For Quick Alerts
For Daily Alerts
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ
ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಮಧ್ಯಾಹ್ನ ನಿಧನರಾದರು.
|
ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಮಧ್ಯಾಹ್ನ ನಿಧನರಾದರು.
ಅರುಣ್ ಜೇಟ್ಲಿಯವರು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಹಣಕಾಸು ಹಾಗು ರಕ್ಷಣಾ ಖಾತೆಗಳ ಜವಾಬ್ಧಾರಿ ನಿರ್ವಹಿಸಿದರು. ನೋಟು ರದ್ದತಿಯಂತಹ ಕಠಿಣ ನಿರ್ಧಾಋದ ನಂತರ ಎದುರಾದ ಏರುಪೇರುಗಳನ್ನು ಗಟ್ಟಿಯಾಗಿ ಎದುರಿಸಿ ಸಮರ್ಥವಾಗಿ ಸರ್ಕಾರದ ನಿರ್ಧಾರ ಪ್ರತಿಪಾದಿಸಿದ್ದರು.
ಅರುಣ್ ಜೇಟ್ಲಿಯವರು ವೃತ್ತಿಯಲ್ಲಿ ವಕೀಲರಾಗಿದ್ದರು. ಮೋದಿ ನೇತೃತ್ವ ಸರ್ಕಾರದ ಮೊದಲ ಅವಧಿಯಲ್ಲಿ ಹಣಕಾಸು ಮತ್ತು ರಕ್ಷಣಾ ಖಾತೆಗಳನ್ನು ಹೊಂದಿದ್ದರು. ಆಗಾಗ್ಗೆ ಸರ್ಕಾರದ ಟ್ರಬಲ್ ಶೂಟರ್ ಆಗಿ ಕಾರ್ಯನಿರ್ವಹಿಸಿ ಗಮನ ಸೆಳೆಯುತ್ತಿದ್ದರು.
2019 ರ ಲೋಕಸಭಾ ಚುನಾವಣೆಯಲ್ಲಿಅರುಣ್ ಜೇಟ್ಲಿಯವರು ಅನಾರೋಗ್ಯದ ಕಾರಣದಿಂದಾಗಿ ಸ್ಪರ್ಧಿಸಿರಲಿಲ್ಲ. ಕಳೆದ ಮೇ 14 ರಂದು ಏಮ್ಸ್ ನಲ್ಲಿ ಮೂತ್ರಪಿಂಡ ಕಸಿಗೆ ಒಳಗಾದ ನಂತರ ರೈಲ್ವೆ ಸಚಿವ ಪಿಯುಶ್ ಗೋಯಲ್ ಅವರು ಹಣಕಾಸು ಸಚಿವರಾಗಿ ಜವಾಬ್ಧಾರಿ ನಿರ್ವಹಿಸಿದ್ದರು
English summary
Former finance minister Arun Jaitley passes away
Story first published: Saturday, August 24, 2019, 14:22 [IST]