ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಉಳಿದಿದ್ದ 18 ತಿಂಗಳ ತುಟ್ಟಿ ಭತ್ಯೆ (DA) ಹಣವನ್ನು ಹಲವು ಕಂತುಗಳಲ್ಲಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಎಷ್ಟು ಕಂತುಗಳಲ್ಲಿ ನೀಡಲಿದೆ, ಯಾವಾಗ ಹಣ ಉದ್ಯೋಗಿಗಳ ಕೈ ಸೇರಲಿದೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಉಳಿದಿದ್ದ 18 ತಿಂಗಳ ತುಟ್ಟಿ ಭತ್ಯೆ (DA) ಹಣವನ್ನು ಒಟ್ಟು ಎಂಟು ಕಂತುಗಳಲ್ಲಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಮೂಲಕ ಉದ್ಯೋಗಿಗಳಿಗೆ ಖಷಿಯ ಸುದ್ದಿ ನೀಡಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಸುಮಾರು 18 ತಿಂಗಳ ತುಟ್ಟಿ ಭತ್ಯೆ (DA) ಹಣ ಸಿಕ್ಕಿರಲಿಲ್ಲ. ಈ ಕಾರಣದಿಂದ ಎಲ್ಲ ಬಾಕಿ ಡಿಎ ಹಣ ನೀಡುವಂತೆ ಸಾಕಷ್ಟು ಬಾರಿಸರ್ಕಾರವನ್ನು ನೌಕರರು ಕೇಳುತ್ತಾ ಬಂದಿದ್ದರು. ಆದರೆ ಈ ಬಗ್ಗೆ ಸರ್ಕಾರ ಏನು ತಿಳಿಸಿರಲಿಲ್ಲ. ಇದೀಗ ಡಿಎ ಹಣ ಹೆಚ್ಚಳ ಮಾಡುವ ಜೊತೆಗೆ ಬಾಕಿ ತುಟ್ಟಿ ಭತ್ಯೆ ಹಣವನ್ನು 8 ಕಂತುಗಳಂತೆ ವಿತರಣೆ ಮಾಡುವುದಾಗಿ ಹೇಳಿದೆ.
ಅಷ್ಟೇ ಅಲ್ಲದೇ ಸರ್ಕಾರ ಈಗಾಗಲೇ ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ (DR) ಹಣ ಹೆಚ್ಚಳ ಮಾಡಿದೆ. ಇತ್ತೀಚೆಗಷ್ಟೇ ವಿವಿಧ ರಾಜ್ಯ ಸರ್ಕಾರಗಳಂತೆ ತೆಲಂಗಾಣ ಸರ್ಕಾರವು ನೌಕರರು ಮತ್ತು ಪಿಂಚಣಿದಾರರಿಗೆ ಡಿಎ ಮತ್ತು ಡಿಆರ್ ಘೋಷಿಸಿದೆ. ನೌಕರರಿಗೆ ಏರಿಕೆ ಮಾಡಲಾದ ತುಟ್ಟಿ ಭತ್ಯೆ ಮುಂದಿನ ತಿಂಗಳು ಹೋಳಿ ಹಬ್ಬದ ಸಂದರ್ಭದಲ್ಲಿ ಕೈ ಸೇರುವ ನಿರೀಕ್ಷೆ ಇದೆ.

ಮುಂದಿನ ಮಾರ್ಚ್ಗೆ ಡಿಎ ಏರಿಕೆ
ಕೇಂದ್ರ ಸರ್ಕಾರ ಸುಮಾರು ಒಂದು ಕೋಟಿ ಕೇಂದ್ರದ ನೌಕರರಿಗೆ ತುಟ್ಟಿ ಭತ್ಯೆ ಹಣವನ್ನು ಜನವರಿಗೆ ಹೆಚ್ಚಳ ಮಾಡಿ ಘೋಷಿಸಿದೆ. ಪ್ರತಿ ವರ್ಷ ಎರಡು ಬಾರಿ ಅಂದರೆ ಜನವರಿ ಮತ್ತು ಜುಲೈ ತಿಂಗಳಿಗೆ ಹೆಚ್ಚಿಸಲಾಗುತ್ತದೆ. ಅದೇ ರೀತಿ ನೀರಿಕ್ಷೆಯಂತೆ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪಿಂಚಣಿದಾರರಿಗೆ ಡಿಆರ್ ಪರಿಹಾರ ಹಣ ಮಾರ್ಚ್ಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಎಂಟು ಕಂತುಗಳಲ್ಲಿ ಬಾಕಿ ಡಿಆರ್ ಹಣವನ್ನು ಒಟ್ಟು 4.4 ಲಕ್ಷ ನೌಕರರು ಪಡೆದರೆ, ಡಿಯರ್ನೆಸ್ ಪರಿಹಾರವನ್ನು ಒಟ್ಟು ಸುಮಾರು 2.28 ಲಕ್ಷ ಪಿಂಚಣಿದಾರರು ಪಡೆಯಲಿದ್ದಾರೆ. ಸರ್ಕಾರ ನೀಡಿದ ಅಂಕಿಅಂಶಗಳ ಪ್ರಕಾರ, ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ಡಿಎ ಶೇ. 2.73 ರಷ್ಟು ಏರಿಕೆ ಆಗಿದೆ ಎಂದು ತಿಳಿದು ಬಂದಿದೆ. ಶೀಘ್ರವೇ ಈ ಹಣ ಅರ್ಹರ ಖಾತೆಗೆ ಜಮೆಯಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications