ಕೇಂದ್ರ ಸರ್ಕಾರವು ಮಾರ್ಚ್ 2020 ರ ವೇಳೆಗೆ ಪ್ರಧಾನ ಮಂತ್ರಿ ಆವಾಸ ಯೋಜನೆ (ಪಿಎಂಎವೈ) ಅಡಿಯಲ್ಲಿ ಉದ್ದೇಶಿತ 1.12 ಕೋಟಿ ಮನೆಗಳನ್ನು ಮಂಜೂರು ಮಾಡುತ್ತದೆ.
ಕೇಂದ್ರ ಸರ್ಕಾರವು ಮಾರ್ಚ್ 2020 ರ ವೇಳೆಗೆ ಪ್ರಧಾನ ಮಂತ್ರಿ ಆವಾಸ ಯೋಜನೆ (ಪಿಎಂಎವೈ) ಅಡಿಯಲ್ಲಿ ಉದ್ದೇಶಿತ 1.12 ಕೋಟಿ ಮನೆಗಳನ್ನು ಮಂಜೂರು ಮಾಡುತ್ತದೆ ಎಂದು ಕೇಂದ್ರ ವಸತಿ ಮತ್ತು ನಗರಾ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿಯ 15 ನೇ ವಾರ್ಷಿಕ ಸಮಾವೇಶದಲ್ಲಿ ತಿಳಿಸಿದ್ದಾರೆ.
84 ಲಕ್ಷ ಮನೆ ಮಂಜೂರು
ಪಿಎಂ ಅವಾಸ ಯೋಜನಯಡಿಯಲ್ಲಿ ನಗರ ಭಾಗದಲ್ಲಿ 1 ಕೋಟಿ ಆರಂಭಿಕ ಗುರಿಯಲ್ಲಿ 84 ಲಕ್ಷ ಮನೆಗಳು ಮಂಜೂರಾಗಿವೆ. ಈಗಾಗಲೇ 84 ಲಕ್ಷ ಮನೆಗಳು ಮಂಜೂರಾಗಿದ್ದು, ಡಿಸೆಂಬರ್ ೨೦೧೯ರ ಅಂತ್ಯದ ವೇಳೆಗೆ 1 ಕೋಟಿ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ಹೇಳಿದ್ದಾರೆ. 12 ಲಕ್ಷ ಹೆಚ್ಚುವರಿ ಮನೆಗಳ ಬೇಡಿಕೆಯಿಂದ ನಮ್ಮ ಗುರಿ 1.12 ಕೋಟಿಗೆ ಏರಿಸಿದ್ದು, 2020ರ ಸಾಲಿನ ಮೊದಲ ಮೂರು ತಿಂಗಳಲ್ಲಿ ಮಂಜೂರು ಮಾಡಲಾಗುವುದು ಎಂದು ಪುರಿ ಹೇಳಿದ್ದಾರೆ.
24 ಲಕ್ಷ ಮನೆ ಹಸ್ತಾಂತರ
ಮನೆಗಳು ನಿಗಧಿತ ಸಮಯದೊಳಗೆ ಪೂರ್ಣಗೊಳ್ಳಲಿವೆ ಎಂದು ಆಶಯ ವ್ಯಕ್ತಪಡಿಸಿದ ಪುರಿ, 24 ಲಕ್ಷ ಮನೆಗಳನ್ನು ಪಿಎಂಎವೈ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದರು. 48 ಲಕ್ಷ ಮನೆಗಳ ಕೆಲಸ ಕಾರ್ಯಚರಣೆಯಲ್ಲಿದ್ದು, ಈ ಅಂಕಿ ಅಂಶವು ಶೀಘ್ರದಲ್ಲೇ 75 ಲಕ್ಷವನ್ನು ತಲುಪಲಿದೆ. ಈಗಾಗಲೇ 24 ಲಕ್ಷ ಮನೆಗಳನ್ನು ಹಸ್ತಾಂತರಿಸಿದ್ದು, ಈ ಸಂಖ್ಯೆ ಶೀಘ್ರದಲ್ಲೇ 50 ಲಕ್ಷವನ್ನು ಮುಟ್ಟಲಿದೆ.
ರೇರಾ ಎಫೆಕ್ಟ್
ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ(ರೇರಾ) ಅನೇಕ ವಿಪತ್ತುಗಳನ್ನು ತೆಗೆದು ಹಾಕಿದೆ. ಆದರೆ ಈ ಕಾಯಿದೆ ಅನುಷ್ಠಾನವಾಗಿ ಕೇವಲ ಎರಡು ವರ್ಷಗಳಾದ್ದರಿಂದ, ಎಲ್ಲಾ ಸಮಸ್ಯೆಗಳನ್ನು ಒಂದೇ ಸಮಯದಲ್ಲಿ ಪರಿಹರಿಸುತ್ತದೆ ಎಂದು ನಿರೀಕ್ಷಿಸಲಾಗುವುದಿಲ್ಲ ಎಂದಿದ್ದಾರೆ. ರೇರಾ ಕಾರ್ಯವಿಧಾನಗಳನ್ನು ಸುವ್ಯವಸ್ಥಿತಗೊಳಿಸುವ ಪ್ರಕ್ರಿಯೆಯಲ್ಲಿದ್ದೇವೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು ರೇರಾದ ಹಲವಾರು ನಿಬಂಧನೆಗಳನ್ನು ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಡೆವಲಪರ್ ಮತ್ತು ಮನೆ ಖರೀದಿದಾರರಿಗೆ ಅನುಕೂಲವಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications