ಬೆಂಗಳೂರು, ಜೂನ್ 2: ಕಳೆದ ಎರಡು ತಿಂಗಳಿನಿಂದ ಕೊರೊನಾವೈರಸ್ ಸೋಂಕು ತಡೆಗಟ್ಟಲು ಹೇರಲಾಗಿರುವ ಲಾಕ್ಡೌನ್ನಿಂದ ಕರ್ನಾಟಕದ ಮುಜರಾಯಿ ಇಲಾಖೆಯ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ.
ಕರ್ನಾಟಕದಲ್ಲಿ ವಿಶ್ವವಿಖ್ಯಾತ ದೇವಸ್ಥಾನಗಳಿವೆ. ಲಾಕ್ಡೌನ್ ನಿಂದ ಎಲ್ಲ ದೇವಸ್ಥಾನಗಳು ಕಳೆದ ಎರಡು ತಿಂಗಳಿನಿಂದ ಬಾಗಿಲು ಮುಚ್ಚಿವೆ. ಮುಜರಾಯಿ ಇಲಾಖೆಗೆ ವಾರ್ಷಿಕ ಸರಾಸರಿ 600 ಕೋಟಿ ರುಪಾಯಿ ಆದಾಯ ಬರುತ್ತದೆ. ಆದರೆ, ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ವಿಚಾರವಾಗಿ ದೇವಸ್ಥಾನಗಳು ಸಂಪೂರ್ಣ ಬಾಗಿಲು ಮುಚ್ಚಿವೆ.
ದೇವಸ್ಥಾನಗಳು ಬಾಗಿಲು ಮುಚ್ಚಿರುವುದರಿಂದ ಮುಜರಾಯಿ ಇಲಾಖೆಗೆ 600 ಕೋಟಿ ರುಪಾಯಿಯಲ್ಲಿ ಶೇ 30 ರಷ್ಟು ಆದಾಯಕ್ಕೆ ಹೊಡೆತ ಬಿದ್ದಿದೆ.
550-600 ಕೋಟಿ ರುಪಾಯಿ ಆದಾಯ
ಒಂದು ವರ್ಷದಲ್ಲಿ, ನಾವು ಸುಮಾರು 550-600 ಕೋಟಿ ರುಪಾಯಿ ಆದಾಯವನ್ನು ಮುಜರಾಯಿ ಇಲಾಖೆಯಿಂದ ನೀರಿಕ್ಷಿಸುತ್ತೇವೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆದಾಯದಲ್ಲಿ ಸುಮಾರು 30% ನಷ್ಟು ಕೊರತೆಯನ್ನು ಕಾಣುತ್ತಿದ್ದೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕೇಂದ್ರ ತೆರಿಗೆಗಳಲ್ಲಿ ರಾಜ್ಯದ ಪಾಲು ಕಡಿಮೆ
ಕೇಂದ್ರ ತೆರಿಗೆಗಳಲ್ಲಿ ರಾಜ್ಯದ ಪಾಲು ಕಡಿಮೆಯಾಗಿರುವುದು, ಸರಕು ಮತ್ತು ಸೇವಾ ತೆರಿಗೆಗಳಲ್ಲಿ ಬಾಕಿ ಇರುವುದರಿಂದ ಹಾಗೂ 60 ದಿನಗಳ ರಾಷ್ಟ್ರವ್ಯಾಪಿ ಲಾಕ್ಡೌನ್ ನಿಂದ ದೇವಸ್ಥಾನಗಳಿಗೆ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಸುಮಾರು 19 ಸಾವಿರ ದೇವಾಲಯಗಳು ಮುಜರಾಯಿ ಇಲಾಖೆಯ ಅಡಿ ಬರುತ್ತವೆ.
ಸಿಬ್ಬಂದಿಗೆ ಕೊಡಲು ಸಂಬಳ ಇಲ್ಲ
ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇಲಾಖೆಯ ಸಹಾಯದನದಿಂದ ಅನೇಕ ಸಿಬ್ಬಂದಿ ಕೆಲಸ ಮಾಡುತ್ತಾರೆ. ಆದರೆ, ಇದೀಗ ಆದಾಯದಲ್ಲಿ ಗಣನೀಯ ಕೊರತೆಯಾಗಿರುವುದರಿಂದ ಸಿಬ್ಬಂದಿಗೆ ಸಂಬಳ ಕೊಡಲು ಹಣ ಇಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳುತ್ತಾರೆ.
ಜೂನ್ 8 ರ ನಂತರ ದೇವಸ್ಥಾನ ಶುರು
ಜೂನ್ 1 ರಿಂದ ಎಲ್ಲಾ ದೇವಸ್ಥಾನಗಳನ್ನು, ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಮುಜರಾಯಿ ಇಲಾಖೆ ನಿರ್ಧಾರ ಕೈಗೊಂಡಿತ್ತು. ಆದರೆ, ಜೂನ್ 8 ರ ನಂತರ ದೇವಸ್ಥಾನಗಳನ್ನು ತೆರೆಯುವುದಾಗಿ ಮುಜರಾಯಿ ಇಲಾಖೆ ಘೋಷಣೆ ಮಾಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications