ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ ಏರಿಕೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕೇಂದ್ರ ಸರ್ಕಾರವು 7ನೇ ವೇತನ ಆಯೋಗದಡಿಯಲ್ಲಿ ತುಟ್ಟಿಭತ್ಯೆಯನ್ನು ಏರಿಕೆ ಮಾಡುವ ಸಾಧ್ಯತೆಯಿದೆ. ಒಂದು ಕೋಟಿ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡುವ ನಿರೀಕ್ಷೆಯಿದೆ.
ಈ ನಡುವೆ ಈ ರಾಜ್ಯದಲ್ಲಿ ತುಟ್ಟಿಭತ್ಯೆಯನ್ನು (ಡಿಎ) ಏರಿಕೆ ಮಾಡಲಾಗುತ್ತಿದೆ. ಹೌದು, ಪಶ್ಚಿಮ ಬಂಗಾರ ಸರ್ಕಾರವು ತನ್ನ ರಾಜ್ಯದಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಏರಿಕೆ ಮಾಡಲು ನಿರ್ಧಾರ ಮಾಡಿದೆ. ಪಶ್ಚಿಮ ಬಂಗಾಳ ಸರ್ಕಾರವು ಶೇಕಡ 3ರಷ್ಟು ತುಟ್ಟಿಭತ್ಯೆಯನ್ನು ಏರಿಸಿದೆ.
ಪಶ್ಚಿಮ ಬಂಗಾಳ ಸರ್ಕಾರದ ಸಚಿವೆವವ ಚಂದ್ರಿಮಾ ಭಟ್ಟಾಚಾರ್ಯ ತುಟ್ಟಿಭತ್ಯೆ ಏರಿಕೆ ಮಾಡಲಾಗುವ ಘೋಷಣೆ ಮಾಡು ನಿರ್ಧಾರ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ನೌಕರರಿಗೆ ಡಿಎ ಅನ್ನು ಸರ್ಕಾರವು ಶೇಕಡ 3ರಷ್ಟು ಏರಿಸಿದ್ದು ನೂತನ ಡಿಎ ಮಾರ್ಚ್ನಿಂದ ಜಾರಿಗೆ ಬರುತ್ತದೆ.

ಬಜೆಟ್ ವೇಳೆ ಹಲವಾರು ಘೋಷಣೆ ಮಾಡಿದ ಸಚಿವೆ
ಪಶ್ಚಿಮ ಬಂಗಾಳ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಬುಧವಾರ ಹಣಕಾಸು ವರ್ಷ 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಸ್ಥಳೀಯ ಪ್ರದೇಶ ಡೆವಲಪ್ಮೆಂಟ್ಗಾಗಿ ಶಾಸಕರುಗಳಿಗೆ ವಾರ್ಷಿಕ ಫಂಡ್ ಹಂಚಿಕೆಯನ್ನು ಕೂಡಾ ಘೋಷಣೆ ಮಾಡಿದ್ದಾರೆ. ವಿಧಾಯಕ ಎಲಾಕಾ ಉನ್ನಾಯನ್ ಪ್ರಕ್ಲಾಪ್ ಅಡಿಯಲ್ಲಿ ಘೋಷಣೆ ಮಾಡಲಾಗಿದೆ. ಹಣಕಾಸು ವರ್ಷದಲ್ಲಿ ನಿಧಿಯನ್ನು 60 ಲಕ್ಷ ರೂಪಾಯಿಯಿಂದ 70 ಲಕ್ಷ ರೂಪಾಯಿಗೆ ಏರಿಸಿದ್ದಾರೆ.
ನವೆಂಬರ್ 2022ರಲ್ಲಿ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಿ ನೌಕರರು ಪಶ್ಚಿಮ ಬಂಗಾಳ ವಿಧಾನಸಭೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಡಿಎ ಏರಿಕೆ ಮಾಡುವ ಆಗ್ರಹವನ್ನು ಸರ್ಕಾರಿ ನೌಕರರು ಮಾಡಿದ್ದಾರೆ. ಇದಾದ ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ನೌಕರರು ಈ ನಿರ್ಧಾರವನ್ನು ಮಾಡಿದ್ದಾರೆ. ಕೇಂದ್ರ ಸರ್ಕಾರವು ಡಿಎ ಏರಿಕೆ ಮಾಡಬೇಕು ಎಂಬುವುದು ಕೂಡಾ ಬೇಡಿಕೆಯಾಗಿದೆ. 7ನೇ ವೇತನ ಆಯೋಗ ಜಾರಿ ಮಾಡಲಾದ ಬಳಿಕ ಪಶ್ಚಿಮ ಬಂಗಾಳ ಸರ್ಕಾರವು ಈವರೆಗೆ ಪರಿಷ್ಕೃತ ತುಟ್ಟಿಭತ್ಯೆಯನ್ನು ಪಾವತಿ ಮಾಡಿಲ್ಲ ಎಂದು ಕೂಡಾ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಿ ನೌಕರರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಒಂದು ಕೋಟಿ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡುವ ನಿರೀಕ್ಷೆಯಿದೆ. ತುಟ್ಟಿಭತ್ಯೆಯು ಶೇಕಡ 38ರಿಂದ ಶೇಕಡ 42ಕ್ಕೆ ಏರಿಸುವ ನಿರೀಕ್ಷೆಯಿದೆ. ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದರೆ, ಜನವರಿ 1, 2023ರಿಂದ ಜಾರಿಗೆ ಬರಲಿದೆ. ಇನ್ನು ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಡಿಯರೆನ್ಸ್ ರಿಲೀಫ್ ಅನ್ನು (ಡಿಆರ್) ಕೂಡಾ ಘೋಷಣೆ ಮಾಡುವ ನಿರೀಕ್ಷೆಯಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications