ನೆರೆ ಪೀಡಿತ ಸಂತ್ರಸ್ತರ ಮನೆ ನಿರ್ಮಾಣಕ್ಕೆ 5 ಲಕ್ಷ ಪರಿಹಾರ ಘೋಷಣೆ
ಕರ್ನಾಟಕ ರಾಜ್ಯ ಸರ್ಕಾರ ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದ್ದು, ತುರ್ತು ಪರಿಹಾರವಾಗಿ ಕುಟುಂಬದ ನಷ್ಟಕ್ಕೆ ಅನುಗುಣವಾಗಿ ನೆರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರ ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದ್ದು, ತುರ್ತು ಪರಿಹಾರವಾಗಿ ಕುಟುಂಬದ ನಷ್ಟಕ್ಕೆ ಅನುಗುಣವಾಗಿ ನೆರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
5 ಲಕ್ಷ ಪರಿಹಾರ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಗೆ ತತ್ತರಿಸಿರುವ ಜನರು ಮನೆ, ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ಮನೆ ಕಳೆದುಕೊಂಡ ನೆರೆ ಪೀಡಿತ ಸಂತ್ರಸ್ತರಿಗೆ ಮನೆ ನಿರ್ಮಿಸಲು ರೂ 5 ಲಕ್ಷ ಪರಿಹಾರ ನೀಡಲಾಗುವುದು.
ರಾಜ್ಯದಾದ್ಯಂತ ಪ್ರವಾಹ ಭೂಕುಸಿತದಿಂದ ಸುಮಾರು 40 ಸಾವಿರ ಮನೆಗಳಿಗೆ ಹಾನಿಯಾಗಿದೆ. ಹೀಗಾಗಿ ಮನೆ ನಿರ್ಮಾಣದ ಕಾರ್ಯಕ್ಕೆ 5 ಲಕ್ಷವನ್ನು ಮಿತಿಗೊಳಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ದುರಸ್ತಿಗೆ 1 ಲಕ್ಷ
ಮನೆ ಕುಸಿದು/ಒಡೆದು ಹೋಗಿ ವಾಸಿಸಲು ಯೋಗ್ಯವಲ್ಲದ ಮನೆಗಳ ದುರಸ್ತಿ ಕಾರ್ಯಕ್ಕೆ ರೂ.1 ಲಕ್ಷ ಪರಿಹಾರ ಒದಗಿಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ತುರ್ತು ಪರಿಹಾರ 10 ಸಾವಿರ
ನೆರೆ ಪೀಡಿತ ಸಂತ್ರಸ್ತ ಪ್ರತಿ ಕುಟುಂಬಕ್ಕೆ ತುರ್ತು ಪರಿಹಾರವಾಗಿ ತಲಾ ಹತ್ತು ಸಾವಿರ ಪರಿಹಾರ ಒದಗಿಸಲಾಗುವುದು. ಈಗ ವಾಸಿಸುತ್ತಿದ್ದ ಜಾಗದಲ್ಲಿ ಮತ್ತೆ ಮನೆ ನಿರ್ಮಾಣ ಅಸಾಧ್ಯವಾದುದರಿಂದ ಸ್ವಂತ ಜಾಗ ಇಲ್ಲದವರಿಗೆ ಸರ್ಕಾರದಿಂದ ನಿವೇಶನ ಒದಗಿಸಲಾಗುವುದು. ಹೊಸ ಮನೆ ನಿರ್ಮಾಣ ಅಥವಾ ದುರಸ್ತಿ ಈ ಆಯ್ಕೆಯನ್ನು ಸಂತರಸ್ತರಿಗೆ ನಿರ್ಧರಿಸಬೇಕು.
ಮನೆ ಬಾಡಿಗೆ ಭತ್ಯೆ
ನೆರೆ ಪಿಡಿತ ಸಂತ್ರಸ್ಥ ಕುಟುಂಬಕ್ಕೆ ಮನೆ ದುರಸ್ತಿ ಕಾರ್ಯ ಮತ್ತು ಹೊಸ ಮನೆ ನಿರ್ಮಾಣ ಆಗುವವರೆಗೆ ಪ್ರತಿ ಕುಟುಂಬಕ್ಕೆ ತಲಾ ರೂ. 5000 ಬಾಡಿಗೆ ಭತ್ಯೆ ೧೦-೧೨ ತಿಂಗಳವರೆಗೆ ನೀಡಲಾಗುವುದು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ನಂತರ, ಕಕ್ಕಾವು ಗ್ರಾಮದಲ್ಲಿ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭರವಸೆ ನೀಡಿದರು.