ಸೂರತ್, ಜನವರಿ 22: ಸೂರತ್ನ ಹದಿನಾಲ್ಕು ವರ್ಷದ ಬಾಲಕಿಯೊಬ್ಬಳು ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ 52 ಲಕ್ಷ ರೂ. ದೇಣಿಗೆ ನೀಡಿದ್ದಾಳೆ. ಸೂರತ್ ಭಾವಿಕಾ ಮಹೇಶ್ವರಿ ಅವರು ರಾಮ್ ಕಥಾಸ್ ನಡೆಸಿ ಸಂಗ್ರಹಿಸಿದ ಮೊತ್ತವನ್ನು ದೇಣಿಗೆ ನೀಡಿದ್ದಾಳೆ.
ಭಾವಿಕಾ 10 ನೇ ವಯಸ್ಸಿನಲ್ಲಿಯೇ ರಾಮ್ ಕಥಾಗಳನ್ನು ನಡೆಸಲು ಪ್ರಾರಂಭಿಸಿದವರು. ಅವರು ಅದನ್ನು 15 ಕ್ಕೂ ಹೆಚ್ಚು ಬಾರಿ ನಿರೂಪಿಸಿದ್ದಾರೆ. ಅವರು ಕೋವಿಡ್ ಐಸೋಲೇಶನ್ ಸೆಂಟರ್ಗಳು ಮತ್ತು ಲಾಜ್ಪೋರ್ ಜೈಲಿನಂತಹ ಹಲವಾರು ಸ್ಥಳಗಳಲ್ಲಿ ರಾಮ್ ಕಥಾಗಳನ್ನು ನಡೆಸಿದ್ದಾರೆ. ಕಥಾ ಸಂದರ್ಭದಲ್ಲಿ ಜೈಲಿನ ಕೈದಿಗಳು 1 ಲಕ್ಷ ರೂ. ನೀಡಿದ್ದಾರೆ. ಭಾವಿಕಾ ಮಹೇಶ್ವರಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು 'ಸಂಘಷ್ ಸೇ ಶಿಖರ್ ತಕ್' ಎಂಬ ಪುಸ್ತಕವನ್ನು ಬರೆದಿದ್ದಾರೆ.

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ:
ರಾಮಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಆಗಮಿಸಿದ್ದಾರೆ. ಪ್ರಾಣ ಪ್ರತಿಷ್ಠಾ ಸಮಾರಂಭವು ಮಧ್ಯಾಹ್ನ 12:20 ಕ್ಕೆ ಪ್ರಾರಂಭವಾಗಿದೆ, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ನೂತನವಾಗಿ ನಿರ್ಮಿಸಲಾಗಿರುವ ದೇವಾಲಯದಲ್ಲಿ 51 ಅಡಿಯ ರಾಮಲಲ್ಲಾ ವಿಗ್ರಹವನ್ನು ಇಂದು ಪ್ರತಿಷ್ಠಾಪಿಸಲಾತ್ತದೆ.
ಮೋದಿಯವರು ರಾಮಲಲ್ಲಾ ವಿಗ್ರಹವನ್ನು ಅನಾವರಣಗೊಳಿಸುವ ಧಾರ್ಮಿಕ ಕ್ರಿಯೆಯನ್ನು ಮಾಡುತ್ತಾರೆ, ನಂತರ 'ಮಹಾ ಆರತಿ' ಮಾಡುತ್ತಾರೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಗಾಯಕ ಸೋನು ನಿಗಮ್ ಅವರು 'ರಾಮ್ ಸಿಯಾ ರಾಮ್' ಹಾಡಿದ್ದಾರೆ.
ದೇಶಾದ್ಯಂತ ಇರುವ ಭಕ್ತರು ತಮ್ಮ ಮನೆಗಳಲ್ಲಿ ದೀಪಾಲಂಕಾರ ಮಾಡುವ ಮೂಲಕ ರಾಮಮಂದಿರ ಉದ್ಘಾಟನೆಯನ್ನು ದೀಪಾವಳಿಯಂತೆ ಆಚರಿಸುವಂತೆ ಮನವಿ ಮಾಡಲಾಗಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications