ಮಹಾಮಾರಿ ಕೊರೊನಾವೈರಸ್ನಿಂದ ದೇಶದಲ್ಲಿ ಆಗಿರುವ ಲಾಕ್ಡೌನ್ನಿಂದಾಗಿ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸಲು ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರುಪಾಯಿ ಗರೀಬ್ ಕಲ್ಯಾಣ್ ಯೋಜನೆಯಡಿ ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಆರ್ಥಿಕ ಪ್ಯಾಕೇಜ್ನಲ್ಲಿ ತಕ್ಷಣದ ಅಗತ್ಯತೆಗಾಗಿ ವಲಸೆ ಕಾರ್ಮಿಕರಿಗೆ , ಬಡವರಿಗೆ ಮೀಸಲು ಇರಿಸಲಾಗಿದೆ. ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲದ ಪ್ರಮಾಣದಲ್ಲಿ ಹೆಚ್ಚಳ, ವಯೋವೃದ್ಧರು, ದಿವ್ಯಾಂಗರಿಗೆ ಸಹಾಯ ಧನ ಹಾಗೂ ಪಿಂಚಣಿ, ಕಟ್ಟಡ ಕಾರ್ಮಿಕರಿಗೆ ಸಹಾಯ ಧನ ಘೋಷಿಸಲಾಗಿದೆ.
ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಪ್ರಮುಖವಾದುದು ಈ ಕೆಳಕಂಡಂತಿದೆ.
ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ 50 ಲಕ್ಷ ರುಪಾಯಿ ಇನ್ಷುರೆನ್ಸ್
ಕೊರೊನಾವೈರಸ್ ವಿರುದ್ಧ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಉದಾಹರಣೆಗೆ ಡಾಕ್ಟರ್, ಪ್ಯಾರಾಮೆಡಿಕಲ್, ಆಶಾ ಕಾರ್ಯಕರ್ತೆಯರಿಗೆ 50 ಲಕ್ಷ ರುಪಾಯಿಯ ಇನ್ಷುರೆನ್ಸ್ ಘೋಷಿಸಲಾಗಿದೆ.
ಈ ಆರೋಗ್ಯ ವಿಮೆಯು 20 ಲಕ್ಷ ಸಿಬ್ಬಂದಿಗೆ ಅನುಕೂಲವಾಗುವುದು.
5 ಕೆಜಿ ಅಕ್ಕಿ, ಗೋಧಿ ಫ್ರಿ
ಈ ಕಠಿಣ ಪರಿಸ್ಥಿತಿಯಲ್ಲಿ ದೇಶದಲ್ಲಿರುವ 80 ಕೋಟಿ ಬಡಜನರು ಅನ್ನವಿಲ್ಲದೆ ಇರಬಾರದು. ಹೀಗಾಗಿ ಸರ್ಕಾರವು 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಮುಂದಿನ ಮೂರು ತಿಂಗಳಿಗೆ ಹೆಚ್ಚುವರಿಯಾಗಿ ನೀಡಲಾಗುತ್ತದೆ. ಒಂದು ಕೆ.ಜಿ ಬೇಳೆಯನ್ನು ಆಯಾ ಪ್ರದೇಶಕ್ಕೆ ಅನುಸಾರವಾಗಿ ಆಯ್ಕೆ ಮಾಡಿಕೊಳ್ಳಬಹುದು.
ಸಾರ್ವಜನಿಕರ ಪಡಿತರ ವ್ಯವಸ್ಥೆಯಲ್ಲಿ ಸಿಗುವ ಅಕ್ಕಿ, ಬೇಳೆ ಜೊತೆಗೆ ಇದು ಹೆಚ್ಚುವರಿಯಾಗಿ ಸಿಗುತ್ತಿರುವ ಸೌಲಭ್ಯವಾಗಿದೆ. ಈ ಯೋಜನೆಯಡಿಯಲ್ಲಿ ಬಡವರು ಹಸಿವು ಮುಕ್ತರಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ.
ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 2,000 ರುಪಾಯಿ
ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಶೀಘ್ರದಲ್ಲೇ 2,000 ರುಪಾಯಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ 8.69 ಕೋಟಿ ರೈತರಿಗೆ ಅನುಕೂಲವಾಗಲಿದೆ.
ಈ ಯೋಜನೆಯ ಮೊದಲ ಕಂತು 2000 ರುಪಾಯಿಗಳನ್ನು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು
ರೈತರು, ವಿಧವೆಯರು, ದಿವ್ಯಾಂಗರಿಗೆ ವಿಶೇಷ ಯೋಜನೆ ಜಾರಿ
ಜನ್ ಧನ್ ಅಕೌಂಟ್ ಹೊಂದಿರುವ 20 ಕೋಟಿ ಮಹಿಳೆಯರಿಗೆ ತಲಾ 500 ರುಪಾಯಿ ಮುಂದಿನ ಮೂರು ತಿಂಗಳ ಕಾಲ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಇದರ ಜೊತೆಗೆ ವಯೋ ವೃದ್ಧರು ವಿಧವೆಯರು, ದಿವ್ಯಾಂಗರಿಗೆ ಪ್ರತಿ ತಿಂಗಳು 1000 ಪಿಂಚಣಿ ನೀಡಲಾಗುವುದು. ಇದು ಮುಂದಿನ ಮೂರು ತಿಂಗಳ ಕಾಲ ನೀಡಲಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಮೂರು ಕೋಟಿ ವಯೋ ವೃದ್ಧರಿಗೆ ಅನುಕೂಲವಾಗುವುದು.
ಮನ್ರೇಗಾ ಯೋಜನೆಯಡಿ ಪ್ರತಿ ಕಾರ್ಮಿಕರಿಗೆ 2000 ರುಪಾಯಿ
MNREGA ಯೋಜನೆಯಡಿಯಲ್ಲಿ ಪ್ರತಿ ಕಾರ್ಮಿಕರಿಗೆ 2000 ರುಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದ 5 ಕೋಟಿ ಕಾರ್ಮಿಕರಿಗೆ ಲಾಭ ಸಿಗಲಿದೆ. ಅಲ್ಲದೆ ಈಗಿರುವ 180 ರುಪಾಯಿ ಕೂಲಿಯನ್ನು 200 ರುಪಾಯಿಗೆ ಹೆಚ್ಚಳ ಮಾಡಲಾಗಿದೆ.
3 ತಿಂಗಳ ಕಾಲ ಉಚಿತವಾಗಿ ಎಲ್ಪಿಜಿ ಸಿಲಿಂಡರ್ ವಿತರಣೆ
ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಮೂರು ತಿಂಗಳು ಕಾಲ ಉಚಿತ ಸಿಲಿಂಡರ್ ವಿತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. 8.3 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾವುದು ಎಂದು ತಿಳಿಸಿದೆ.
ಸ್ವ-ಸಹಾಯ ಮಹಿಳಾ ಸಂಘಗಳಿಗೆ ಸಾಲದ ಪ್ರಮಾಣ ಹೆಚ್ಚಳ
ಸ್ವ-ಸಹಾಯ ಮಹಿಳಾ ಸಂಘಗಳಿಗೆ ದೀನ್ ದಯಾಳ್ ಯೋಜನೆಯಡಿ 20 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಈಗಿರುವ 10 ಲಕ್ಷ ರುಪಾಯಿಯಿಂದ 20 ಲಕ್ಷದವರೆಗೆ ಸಾಲ ನೀಡಲಾಗುವುದು ಇದರಿಂದ 63 ಲಕ್ಷ ಸ್ವಸಹಾಯ ಸಂಘಗಳಿಗೆ ಅನುಕೂಲವಾಗುವುದು.
ಮುಂದಿನ 3 ತಿಂಗಳವರೆಗೆ ಸರ್ಕಾರವೇ ಪಿಎಫ್ ಹಣ ಕಟ್ಟಲಿದೆ
ಸರ್ಕಾರವೇ ಮುಂದಿನ ಮೂರು ತಿಂಗಳವರೆಗೆ ಪಿಎಫ್ ಹಣ ಕಟ್ಟುವುದಾಗಿ ಘೋಷಿಸಿದೆ. ಎರಡೂ ಕಡೆಯ ಪಿಎಫ್ ಹಣವನ್ನು ಅಂದರೆ ಉದ್ಯೋಗದಾತ ಹಾಗೂ ಉದ್ಯೋಗಿಯ ಎರಡೂ ಕಡೆಯ ಹಣ ಕಟ್ಟಲಿದೆ ಉದ್ಯೋಗದಾತರ 12 ಪರ್ಸೆಂಟ್, ಹಾಗೂ ಉದ್ಯೋಗಿಯ 12 ಪರ್ಸೆಂಟ್ ಪಿಎಫ್ ಹಣವನ್ನು ಸರ್ಕಾರ ಕಟ್ಟಲಿದೆ.
ಆದರೆ ಈ ನಿಯಮ ಅನ್ವಯವಾಗುವುದು ಯಾವ ಸಂಸ್ಥೆಯಲ್ಲಿ 100ಕ್ಕಿಂತ ಕಮ್ಮಿ ಇರುವ ಉದ್ಯೋಗಿಗಳಿದ್ದು, ಅದರಲ್ಲಿ 90 ಪರ್ಸೆಂಟ್ ಉದ್ಯೋಗಿಗಳ ಸಂಬಳ 15,000ದೊಳಗೆ ಇದ್ದರೆ
ಈ ಅನುಕೂಲ ಸಿಗಲಿದೆ. ಇದರಿಂದ 4 ಲಕ್ಷ ಸಂಸ್ಥೆಗಳ 80 ಲಕ್ಷ ಉದ್ಯೋಗಿಗಳಿಗೆ ಸಹಾಯವಾಗಲಿದೆ.
ಕಟ್ಟಡ ಕಾರ್ಮಿಕರಿಗೆ ಸಹಾಯಧನ
ದೇಶದ 3.54 ನೋಂದಾಯಿತ ಕಾರ್ಮಿಕರಿಗೆ , ಕಟ್ಟಡ ನಿರ್ಮಾಣದ ಕಾರ್ಮಿಕರಿಗೆ ಸಹಾಯಧನವನ್ನು ಘೋಷಿಸಲಾಗಿದೆ. ಕಾರ್ಮಿಕ ಕಲ್ಯಾಣ ನಿಧಿ ಬಳಕೆಗೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲಾಗಿದ್ದು, ರಾಜ್ಯ ಸರ್ಕಾರಗಳ ಬಳಿ ಇರುವ 31 ಸಾವಿರ ಕೋಟಿ ರುಪಾಯಿ ಬಳಕೆಗೆ ಅವಕಾಶ ನೀಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications