬ್ರೋಕಿಂಗ್ ಕಂಪನಿಯಾಗಿ ಪರಿವರ್ತಿಸಿದರು. 2000 ರಲ್ಲಿ ವೇ 2 ವೆಲ್ತ್ ಸೆಕ್ಯುರಿಟೀಸ್ ಎಂದು ಮರುನಾಮಕರಣ ಮಾಡಲಾಯಿತು.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್



Click it and Unblock the Notifications