ಹೊಸ ವರ್ಷಕ್ಕೆ ಏಳನೇ ವೇತನ ಆಯೋಗದಡಿ ಕೇಂದ್ರ ಸರ್ಕಾರಿ ನೌಕರರು ತುಟ್ಟಿ ಭತ್ಯೆ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಆದಷ್ಟು ಶೀಘ್ರವೇ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಲಿದೆ. ಜೊತೆಗೆ ಪ್ರಸ್ತುತ ಫಿಟ್ಮೆಂಟ್ ಅಂಶದ ದರವನ್ನು ಹೆಚ್ಚಿಸಲು ಸರ್ಕಾರ ಒಲವು ತೋರುತ್ತ
ಬೆಂಗಳೂರು, ಜನವರಿ 24: ಹೊಸ ವರ್ಷಕ್ಕೆ ಏಳನೇ ವೇತನ ಆಯೋಗದಡಿ ಕೇಂದ್ರ ಸರ್ಕಾರಿ ನೌಕರರು ತುಟ್ಟಿ ಭತ್ಯೆ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಆದಷ್ಟು ಶೀಘ್ರವೇ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಲಿದೆ. ಜೊತೆಗೆ ಪ್ರಸ್ತುತ ಫಿಟ್ಮೆಂಟ್ ಅಂಶದ ದರವನ್ನು ಹೆಚ್ಚಿಸಲು ಸರ್ಕಾರ ಒಲವು ತೋರುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರಿ ನೌಕರರ ಸಂಘಟನೆಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ದೊರೆತ ಅಂಕಿಅಂಶಗಳ ಪ್ರಕಾರ ಈಗಾಗಲೇ ಎರಡು ಭಾರಿ ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಲಾಗುತ್ತದೆ. ಜನವರಿ ಹಾಗೂ ಜುಲೈ ತಿಂಗಳಲ್ಲಿ ಏರಿಕೆ ಮಾಡಲಾಗುತ್ತದೆ. ಈ ಕಾರಣಕ್ಕೆ ಫೆಬ್ರುವರಿಗೆ ತುಟ್ಟಿ ಭತ್ಯೆ ನಿರೀಕ್ಷೆಯಲ್ಲಿ ನೌಕರರು ಇದ್ದಾರೆ.
ಹಣದುಬ್ಬರ ಗ್ರಾಫ್ ಪ್ರಕಾರ ಕೇಂದ್ರ ಉದ್ಯೋಗಿಗಳ ತುಟ್ಟಿಭತ್ಯೆ (ಡಿಎ ಹೆಚ್ಚಳ) ನಡೆಯುತ್ತಿರುವ ವರ್ಷದಲ್ಲಿ 3 ಪ್ರತಿಶತದಷ್ಟು ಬೆಳೆಯಬಹುದು ಎನ್ನಲಾಗಿದೆ. ಜನವರಿ 2020 ರಿಂದ ಜೂನ್ 2021 ರವರೆಗಿನ ನೌಕರರ ಡಿಎ ನೀಡುವುದು ಬಾಕಿ ಇದೆ. ಅದನ್ನು ಸರ್ಕಾರ ನೀಡಬೇಕಿದ್ದು, ಈ ಬಗ್ಗೆ ನೌಕರರ ಸಂಘಟನೆಗಳು ಒತ್ತಾಯಿಸಿವೆ. ಇತ್ತೀಚಿನ ನವೀಕರಣದಿಂದಾಗಿ ಸರ್ಕಾರ ನೌಕರರಿಗೆ 18 ತಿಂಗಳ ಬಾಕಿಯಿರುವ ಮೊತ್ತವನ್ನು ನೀಡಲು ನೀರ್ಧರಿಸುವ ಸಾಧ್ಯತೆ ಇದೆ.

2023ರ ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಆಯವ್ಯಯದ ಬಳಿಕ ಪ್ರಸಕ್ತ ಫಿಟ್ಮೆಂಟ್ ಅಂಶವನ್ನು ಹೆಚ್ಚಳ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಫಿಟ್ಮೆಂಟ್ ಅಂಶದ ದರ ಶೇ.2.6ರಿಂದ ಶೇಕಡಾ 3.7ಕ್ಕೆ ಏರಿಕೆ ಮಾಡಲು ಸಂಘಟನೆಗಳ ಸದಸ್ಯರು, ನೌಕರರು ಆಗ್ರಹಿಸಿದ್ದಾರೆ.
ಸರ್ಕಾರ ಒಂದು ವೇಳೆ ಫಿಟ್ಮೆಂಟ್ ಹೆಚ್ಚಿಸಿದ್ದೇ ಆದರೆ ಸಿಬ್ಬಂದಿಯ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. ಹೆಚ್ಚಳದ ನಂತರ ಮೂಲ ವೇತನ 18,000 ರೂ.ನಿಂದ 26,000 ರೂಪಾಯಿವರೆಗೆ ಹೆಚ್ಚಾಗುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ಕಳೆದ ಬಾರಿ 2016 ರಲ್ಲಿ ಫಿಟ್ಮೆಂಟ್ ಅಂಶ ಹೆಚ್ಚಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications