ನೀವು ಬಿಪಿಎಲ್ ಕಾರ್ಡುದಾರರೆ? ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳ ಲ್ಯಾಬ್ ಗಳಲ್ಲಿ ಶುಲ್ಕ ವಿಧಿಸದಂತೆ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳ ಲ್ಯಾಬ್ ಗಳಲ್ಲಿ ಶುಲ್ಕ ವಿಧಿಸದಂತೆ ಆದೇಶ ಹೊರಡಿಸಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಟ್ವೀಟ್
ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳ ಲ್ಯಾಬ್ ಗಳಲ್ಲಿ ಇನ್ನುಮುಂದೆ ತಪಾಸಣೆಯನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿರುವ ವಿಚಾರವನ್ನು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ಹೇಳಿದ್ದಾರೆ.
ಶೇ. 50ರಷ್ಟು ಲ್ಯಾಬ್ ಶುಲ್ಕ ರದ್ದು
ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಲ್ಯಾಬ್ ಗಳಲ್ಲಿ ವಿಧಿಸುತ್ತಿದ್ದ ಶೇ. 50ರಷ್ಟು ಲ್ಯಾಬ್ ಶುಲ್ಕವನ್ನು ವಿಧಿಸಬಾರದು ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಕರ್ನಾಟಕ ರಾಜ್ಯದಲ್ಲಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿ ಬರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರ ರೋಗಿಗಳಿಗೆ ಶೇ. 50ರಷ್ಟು ಲ್ಯಾಬ್ ಶುಲ್ಕ ವಿಧಿಸಲಾಗುತಿತ್ತು. ಆದರೆ ಬಡವರ ಪರಿಸ್ಥಿತಿ ತಿಳಿದುಕೊಂಡು ಶುಲ್ಕವನ್ನು ವಿಧಿಸಬಾರದೆಂಬ ಆದೇಶ ಹೊರಡಿಸಲಾಗಿದೆ. ನಮ್ಮದು ಸದಾ ಬಡವರ, ರೈತರ, ಕಾರ್ಮಿಕರ ಪರವಾದ ಸರ್ಕಾರ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬಡವರಿಗೆ ಅನುಕೂಲ
ರಾಜ್ಯಾದಾದ್ಯಂತ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ 7 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 10 ಸ್ವಾಯತ್ತ ಕಾಲೇಜು ಸೇರಿ 17 ವೈದ್ಯಕೀಯ ಕಾಲೇಜುಗಳಿವೆ. ಶುಲ್ಕ ರದ್ದತಿಯ ಸರ್ಕಾರದ ಈ ನಿರ್ಧಾರದಿಂದ ಬಡವರಿಗೆ ಅನುಕೂಲವಾಗಿದೆ. ಬಡ ರೋಗಿಗಳ ಅನುಕೂಲಕ್ಕಾಗಿ ಕಾಲೇಜು ಆಸ್ಪತ್ರೆಗಳಲ್ಲಿ ಪಡೆಯುತ್ತಿದ್ದ ಲ್ಯಾಬ್ ಶುಲ್ಕ ರದ್ದು ಮಾಡಿದೆ.
ಆನ್ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯುವುದು ಹೇಗೆ?