ನವದೆಹಲಿ, ಜನವರಿ.20: ಭಾರತದಲ್ಲಿ ಸಂಚಾರಕ್ಕೆ ರೈಲ್ವೆ ಅಚ್ಚುಮೆಚ್ಚಿನ ವ್ಯವಸ್ಥೆಯಾಗಿದೆ. ದೇಶಾದ್ಯಂತ ರೈಲು ಸಂಚಾರವನ್ನೇ ಅವಲಂಬಿಸಿರುವ ಪ್ರಯಾಣಿಕರೇ ಆಘಾತಕ್ಕೆ ಒಳಗಾಗುವಂತಾ ಸುದ್ದಿಯೊಂದು ಇದೀಗ ಹೊರ ಬಿದ್ದಿದೆ.
ಆನ್ ಲೈನ್ ನಲ್ಲಿ ಬುಕ್ ಮಾಡಿದ ಟಿಕೆಟ್ ಖಾತ್ರಿಯಾಗದೇ ಲಕ್ಷ ಲಕ್ಷ ರೈಲ್ವೆ ರಿಸರ್ವ್ ಟಿಕೆಟ್ ಗಳು ರದ್ದು ಆಗಿವೆ ಎಂದು ಪಿಟಿಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಚಂದ್ರಶೇಖರ್ ಗೌಡ ಎಂಬುವವರು ಆರ್ ಟಿಐ ಅಡಿ ಪಡೆದ ಮಾಹಿತಿಯಲ್ಲಿ ಪ್ರತಿ ತಿಂಗಳು 8 ಲಕ್ಷ ರಿಸರ್ವ್ ಮಾಡಿದ್ದ ರೈಲ್ವೆ ಟಿಕೆಟ್ ಗಳು ಕ್ಯಾನ್ಸಲ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ರೈಲ್ವೆ ಇಲಾಖೆಯೇ ವೇಟಿಂಗ್ ಲಿಸ್ಟ್ ನಲ್ಲಿರುವ ಟಿಕೆಟ್ ಗಳನ್ನು ಕನ್ಫರ್ಮ್ ಮಾಡಲು ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಳೆದ 2019ರ ಎಪ್ರಿಲ್ ನಿಂದ ನವೆಂಬರ್ ಅವಧಿಯಲ್ಲಿ ವೇಟಿಂಗ್ ಲಿಸ್ಟ್ ನಲ್ಲಿದ್ದ 65 ಲಕ್ಷ 68 ಸಾವಿರದ 852 ಟಿಕೆಟ್ ಗಳು ಕನ್ಫರ್ಮ್ ಆಗದೇ ಕ್ಯಾನ್ಸಲ್ ಆಗಿರುವ ಬಗ್ಗೆ ಆರ್ ಟಿಐ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ.

ಟಿಕೆಟ್ ಕನ್ಫರ್ಮ್ ಆಗದಿದ್ದರೆ ಕ್ಯಾನ್ಸಲ್ ಪಕ್ಕಾ:
ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸಲು ಲಕ್ಷಾಂತರ ಪ್ರಯಾಣಿಕರು ಆನ್ ಲೈನ್ ನಲ್ಲಿ ಸೀಟ್ ರಿಸರ್ವ್ ಮಾಡುತ್ತಾರೆ. ಹೀಗೆ ರಿಸರ್ವ್ ಮಾಡಿರುವ ಟಿಕೆಟ್ ಗಳನ್ನು ವೇಟಿಂಗ್ ಲಿಸ್ಟ್ ನಲ್ಲಿ ಇದ್ದರೆ ನಂತರದಲ್ಲಿ ಆ ಟಿಕೆಟ್ ಕನ್ಫರ್ಮ್ ಮೇಷನ್ ಬಗ್ಗೆ ಯಾವುದೇ ಸಂದೇಶಗಳು ಹೋಗುವುದಿಲ್ಲ. ಇದರಿಂದ ಸಾಮಾನ್ಯವಾಗಿ ವೇಟಿಂಗ್ ಲಿಸ್ಟ್ ನಲ್ಲಿರುವ ಟಿಕೆಟ್ ಗಳೆಲ್ಲ ಕ್ಯಾನ್ಸಲ್ ಆಗುತ್ತವೆ. ಟಿಕೆಟ್ ರದ್ದು ಶುಲ್ಕವನ್ನು ಹೊರತುಪಡಿಸಿ ಉಳಿದ ಹಣವನ್ನು ಪ್ರಯಾಣಿಕರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.

ರೈಲ್ವೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆ:
ಮೊದಲಿಗೆ ಹೋಲಿಸಿ ನೋಡಿದಾಗ ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೈಲ್ವೆ ಸಂಚಾರವನ್ನೇ ಹೆಚ್ಚು ಜನರು ಅವಲಂಬಿಸಿದ್ದಾರೆ. ಕೆಲವು ವಿಶೇಷ ರೈಲುಗಳಲ್ಲಿ ಶೇ.150ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚವಾಗಿದ್ದು, ಇದರಿಂದ ಟಿಕೆಟ್ ರಿಸರ್ವೆಶನ್ ನಲ್ಲಿ ಈ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ರೈಲ್ವೆ ಸಂಚಾರ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications