ಆರ್ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಕಡಿತ ಸಾಧ್ಯತೆ
ಕಳೆದ ವರ್ಷ ಡಿಸೆಂಬರ್ನಲ್ಲಿ ಶಕ್ತಿಕಾಂತ ದಾಸ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಸತತ ನಾಲ್ಕನೇ ಬಾರಿಗೆ ಆರ್ಬಿಐ ತನ್ನ ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ಗಳನ್ನು (ಬಿಪಿಎಸ್) ಕಡಿತಗೊಳಿಸುವ ನಿರೀಕ್ಷೆಯಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇಂದು ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಲಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಶಕ್ತಿಕಾಂತ ದಾಸ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಸತತ ನಾಲ್ಕನೇ ಬಾರಿಗೆ ಆರ್ಬಿಐ ತನ್ನ ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ಗಳನ್ನು (ಬಿಪಿಎಸ್) ಕಡಿತಗೊಳಿಸುವ ನಿರೀಕ್ಷೆಯಿದೆ.

ವಿತ್ತೀಯ ನೀತಿ ಸಮಿತಿಯು (ಎಂಪಿಸಿ)ಆರ್ಥಿಕ ಕುಸಿತ, ಕಡಿಮೆ ಹಣದುಬ್ಬರ ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮುಂತಾದ ಅಂಶಗಳನ್ನು ಗಮನದಲ್ಲಿಟ್ಟು ನಿರ್ಧಾರವನ್ನು ರೂಪಿಸಲಿದೆ ಎನ್ನಲಾಗಿದೆ.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸ್ಥೂಲವಾಗಿ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸುತ್ತಿದ್ದು, ದ್ವೈಮಾಸಿಕ ಹಣಕಾಸು ನೀತಿಯನ್ನು ಇಂದು ಪ್ರಕಟಿಸಲಿದೆ.
ಆರ್ಬಿಐ ದ್ವೈಮಸಿಕ ಸಾಲ ನೀತಿ ಕಡಿತಗೊಳಿಸಿದರೆ ಸಾಲದ ಮೇಲಿನ ಬಡ್ಡಿದರವನ್ನು ಶೇ. 0.25ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಿಸಿದ್ದಾರೆ. ಇವತ್ತು ರೆಪೊ ದರ ಕಡಿತಗೊಂಡರೆ ಸತತ ನಾಲ್ಕನೇ ಬರಿ ಬಡ್ಡಿದರ ಇಳಿಕೆಯಾಗಲಿದೆ. ದೇಶದ ಆರ್ಥಿಕತೆ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಚೇತರಿಕೆ ನೀಡಲು ಬಡ್ಡಿದರ ಕಡಿತ ಮಾಡುವ ಸಾಧ್ಯತೆ ಹೆಚ್ಚಿದೆ. ಅಲ್ಲದೇ ಹಣದುಬ್ಬರ ಶೇ. 4ಕ್ಕಿಂತ ಕಡಿಮೆಯಿರುವುದರಿಂದ ಬಡ್ಡಿದರ ಇಳಿಕೆಗೆ ತೊಡಕಾಗದು ಎನ್ನಲಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ)ಹಣದುಬ್ಬರವು ಜೂನ್ನಲ್ಲಿ ಶೇ. 3.18ಕ್ಕೆ ಏರಿತು. ಆದರೆ ಇದು ಆರ್ಬಿಐನ ಮಧ್ಯಮ ಅವಧಿಯ ಗುರಿ ಶೇ. 4ಕ್ಕಿಂತ ಕಡಿಮೆಯಾಗಿದೆ. ಆದಾಗ್ಯೂ, ಸಿಪಿಐ ಅನ್ನು ಲೆಕ್ಕಾಚಾರ ಮಾಡುವಾಗ ಆಹಾರದ ಬೆಲೆಗಳು ಶೇ. 46ರಷ್ಟು ಮೌಲ್ಯ ಹೊಂದಿರುವುದರಿಂದ ಭಾರತದಲ್ಲಿ ಹಣದುಬ್ಬರದ ಪಥವು ಮಾನ್ಸೂನ್ ಮೇಲೆ ಗಣನೀಯವಾಗಿ ಅವಲಂಬಿತವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications