ಬೆಂಗಳೂರು, ಜೂನ್ 27: ಭಾರತೀಯ ಖಾಸಗಿ ಸಾಲದಾತ ಯೆಸ್ ಬ್ಯಾಂಕ್ ತನ್ನ ಪುನರ್ ರಚನೆಯ ಭಾಗವಾಗಿ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸುವ ಮೂಲಕ ತನ್ನ ಸಿಬ್ಬಂದಿ ವರ್ಗಕ್ಕೆ ಬಿಗ್ ಶಾಕ್ ನೀಡಿದೆ. ಮಾತ್ರವಲದೇ ಮುಂದಿನ ದಿನಗಳಲ್ಲಿ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರಿಯಬಹುದು ಎನ್ನಲಾಗಿದೆ.
ಎಕಾನಮಿಕ್ಸ್ ಟೈಮ್ಸ್ ವರದಿ ಪ್ರಕಾರ , ವಜಾಗೊಳಿಸುವಿಕೆಯು ಸಗಟು, ರಿಟೇಲ್ ಬ್ಯುಸಿನೆಸ್ ಮತ್ತು ಗಮನಾರ್ಹವಾಗಿ ಯೆಸ್ ಬ್ಯಾಂಕಿಂಗ್ ಶಾಖೆಯ ಮೇಲೆ ಸೇರಿ ವಿವಿಧ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಯೆಸ್ ಬ್ಯಾಂಕ್ ನ ಈ ನಿರ್ಧಾರ ಮಹತ್ವದಾಗಿದ್ದು, ಹಲವಾರು ವರ್ಷಗಳಲ್ಲಿ ಖಾಸಗಿ ವಲಯದ ಬ್ಯಾಂಕ್ ಗಳಲ್ಲಿ ನೋಡುವುದಾದರೆ ಯೆಸ್ ಬ್ಯಾಂಕ್ ನ ವಜಾಗೊಳಿಸುವಿಕೆ ಮೊದಲ ನಿದರ್ಶನವಾಗಿದೆ. ವಜಾಗೊಂಡ ಉದ್ಯೋಗಿಗಳಿಗೆ ಮೂರು ತಿಂಗಳ ವೇತನಕ್ಕೆ ಸಮನಾದ ಪ್ಯಾಕೇಜ್ ಪಡೆದಿದ್ದಾರೆ ಎಂದು ಕಂಪನಿ ತಿಳಿಸಿದೆ.

"ಯೆಸ್ ಬ್ಯಾಂಕ್ ಬಹುರಾಷ್ಟ್ರೀಯ ಸಲಹೆಗಾರರ ಸಲಹೆಯ ಆಧಾರದ ಮೇಲೆ ಆಂತರಿಕ ಪುನರ್ರಚನಾ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇಲ್ಲಿಯವರೆಗೆ, ಸುಮಾರು 500 ನೌಕರರ ಕೈ ಬಿಡಲಾಗಿದೆ ಮತ್ತು ಮುಂಬರುವ ವಾರಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೈಬಿಡಲಾಗುವುದು ಎಂದು" ಎಂದು ಬಲ್ಲ ಮೂಲಗಳು ಎಕಾನಮಿಕ್ಸ್ ಟೈಮ್ಸ್ ತಿಳಿಸಿರುವುದಾಗಿ ವರದಿಯಾಗಿದೆ.
ವಿಶ್ವಾಸಾರ್ಹ ಮೂಲಗಳ ಪ್ರಕಾರ, ಯೆಸ್ ಬ್ಯಾಂಕ್ ಡಿಜಿಟಲ್ ಬ್ಯಾಂಕಿಂಗ್ ಮೇಲೆ ಕೇಂದ್ರೀಕರಿಸುವ ಮೂಲಕ ಮತ್ತು ಹಸ್ತಚಾಲಿತ ಪ್ರಕ್ರಿಯೆಗಳನ್ನು ಕಡಿಮೆ ಮಾಡುವ ಮೂಲಕ ತನ್ನ ನಿರ್ವಹಣಾ ವೆಚ್ಚಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಹಿಂದಿನ ಹಣಕಾಸು ವರ್ಷದಲ್ಲಿ, ಯೆಸ್ ಬ್ಯಾಂಕ್ ನ ನಿರ್ವಹಣಾ ವೆಚ್ಚವು ಸುಮಾರು 17% ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ. ಹೀಗಾಗಿ ಪ್ರಸುತ ನಡೆಯುತ್ತಿರುವ ಪುನರ್ರಚನೆಯ ಉಪಕ್ರಮವು ಬ್ಯಾಂಕಿನ ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡಲು ಕೊಡುಗೆ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
2020 ರಲ್ಲಿ, ಯೆಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್, ಆರ್ಬಿಐ ಬೆಂಬಲದೊಂದಿಗೆ ಬ್ಯಾಂಕ್ ಕುಸಿಯುವುದನ್ನು ತಡೆಯಲು ಮಧ್ಯಪ್ರವೇಶಿಸಿದಾಗ ಯೆಸ್ ಬ್ಯಾಂಕ್ ಇದೇ ರೀತಿಯ ಪುನರ್ರಚನೆಗೆ ಒಳಗಾಯಿತು. ಆ ಅವಧಿಯಲ್ಲಿ, ಗಮನಾರ್ಹ ಸಂಖ್ಯೆಯ ಹಿರಿಯ ಸಿಬ್ಬಂದಿಗಳು ಬ್ಯಾಂಕ್ನಿಂದ ನಿರ್ಗಮಿಸಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications