ದೊಡ್ಡ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಿದ ಸಾಲಕ್ಕಿಂತ ಶೇಕಡಾ 40ರಷ್ಟು ಹೆಚ್ಚು ಸಾಲವನ್ನು ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್ ಗಳು ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ನೀಡಿವೆ. ಆದರೂ ಒಟ್ಟಾರೆ ಸಾಲ ನೀಡಿಕೆ ಪ್ರಮಾಣದಲ್ಲಿ 1.1 ಲಕ್ಷ ಕೋಟಿ ರುಪಾಯಿ ಕಡಿಮೆ ಆಗಿದೆ.
ಆದರೆ, ಆರ್ಥಿಕ ದುರ್ಬಲರಿಗೆ, ದೊಡ್ಡ ಕಾರ್ಪೊರೇಟ್ ಗಳಿಗೆ, ಎನ್ ಬಿಎಫ್ ಸಿಗಳಿಗೆ ಮತ್ತು ರೀಟೇಲ್ ವ್ಯವಹಾರಗಳಿಗೆ ನೀಡಿದ ಸಾಲ ಪ್ರಮಾಣವು ಸಕಾರಾತ್ಮಕ ಬೆಳವಣಿಗೆ ತೋರಿಸುತ್ತವೆ. ಏಪ್ರಿಲ್ ತಿಂಗಳಲ್ಲಿ ಆರ್ಥಿಕ ದುರ್ಬಲ ವರ್ಗಕ್ಕೆ 12,381 ಕೋಟಿ ಸಾಲ ನೀಡಿದ್ದರೆ, ಕಾರ್ಪೊರೇಟ್ ಗಳಿಗೆ 8,846 ಕೋಟಿ ಸಾಲ ನೀಡಲಾಗಿದೆ.
ಈ ಅಂಶವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ವಲಯವಾರು ಬ್ಯಾಂಕ್ ಸಾಲದ ಮಾಹಿತಿಯಲ್ಲಿ ನೀಡಲಾಗಿದೆ. ಮಾರ್ಚ್ ನಲ್ಲಿ ಸರ್ಕಾರ ಘೋಷಣೆ ಮಾಡಿದ ಪರಿಹಾರ ಪ್ಯಾಕೇಜ್ ಪರಿಣಾಮವಾಗಿ ಇಂಥ ಸಾಲಗಳಲ್ಲಿ ಏರಿಕೆ ಆಗಿದೆ.

ಪ್ಯಾಕೇಜ್ ನಲ್ಲಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. 63 ಲಕ್ಷ ಸ್ವಸಹಾಯ ಸಂಘಗಳಿಗೆ ಸಾಲ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷ ರುಪಾಯಿಗೆ ಏರಿಸಲಾಯಿತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವ್ಯಾಖ್ಯಾನದ ಪ್ರಕಾರ ಸ್ವಸಹಾಯ ಸಂಘಗಳನ್ನು 'ಆರ್ಥಿಕ ದುರ್ಬಲ ವರ್ಗ' ಎಂದು ಪರಿಗಣಿಸಲಾಗುತ್ತದೆ.
ಇನ್ನು ಮಹಿಳಾ ಫಲಾನುಭವಿಗಳಿಗೆ ತಲಾ 1 ಲಕ್ಷ ರುಪಾಯಿ ಸಾಲ, ಪ್ರಧಾನಮಂತ್ರಿ ಜನಧನ್ ಖಾತೆ ಇರುವವರು, ಸಣ್ಣ ಹಿಡುವಳಿಯ ರೈತರಿಗೆ 10 ಸಾವಿರ ರುಪಾಯಿ ತನಕ ಓವರ್ ಡ್ರಾಫ್ಟ್ ಗೆ ಅವಕಾಶ ನೀಡಿದ್ದು, ಅವರನ್ನು ಆರ್ಥಿಕ ದುರ್ಬಲ ವರ್ಗ ಎಂದು ಪರಿಗಣಿಸಲಾಗುತ್ತದೆ.
ಕೊರೊನಾ ಲಾಕ್ ಡೌನ್ ನಿಂದ ಈ ವರ್ಗದವರ ಜೀವನದ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ಸಾಲದ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಇಡೀ ದೇಶದಲ್ಲಿ ಏಪ್ರಿಲ್ ನಲ್ಲಿ ಆರ್ಥಿಕ ಚಟುವಟಿಕೆ ಸ್ತಬ್ಧವಾದರೂ ವಿದ್ಯುತ್, ಪೆಟ್ರೋಲಿಯಂ ಕೇಂದ್ರಿತ ಕೈಗಾರಿಕೆಗಳು ಕಾರ್ಯ ನಿರ್ವಹಣೆ ಬಂಡವಾಳಕ್ಕೆ (ವರ್ಕಿಂಗ್ ಕ್ಯಾಪಿಟಲ್) ಸಾಲ ಪಡೆದಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications