ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಕುಸಿಯುತ್ತಿರುವ ದೇಶದ ಆರ್ಥಿಕ ಬೆಳವಣಿಗೆಯನ್ನು ತಡೆಯಲು ಕೇಂದ್ರ ಸರ್ಕಾರ ಹಲವಾರು ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಎಫ್ಡಿಐ ನಿಯಮ ಸಡಿಲಿಕೆ
ಪ್ರಮುಖವಾಗಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಸಿಂಗಲ್ ಬ್ರಾಂಡ್ ಚಿಲ್ಲರೆ ಮಾರಾಟ ವ್ಯಾಪಾರಿಗಳಿಗೆ, ಡಿಜಿಟಲ್ ಮಾಡದ್ಯಮ, ಗುತ್ಇಗೆ ಆಧಾರಿತ ಉತ್ಪಾದನೆ ಹಾಗು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರಗಳಲ್ಲಿ ವಿದೇಶ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ನಿಯಮ ಸಡಿಲಿಕೆ ಮಾಡಲಾಯಿತು.
ಎಫ್ಡಿಐ ಹೂಡಿಕೆ ಭರ್ಜರಿ ಅವಕಾಶ
ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ, ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇಕಡಾ 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ನಿರ್ಣಯ ತೆಗೆದುಕೊಳ್ಳಲಾಯಿತು. ದೇಶಿ ಉತ್ಪಾದನೆ ಹೆಚ್ಚಳಕ್ಕಾಗಿ ಗುತ್ತಿಗೆ ಉತ್ಪಾದನೆಯಲ್ಲೂ ಶೇ. ೧೦೦ರಷ್ಟು ಹಾಗು ಡಿಜಿಟಲ್ ಮಾಧ್ಯಮದಲ್ಲಿ ಶೇಕಡಾ 26ರಷ್ಟು ಎಫ್ಡಿಐಗೆ ಅವಕಾಶ ಕಲ್ಪಿಸಲಾಗಿದೆ
ಪಿಯೂಷ್ ಗೋಯಲ್ ಹೇಳಿದ್ದೇನು?
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಲಿದ್ದಲು ಗಣಿಗಾರಿಕೆ ಮತ್ತು ವಿವಿಧ ಮೂಲಸೌಕರ್ಯದಲ್ಲಿ ಶೇಕಡಾ 100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದರು. ವಿದೇಶಿ ನೇರ ಬಂಡವಾಳ ಹೂಡಿಕೆ ನಿಯಮ ಬದಲಾವಣೆ ಭಾರತವನ್ನು ಆಕರ್ಷಕ ಹೂಡಿಕೆ ದೇಶವಾಗಿಸಲಿದೆ. ಇದರಿಂದ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಹೆಚ್ಚಾಗಲಿದೆ.
ಆನ್ಲೈನ್ ಮಾರಾಟಕ್ಕೆ ಅವಕಾಶ
ಸಿಂಗಲ್ ಬ್ರಾಂಡ್ ಚಿಲ್ಲರೆ ಮಾರಾಟ ಕಂಪನಿಗಳು ಮಳೆಗೆಗಳನ್ನು ಆರಂಭಿಸುವ ಮೊದಲೇ ಆನ್ಲೈನ್ ಮೂಲಕ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕ್ರಮ ಆರ್ಥಿಕ ಉತ್ತೇಜನಕ್ಕೆ ವೇಗ ನೀಡಲಿದೆ. ಸಿಂಗಲ್ ಬ್ರಾಂಡ್ ಸರಕುಗಳು ಪ್ರತಿ ವರ್ಷ ಶೇ.30ರಷ್ಟು ಮಾರಾಟವಾಗಬೇಕು ಎಂಬ ನಿಯಮ ಇದೆ. ಆದರೆ ಐದು ವರ್ಷದ ವಹಿವಾಟಿನಲ್ಲಿ ಶೇ. ೩೦ರಷ್ಟು ದೇಶಿ ಸರಕುಗಳು ಮಾರಾಟವಾದರೆ ಸಾಕು ಎಂದು ನಿಯಮ ಸಡಿಲಿಸಲಾಗಿದೆ.
ಭಾರೀ ಹಿಂಜರಿತ
ದೇಶದ ಆಟೊಮೊಬೈಲ್, ರಿಯಲ್ ಎಸ್ಟೇಟ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ದಿನ ಬಳಕೆಯ ಸರಕುಗಳ ವಲಯದಲ್ಲಿ ಭಾರೀ ಆರ್ಥಿಕ ಹಿಂಜರಿತ ಇದೆ. ದಿನೇ ದಿನೇ ಉತ್ಪಾದನೆ ಕುಂಠಿತಗೊಳ್ಳುತ್ತಿದ್ದ, ಉದ್ಯೋಗ ನಷ್ಟವಾಗುತ್ತಿದೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications