ವಾಹನ ಉದ್ಯಮ ಶಾಕಿಂಗ್! ಕಳೆದ ಮೂರು ತಿಂಗಳಲ್ಲಿ 2 ಲಕ್ಷ ಉದ್ಯೋಗ ಕಡಿತ
ವಾಹನ ಉತ್ಪಾದನೆ ಮತ್ತು ಮಾರಾಟದ ವಹಿವಾಟು ಭಾರೀ ಕುಸಿತ ಕಂಡಿರುವುದು ಉದ್ಯೋಗದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಭಾರತದಲ್ಲಿ ಕಳೆದ ಮೂರು ತಿಂಗಳಲ್ಲಿ ವಾಹನ ಮಾರಾಟಗಾರರಲ್ಲಿ ಸುಮಾರು 2 ಲಕ್ಷ ಉದ್ಯೋಗ ಕಡಿತವಾಗಿದೆ.
ವಾಹನ ಉತ್ಪಾದನೆ ಮತ್ತು ಮಾರಾಟದ ವಹಿವಾಟು ಭಾರೀ ಕುಸಿತ ಕಂಡಿರುವುದು ಉದ್ಯೋಗದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಭಾರತದಲ್ಲಿ ಕಳೆದ ಮೂರು ತಿಂಗಳಲ್ಲಿ ವಾಹನ ಮಾರಾಟಗಾರರಲ್ಲಿ ಸುಮಾರು 2 ಲಕ್ಷ ಉದ್ಯೋಗ ಕಡಿತವಾಗಿದೆ. ಆಟೋಮೊಬೈಲ್ ಮಾರಾಟ ಕುಸಿತದ ಪರಿಣಾಮ ವಾಹನ ಚಿಲ್ಲರೆ ವ್ಯಾಪಾರಿಗಳು ಉದ್ಯೋಗಿಗಳನ್ನು ಕಡಿತಗೊಳಿಸುವ ಕೊನೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಆಟೋಮೊಬೈಲ್ ಡೀಲರ್ಸ್ ಸಂಘಟನೆಗಳ ಒಕ್ಕೂಟ (ಎಫ್ಎಡಿಎ) ಹೇಳಿದೆ.

ಪ್ರಸ್ತುತ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಆಟೋಮೊಬೈಲ್ ವಲಯದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಶೋರೂಂಗಳನ್ನು ಮುಚ್ಚುವುದರೊಂದಿಗೆ ಉದ್ಯೋಗ ಕಡಿತ ಮುಂದುವರೆಯಬಹುದೆಂದು ಆತಂಕ ವ್ಯಕ್ತಪಡಿಸಿದೆ. ಆಟೋಮೊಬೈಲ್ ಉದ್ಯಮದ ಉತ್ತೇಜನಕ್ಕಾಗಿ ಸರ್ಕಾರದ ಮಧ್ಯಪ್ರವೇಶ ಅಗತ್ಯವಿದ್ದು, ಜಿಎಸ್ಟಿ ದರ ಇಳಿಸಿ ತಾತ್ಕಾಲಿಕವಾಗಿ ಶಕ್ತಿ ತುಂಬುವ ಕಾರ್ಯ ಆಗಬೇಕು. ಪ್ರಸ್ತುತ ಮಾರಾಟ ವಿಭಾಗದ ಉದ್ಯೋಗಿಗಳು ಹೆಚ್ಚಿನ ಕೆಲಸ ಕಳೆದುಕೊಂಡಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ತಾಂತ್ರಿಕ ವಿಭಾಗದ ಹುದ್ದೆಗಳನ್ನೂ ಕಡಿತ ಮಾಡುವ ಸಾದ್ಯತೆ ಇದೆ. ಕಾರಣ ವಾಹನ ಮಾರಾಟ ವಹಿವಾಟು ಕಡಿಮೆಯಾದರೆ ತಾಂತ್ರಿಕ ಭಾಗದ ಉದ್ಯೋಗಿಗಳ ಸೇವೆ ಕೂಡ ತಗ್ಗುತ್ತದೆ ಎಂದು ಎಫ್ಎಡಿಎ ಹೇಳಿದೆ.
ಕಳೆದ ಮೂರು ತಿಂಗಳಲ್ಲಿ ಹೆಚ್ಚಿನ ಉದ್ಯೋಗ ಕಡಿತ ಸಂಭವಿಸಿದೆ. ಇದು ಮೇ ತಿಂಗಳಲ್ಲಿ ಪ್ರಾರಂಭವಾಗಿ, ಜೂನ್ ಮತ್ತು ಜುಲೈ ವರೆಗೆ ಮುಂದುವರೆದಿದೆ ಎಂದು ಫಾಡಾ ಅಧ್ಯಕ್ಷ ಆಶಿಶ್ ಹರ್ಷರಾಜ್ ಕಾಳೆ ತಿಳಿಸಿದ್ದಾರೆ.
15,000 ವಿತರಕರು ನಿರ್ವಹಿಸುವ ಸುಮಾರು 26,000 ಆಟೋಮೊಬೈಲ್ ಶೋ ರೂಂಗಳ ಮೂಲಕ ಸುಮಾರು 25 ಲಕ್ಷ ಜನ ನೇರ ಉದ್ಯೋಗಿಗಳಿದ್ದಾರೆ. ಜೊತೆಗೆ ಪರೋಕ್ಷವಾಗಿ 25 ಲಕ್ಷ ಉದ್ಯೋಗಿಗಳು ಕಾರ್ಯನಿರತವಾಗಿದ್ದಾರೆ.
ಕಳೆದ 18 ತಿಂಗಳಲ್ಲಿ ಏಪ್ರಿಲ್ ಕೊನೆಗೆ 271 ನಗರಗಳಲ್ಲಿನ 286 ಶೋ ರೂಂಗಳು ಬಾಗಿಲು ಮುಚ್ಚಲ್ಪಟ್ಟಿದ್ದು, ಸುಮಾರು 32 ಸಾವಿರ ಜನ ಕೆಲಸ ಕಳೆದುಕೊಂಡಿದ್ದಾರೆ. ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ವಾಹನಗಳ ಮಾರಾಟವು ಶೇ.12.35ರಷ್ಟು ಕುಸಿತ ಕಂಡಿದೆ. ಟಾಟಾ ಮೋಟಾರ್ಸ್ ಶೇ. 31 ರಷ್ಟು, ಹೋಂಡಾ ಕಾರ್ಸ್ ಇಂಡಿಯಾ ಶೇ. 48.67ರಷ್ಟು ಹಾಗು ಮಹೀಂದ್ರ ಆ್ಯಂಡ್ ಮಹೀಂದ್ರ ಮಾರಾಟ ವಹಿವಾಟು ಶೇ.16, ರಷ್ಟು ಕುಸಿದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications