5ಜಿ ಸ್ಪೆಕ್ಟ್ರಮ್ ಹರಾಜಿನ ನಾಲ್ಕು ಸುತ್ತುಗಳು ಮಂಗಳವಾರ (ಜುಲೈ 26) ನಡೆದಿದ್ದು, ಐದನೇ ಸುತ್ತು ನಾಳೆ (ಜುಲೈ 27) ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಮತ್ತು ಕ್ಷೇತ್ರಕ್ಕೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಅದಾನಿ ಡೇಟಾ ನೆಟ್ವರ್ಕ್ ಭಾಗಿಯಾಗಿದೆ.
ಮಂಗಳವಾರ ಆನ್ಲೈನ್ ಮೂಲಕ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಈ ಹರಾಜು 600 MHz, 700 MHz, 800 MHz, 900 MHz, 1800 MHz, 2100 MHz, 2300 MHz, 2500 MHz, 3300 MHz ಹಾಗೂ 26 GHz ಅನ್ನು ಬಳಕೆ ಮಾಡುವ ಹಕ್ಕಿಗೆ ಸಂಬಂಧಿಸಿದ್ದು ಆಗಿದೆ.
ಇನ್ನು ಟೆಲಿಕಾಂ ರೆಗ್ಯೂಲೇಟರಿ ಅಥಾರಿಟಿ ಆಫ್ ಇಂಡಿಯಾ ಈಗಾಗಲೇ ಹಲವಾರು ಪ್ರದೇಶದಲ್ಲಿ 5ಜಿ ನೆಟ್ವರ್ಕ್ ಪ್ರಯೋಗ ಆರಂಭ ಮಾಡಿದೆ. ದೆಹಲಿ ವಿಮಾನ ನಿಲ್ದಾಣ, ಬೆಂಗಳೂರು ಮೆಟ್ರೋ, ಭೋಪಾಲ್, ಕಾಂಡ್ಲಾ ಬಂದರಿನಲ್ಲಿ ಈ ಪ್ರಯೋಗವನ್ನು ನಡೆಸಲು ನಿರ್ಧಾರ ಮಾಡಲಾಗಿದೆ. 2023 ಅಥವಾ ಈ ವರ್ಷದಲ್ಲೇ 5ಜಿ ಸ್ಪೆಕ್ಟ್ರಮ್ ಆರಂಭವಾಗುವ ನಿರೀಕ್ಷೆ ಇದೆ.

ಇನ್ನು ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭಾರತ ಶೀಘ್ರದಲ್ಲೇ 5ಜಿ ನೆಟ್ವರ್ಕ್ ಪಡೆಯಲಿದೆ ಎಂದು ಹೇಳಿದ್ದಾರೆ. ಜುಲೈನಲ್ಲಿಯೇ ಬಿಡ್ಡಿಂಗ್ ಪೂರ್ಣ ಮಾಡಲಾಗುತ್ತದೆ ಎಂದು ಕೂಡಾ ತಿಳಿಸಿದ್ದರು. ಈ ಬಿಡ್ನಲ್ಲಿ ವಿಜೇತರಾದ ಸಂಸ್ಥೆಯು 20 ಕಂತಿನ ಮೂಲಕ ಹಣವನ್ನು ಪಾವತಿ ಮಾಡಬಹುದು. ಪ್ರತಿ ವರ್ಷದ ಆರಂಭದಲ್ಲಿ ಮುಂಗಡವಾಗಿ ಪಾವತಿ ಮಾಡಬೇಕಾಗುತ್ತದೆ.
ಈ ಹಿಂದೆ ನಡೆದಿದ್ದ ಹರಾಜು ಪ್ರಕ್ರಿಯೆ
ಇದಕ್ಕೂ ಮುನ್ನ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2021ರಲ್ಲಿ ನಡೆದಿದೆ. 10,000 ಕೋಟಿಯಷ್ಟು ರಿಲಯನ್ಸ್ ಜಿಯೋ ಠೇವಣಿ ಮಾಡಿದ್ದರೆ, ಭಾರ್ತಿ ಏರ್ಟೆಲ್ ಮತ್ತು ವೋಡಾಫೋನ್ ಐಡಿಯಾ ಕ್ರಮವಾಗಿ 3,000 ಕೋಟಿ ರೂಪಾಯಿ ಹಾಗೂ 475 ಕೋಟಿ ರೂಪಾಯಿ ಠೇವಣಿ ಮಾಡಿದೆ. ಎರಡು ದಿನಗಳ ಕಾಲ ಬಿಡ್ ನಡೆದಿದ್ದು, ರಿಲಯನ್ಸ್ ಜಿಯೋ 57,122.65 ಮೌಲ್ಯದಲ್ಲಿ ಬಿಡ್ ಪಡೆದಿದೆ. ಭಾರ್ತಿ ಏರ್ಟೆಲ್ 18,699 ಬಿಡ್ ಮಾಡಿದೆ, ವೋಡಾಫೋನ್ ಐಡಿಯಾ 1,993.40 ಕೋಟಿ ರೂಪಾಯಿ ಬಿಡ್ ಮಾಡಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications