ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚಿಸಲಾಗಿರುವ ತುಟ್ಟಿ ಭತ್ಯೆ (DA) ಹಾಗೂ ತುಟ್ಟಿ ಭತ್ಯೆ ಪರಿಹಾರ (DR) ಕುರಿತು ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರಗಳನ್ನು ಮಾರ್ಚ್ ಮೊದಲ ವಾರ ಕೈಗೊಳ್ಳುವುದಾಗಿ ತಿಳಿಸಿದೆ. ವಿವರ ಇಲ್ಲಿದೆ.
ಬೆಂಗಳೂರು, ಫೆಬ್ರುವರಿ 05: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಹೆಚ್ಚಿಸಲಾಗಿರುವ ತುಟ್ಟಿ ಭತ್ಯೆ (DA) ಹಾಗೂ ತುಟ್ಟಿ ಭತ್ಯೆ ಪರಿಹಾರ (DR) ಹಣವನ್ನುಈಗಾಗಲೇ ಹೆಚ್ಚಿಸಿದೆ. ಈ ಬಗ್ಗೆ ಪ್ರಮುಖ ನಿರ್ಧಾರಗಳನ್ನು ಮಾರ್ಚ್ ಮೊದಲ ವಾರ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.
ಮಾರ್ಚ್ ಮೊದಲ ವಾರ ಒಟ್ಟು 65 ಲಕ್ಷ ಕೇಂದ್ರ ಸರ್ಕಾರಿ ನೌಕರರು ತಟ್ಟಿ ಭತ್ಯೆ ಹಾಗೂ ಸುಮಾರು 48 ಲಕ್ಷ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಪರಿಹಾರ ಕುರಿತು ಸಪ್ಟತೆ ದೊರೆಯಲಿದೆ. ಡಿಎ ಹೆಚ್ಚಳವನ್ನು ಈಗಾಗಲೇ ಸರ್ಕಾರ ಘೋಷಿಸಿದೆ.
ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI) ಪ್ರಕಾರ, ನವೆಂಬರ್ ನಂತರ ಡಿಸೆಂಬರ್ನಲ್ಲಿ ದತ್ತಾಂಶವೊಂದನ್ನು ಬಿಡುಗಡೆ ಆಗಿತ್ತು. ತುಟ್ಟಿಭತ್ಯೆಯಲ್ಲಿ ಲಾಭವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ತಿಳಿಸಲಾಗಿತ್ತು. ವಾಸ್ತವದಲ್ಲಿ ತುಟ್ಟಿ ಭತ್ಯೆಯಲ್ಲಿ ಶೇ. 4 ರಷ್ಟು ಹೆಚ್ಚಳ ಪಡೆಯಲು ಕೇಂದ್ರ ಸಿಬ್ಬಂದಿ ಮತ್ತು ಪಿಂಚಣಿದಾರರು ಕಾಯುತ್ತಿದ್ದಾರೆ.

ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಾಗಬಹುದು
ಕಾರ್ಮಿಕ ಸಚಿವಾಲಯವು ಇತ್ತೀಚೆಗೆ ಡಿಸೆಂಬರ್ 2022 ಕ್ಕೆ ಬಿಡುಗಡೆ ಮಾಡಿದ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI) ನೋಡಿದರೆ ಡಿಎ ನಲ್ಲಿ ನವೆಂಬರ್ ಇಳಿಕೆ ಕಂಡು ಬಂದರೆ, ಜುಲೈನಿಂದ ನವೆಂಬರ್ ವರೆಗೆ ಏರಿಕೆ ಆಗಿದೆ. ಈ ಸೂಚ್ಯಂಕದಡಿ ಡಿಎಯಲ್ಲಿ ಶೇ. 4 ರಷ್ಟು ಹೆಚ್ಚಳ ಅಂದಾಜಿಸಲಾಗಿತ್ತು. ಆದರೆ ಅಷ್ಟು ಆಗದೇ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ.
ಕಳೆದ ಜುಲೈ ತಿಂಗಳ ಡಿಎ ಶೇಕಡಾ 4 ಹೆಚ್ಚಳದ ನಂತರ ಕೇಂದ್ರ ನೌಕರರಿಗೆ ತುಟ್ಟಿಭತ್ಯೆ ಶೇಕಡಾ 38ರಷ್ಟು ಹೆಚ್ಚಾಗಿದೆ. ಶೇ, 3 ರಷ್ಟು ಹೆಚ್ಚಳವಾದರೆ, ಈಗ ಅದು ಶೇ.41ಕ್ಕೆ ಏರಲಿದೆ ಎಂದು ಸಚಿವಾಲಯ ತಿಳಿಸಿದೆ.

ತುಟ್ಟಿಭತ್ಯೆ ಎರಡು ಬಾರಿ ಪರಿಷ್ಕರಣೆ
7ನೇ ಏಳನೇ ವೇತನ ಆಯೋಗದ ಪ್ರಕಾರ ಕೇಂದ್ರ ನೌಕರರ ತುಟ್ಟಿ ಭತ್ಯೆ ಹೆಚ್ಚಳ ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿ ಮತ್ತು ಜುಲೈನಲ್ಲಿ ಹೆಚ್ಚಾಗುತ್ತದೆ. 2023ರ ಜನರಿಯ ತುಟ್ಟಿ ಭತ್ಯೆ ಹೆಚ್ಚಳ ಬಹಿರಂಗಗೊಳ್ಳಲಿದೆ. ಅದು ಕೇಂದ್ರದ ನಿರ್ಧಾರದಿಂದ ಹೊರ ಬೀಳಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications