ಪ್ರಧಾನಿ ನರೇಂದ್ರ ಮೋದಿ ಅವರು 21 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಅನುಷ್ಠಾನ ಮಾಡುವ ಜವಾಬ್ದಾರಿಯನ್ನು ತಂಡವೊಂದನ್ನು ಮಾಡಿ, ಈ ಸಚಿವರಿಗೆ ವಹಿಸಿದ್ದಾರೆ ಎಂಬ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈ ಕುರಿತು ಅಧಿಕೃತವಾಗಿ ತಂಡ ಎಂದು ಮಾಡದಿದ್ದರೂ ಆರ್ಥಿಕ ಪ್ಯಾಕೇಜ್ ಅನುಷ್ಠಾನದ ಹೊಣೆ ಈ ಸಚಿವರ ಮೇಲಿದೆ.
ಯಾರು ಆ ಸಚಿವರು ಎಂಬ ಬಗ್ಗೆ ಮೂಲಗಳ ಮಾಹಿತಿಯನ್ನು ಆಧರಿಸಿ, ವರದಿ ಮಾಡಲಾಗಿದೆ. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹಾಗೂ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಪುರಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಐದು ದಿನಗಳ ಕಾಲ ಸತತವಾಗಿ ಆರ್ಥಿಕ ಉತ್ತೇಜನ ಕ್ರಮಗಳನ್ನು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ. ಇಂದಿನಿಂದ (ಮೇ 18, 2020) ಸಚಿವರು ಸಭೆಗಳನ್ನು ಸೇರಿ, ಅನುಷ್ಠಾನದ ಕೆಲಸಗಳನ್ನು ಶುರು ಮಾಡಲಿದ್ದಾರೆ. ಸದ್ಯಕ್ಕೆ ಭಾರತ ಸರ್ಕಾರ 20,97,053 ಕೋಟಿ ರುಪಾಯಿಯ ಪ್ಯಾಕೇಜ್ ಘೋಷಣೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಪ್ರಕಾರ, ಈ ಆರ್ಥಿಕ ಪ್ಯಾಕೇಜ್ ಭವಿಷ್ಯ ಭಾರತಕ್ಕೆ ರೂಪ ನೀಡಲಿದೆ. ಕಳೆದ ವಾರದಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ, ಸ್ವಾವಲಂಬಿ ಭಾರತದ ಬಗ್ಗೆ ಪ್ರಸ್ತಾವ ಮಾಡಿದ್ದರು. ಆದ್ದರಿಂದಲೇ "ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್" ಎಂದು ಹೆಸರಿಡಲಾಗಿತ್ತು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!



Click it and Unblock the Notifications