ಹೋಟೆಲ್ ಗಳಲ್ಲಿ ಊಟ ಮಾಡೋರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಹೊಸ ರೂಲ್ಸ್
ಬಾಳೆಹಣ್ಣು ಮತ್ತು ಮೊಟ್ಟೆಗಳಂತಹ ಆಹಾರ ಪದಾರ್ಥಗಳಿಗೆ ಅತಿಯಾದ ದರವನ್ನು ವಿಧಿಸುವ ಪಂಚತಾರಾ ಹೋಟೆಲ್ಗಳಿಗೆ ಅನ್ಯಾಯದ ತಪ್ಪು ವ್ಯಾಪಾರ ಅಭ್ಯಾಸವಾಗಿ ಬಿಟ್ಟಿದ್ದು, ಸರ್ಕಾರವು ಅವರಿಂದ ವಿವರಣೆಯನ್ನು ಪಡೆಯಲಿದೆ.
ಬಾಳೆಹಣ್ಣು ಮತ್ತು ಮೊಟ್ಟೆಗಳಂತಹ ಆಹಾರ ಪದಾರ್ಥಗಳಿಗೆ ಅತಿಯಾದ ದರವನ್ನು ವಿಧಿಸುವ ಪಂಚತಾರಾ ಹೋಟೆಲ್ಗಳಿಗೆ ಅನ್ಯಾಯದ ತಪ್ಪು ವ್ಯಾಪಾರ ಅಭ್ಯಾಸವಾಗಿ ಬಿಟ್ಟಿದ್ದು, ಸರ್ಕಾರವು ಅವರಿಂದ ವಿವರಣೆಯನ್ನು ಪಡೆಯಲಿದೆ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮಂಗಳವಾರ ಹೇಳಿದ್ದಾರೆ.
ಇನ್ಮುಂದೆ ಇಂಥಹ ಘಟನೆ ನಡೆದರೆ ಹೋಟೆಲ್ ಗಳು ಸರ್ಕಾರಕ್ಕೆ ಹೊಟೇಲ್ ಗಳು ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದಿದ್ದಾರೆ.

ಜನಸಾಮಾನ್ಯರು ದುಬಾರಿ, ಐಷಾರಾಮಿ ಹಾಗು ಪಂಚತಾರಾ ಹೋಟೆಲ್ ಗಳಲ್ಲಿ ಹೋಗುವ ಮುನ್ನ ಎರಡೆರಡು ಬಾರಿ ವಿಚಾರ ಮಾಡ್ತಾರೆ. ಉಳಿದ ಕಡೆಗಳಿಗಿಂತ ಅಲ್ಲಿ ಆಹಾರಕ್ಕೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ.
ಇತ್ತೀಚೆಗೆ ಎರಡು ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಎರಡು ಬಾಳೆ ಹಣ್ಣಿಗೆ ರೂ. 442 ಬಿಲ್ ಮಾಡಿರುವ ಬಗ್ಗೆ ನಟ ರಾಹುಲ್ ಬೋಸ್ ಚಂಡೀಗಡದ ಪಂಚತಾರಾ ಹೋಟೆಲ್ ಬಗ್ಗೆ ದೂರು ನೀಡಿದ್ದರು. ಇನ್ನೊಂದು ಪ್ರಕರಣದಲ್ಲಿ ಬೇಯಿಸಿದ ಎರಡು ಮೊಟ್ಟೆಗೆ 1700 ರೂಪಾಯಿ ಬಿಲ್ ಮಾಡಿರುವುದು ಕೂಡ ವರದಿಯಾಗಿತ್ತು.
ಅತ್ಯಂತ ಅಗ್ಗದ ದರದಲ್ಲಿ ಲಭ್ಯವಾಗುವ ಮೊಟ್ಟೆ ಮತ್ತು ಬಾಳೆಹಣ್ಣುಗಳಿಗೆ ಭಾರೀ ಶುಲ್ಕ ವಿಧಿಸಿರುವ ಘಟನೆಗಳನ್ನು ಪರಿಶೀಲಿಸಿರುವ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪಂಚತಾರಾ ಹೊಟೇಲ್ ಗಳು ಬೇಕಾಬಿಟ್ಟಿ ಶುಲ್ಕ ವಿಧಿಸುವಂತಿಲ್ಲ.
ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಇಂತಹ ಪದ್ಧತಿಗಳನ್ನು ಪರಿಶೀಲಿಸಲು ಸರ್ಕಾರ ನಿಯಮಗಳನ್ನು ಮಾಡುತ್ತದೆ. ಗ್ರಾಹಕ ಸಂರಕ್ಷಣಾ ಕಾಯಿದೆಯಡಿ ಮಾಡಲಾಗುವ ಕಾನೂನಿನಲ್ಲಿ ಷರತ್ತು ವಿಧಿಸಲಾಗುವುದು ಎಂದಿದ್ದಾರೆ. ಬೇರೆ ಮಾರುಕಟ್ಟೆಯಲ್ಲಿ ಅಗ್ಗದಲ್ಲಿ ಸಿಗುವ ಆಹಾರ ಪದಾರ್ಥಗಳು ಪಂಚತಾರಾ ಹೊಟೇಲ್ ಗಳಲ್ಲಿ ಏಕೆ ದುಬಾರಿ? ಹೊಟೇಲ್ ಗಳು ಯಾಕೆ ಇಷ್ಟೊಂದು ಶುಲ್ಕ ವಿಧಿಸುತ್ತಿವೆ. ಇದನ್ನು ತಡೆಯಲು ಸರ್ಕಾರ ಕಾನೂನು ರಚಿಸಲಿದೆ ಎಂದಿದ್ದಾರೆ.
More From GoodReturns

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications