ಬೆಂಗಳೂರು, ಫೆಬ್ರವರಿ 6: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಪ್ರತಿಕೂಲ ಹವಾಮಾನದಿಂದ 46 ವಿಮಾನಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳಗಿನ ವೇಳೆಯಲ್ಲಿ ವಿಮಾನಗಳ ಮಾರ್ಗ ಬದಲಾವಣೆಯಾಗಿವೆ.
ಮಂಜಿನಿಂದಾಗಿ ಅಡಚಣೆಗಳು ಉಂಟಾಗಿವೆ. ವಿಸಿಬಿಲಿಟಿ ಬೆಳಿಗ್ಗೆ ಸುಮಾರು 50 ಮೀಟರ್ಗಳಷ್ಟು ಕಡಿಮೆಯಾಗಿದೆ ಎಂದು ವಿಮಾನ ನಿಲ್ದಾಣದ ನಿರ್ವಾಹಕರು ತಿಳಿಸಿದ್ದಾರೆ. ಬ್ರಿಟಿಷ್ ಏರ್ವೇಸ್ ನಿರ್ವಹಿಸುವ ಅಂತರರಾಷ್ಟ್ರೀಯ ವಿಮಾನ ಮತ್ತು ಸರಕು ಸಾಗಣೆ ವಿಮಾನಗಳು ಪೀಡಿತ ವಿಮಾನಗಳಲ್ಲಿ ಸೇರಿವೆ.

"ದೆಹಲಿ, ಅಹಮದಾಬಾದ್ ಮತ್ತು ಮುಂಬೈನಿಂದ ಆಗಮಿಸಬೇಕಿದ್ದ ಮೂರು ವಿಮಾನಗಳನ್ನು ಚೆನ್ನೈಗೆ ಕಡೆಗೆ ತಿರುಗಿಸಲಾಗಿದೆ" ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಉಂಟಾಗುವ ಪರಿಣಾಮವನ್ನು ಉಲ್ಲೇಖಿಸಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಸಲಹೆಗಳನ್ನು ನೀಡಿವೆ. ಇಂಡಿಗೋ ತನ್ನ ಸಲಹೆಯಲ್ಲಿ ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನಗಳ ಸ್ಥಿತಿಯನ್ನು ಖಚಿತಪಡಿಸಲು ಪ್ರಯಾಣಿಕರಿಗೆ ತಿಳಿಸಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಪ್ರತಿಕೂಲ ಹವಾಮಾನದಿಂದಾಗಿ ಮುಂಬೈನಿಂದ ಬೆಂಗಳೂರಿಗೆ ಯುಕೆ 845 ವಿಮಾನವನ್ನು ಕೊಯಮತ್ತೂರ್ಗೆ ಕಡೆಗೆ ತಿರುಗಿಸಲಾಗಿದೆ. ನಂತರ, ಮಾರ್ಗ ಬದಲಿಸಿದ ವಿಮಾನವು ಕೊಯಮತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ 9:49 ಕ್ಕೆ ಹೊರಟಿತು ಎಂದು ವಿಸ್ತಾರಾ ಸಂಸ್ಥೆ ತಿಳಿಸಿದೆ.'
ಮಧ್ಯಾಹ್ನದ ಮೊದಲು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಹಜ ಸ್ಥಿತಿಗೆ ಮರಳಿದವು. ಭಾರತೀಯ ಹವಾಮಾನ ಇಲಾಖೆ ಹೊರಡಿಸಿದ ಏಳು ದಿನಗಳ ಹವಾಮಾನ ವರದಿಯು ಫೆಬ್ರವರಿ 12 ರವರೆಗಿನ ಅವಧಿಯಲ್ಲಿ ನಗರದಲ್ಲಿ ಮಂಜು ಕವಿದಿದೆ ಎಂದು ಮುನ್ಸೂಚನೆ ನೀಡಿದೆ.
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications