ಕೊರೊನಾವೈರಸ್ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳ ಜಂಘಾಬಲವೇ ಉಡುಗಿ ಹೋಗಿದೆ.
ಅಭಿವೃದ್ದಿಶೀಲ ರಾಷ್ಟ್ರವಾದ ಭಾರತದ ಮೇಲೆ ಕೊರೊನಾ ಬಹಳ ಕೆಟ್ಟ ಪರಿಣಾಮ ಬೀರುತ್ತಿದೆ. ಆರ್ಥಿಕ ಕುಸಿತ, ನಿರುದ್ಯೋಗ, ಬಡತನ ಹೆಚ್ಚಳದಂತಹ ಗಂಭೀರ ಸಮಸ್ಯೆಗಳು ಮತ್ತಷ್ಟು ದೊಡ್ಡದಾಗುತ್ತಿವೆ. ಕುಸಿಯುತ್ತಿರುವ ಆರ್ಥಿಕ ಶಕ್ತಿಯನ್ನು ಎತ್ತಿ ಹಿಡಿಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೀವ್ರ ಹೆಣಗಾಡುತ್ತಿವೆ.
ಎರಡು ತಿಂಗಳಿಗೂ ಹೆಚ್ಚು ದೇಶವೇ ಲಾಕ್ಡೌನ್ ಆಗಿರುವ ಪರಿಣಾಮ ಆರ್ಥಿಕತೆ ಪಾತಾಳಕ್ಕೆ ಕುಸಿಯುವ ಹಂತ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದ ಕುಸಿಯುತ್ತಿರುವ ಆರ್ಥಿಕತೆಯನ್ನು ಎತ್ತಿ ಹಿಡಿಯುವವರಾರು? ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ. ಸದ್ಯದ ಮಟ್ಟಿಗೆ ದೇಶದ ಐದು ರಾಜ್ಯಗಳು ಆ ಕೆಲಸವನ್ನು ಮಾಡಲಿವೆ ಎನ್ನುತ್ತದೆ Elara Securities Inc ವರದಿ.
ಐದು ರಾಜ್ಯಗಳು ಯಾವವು?
ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ಸುಮಾರು 27% ರಷ್ಟು ಕೊಡುಗೆ ನೀಡುವ ಐದು ರಾಜ್ಯಗಳಾದ ಕರ್ನಾಟಕ, ಪಂಜಾಬ್, ತಮಿಳುನಾಡು, ಹರಿಯಾಣ ಮತ್ತು ಕೇರಳದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಸಡಿಲಿಕೆಯ ನಂತರ ಆರ್ಥಿಕ ಚಟುವಟಿಕೆಗಳು ಗರಿಗೆದರಿರುವುದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ಎಂದು ವರದಿ ಹೇಳುತ್ತದೆ.
ಗರಿಗೆದರಿದ ಆರ್ಥಿಕ ಚಟುವಟಿಕೆಗಳು
ವಿದ್ಯುತ್ ಬಳಕೆ, ಜನ ಸಂಚಾರ, ಸಗಟು ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಆಗಮನ ಮತ್ತು ಗೂಗಲ್ ದತ್ತಾಂಶಗಳ ವಿಶ್ಲೇಷಣೆಯ ಆಧಾರದ ಮೇಲೆ ಕರ್ನಾಟಕ, ಪಂಜಾಬ್, ತಮಿಳುನಾಡು, ಹರಿಯಾಣ ಮತ್ತು ಕೇರಳದಲ್ಲಿ ಆರ್ಥಿಕ ಚಟುವಟಿಕೆಗಳು ಉನ್ನತ ಮಟ್ಟದಲ್ಲಿ ಏರುವ ಲಕ್ಷಣ ನೀಡಿವೆ. ಈ ಐದೂ ರಾಜ್ಯಗಳು ದೇಶದ ಆರ್ಥಿಕತೆಯನ್ನು ಮೇಲಕೆತ್ತಲಿವೆ ಎಂದು ವರದಿ ಹೇಳುತ್ತದೆ.
ಹಿಂದುಳಿದ ಮಹಾರಾಷ್ಟ್ರ, ಗುಜರಾತ್
ವ್ಯಾಪಕ ಕೈಗಾರಿಕೆಗಳನ್ನು ಹೊಂದಿರುವ ಹಾಗೂ ಜಿಡಿಪಿ ಕೊಡುಗೆಯಲ್ಲಿ ಮೇಲೆ ಹೇಳಲಾದ ರಾಜ್ಯಗಳಿಗಿಂತಲೂ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಜರ್ಜರಿತವಾಗಿವೆ. ಇನ್ನೂ ಈ ರಾಜ್ಯಗಳಲ್ಲಿ ಲಾಕ್ಡೌನ್ ಸಡಿಲಿಕೆ ಅಷ್ಟೊಂದು ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ ದೇಶದ ಆರ್ಥಿಕತೆಗೆ ಬೆಂಬಲವಾಗಿ ನಿಲ್ಲಲು ಈ ರಾಜ್ಯಗಳು ಹಿಂದುಳಿಯಬಹುದು ಎಂದು ವರದಿ ಹೇಳುತ್ತದೆ.
ಬೇಡಿಕೆ ಮುಂದುವರಿಯುತ್ತದೆ
"ಮುಂಬರುವ ತಿಂಗಳುಗಳಲ್ಲಿ ಬೇಡಿಕೆ ಮುಂದುವರಿಯುತ್ತದೆ. ಅಲ್ಲದೇ ಕೊರೊನಾವೈರಸ್ ನಂತರದ ಬದಲಾವಣೆ ಖಂಡಿತವಾಗಿಯೂ ಆರ್ಥಿಕತೆಗೆ ಹೊಸ ದಿಕ್ಕು ತೋರಿಸುತ್ತದೆ'' ಎಂದು Elara Securities Inc ನ ಗರಿಮಾ ಕಪೂರ್ ಹೇಳುತ್ತಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications