For Quick Alerts
For Daily Alerts
ರಾಜ್ಯ ನೌಕರರಿಗೆ ಗುಡ್ ನ್ಯೂಸ್! ತುಟ್ಟಿಭತ್ಯೆ ಶೇ. 4.75 ಹೆಚ್ಚಳ?
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.
|
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.
ಸರ್ಕಾರಿ ನೌಕರರಿಗೆ ಶೇಕಡಾ 4.75ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ನೀಡಿದ್ದಾರೆ.
ಪ್ರಸ್ತುತ ನೌಕರರು ಬೇಸಿಕ್ ಸ್ಯಾಲರಿಯ ಶೇಕಡಾ 6.50ರಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಆದರೆ ಇನ್ನುಮುಂದೆ ಶೇಕಡಾ 11.25 ರಷ್ಟು ತುಟ್ಟಿಭತ್ಯೆ ಪಾವತಿಯಾಗಲಿದೆ. ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ಅಧಿಕೃತ ಆದೇಶ ಬರಲಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಡಿಎ ಸಿಗಲಿದೆ ಎನ್ನಲಾಗಿದೆ.
English summary
Karnataka govt hikes DA for its employees
Story first published: Friday, October 18, 2019, 10:00 [IST]