ಲಾಕ್ಡೌನ್ ಸಮಯದಲ್ಲಿ ನಗರ ಪ್ರದೇಶಗಳಲ್ಲಿನ 10 ಕಾರ್ಮಿಕರಲ್ಲಿ ಎಂಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಮತ್ತು ಗ್ರಾಮೀಣ ಭಾರತದ 10 ಜನರಲ್ಲಿ 6 ಉದ್ಯೋಗ ನಷ್ಟವಾಗಿದೆ ಎಂದು ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾಲಯ (ಎಪಿಯು) ನಡೆಸಿದ ಸಮೀಕ್ಷೆಯೊಂದು ತಿಳಿಸಿದೆ.
ಅದೇ ಸಮಯದಲ್ಲಿ ಸರ್ಕಾರದ ನಗದು ಸವಲತ್ತುಗಳ ವರ್ಗಾವಣೆ, ನಗರ ಪ್ರದೇಶದ ಸುಮಾರು ಮೂರನೇ ಒಂದು ಭಾಗದಷ್ಟು ದುರ್ಬಲ ಕುಟುಂಬಗಳಿಗೆ (36%) ತಲುಪಿದೆ, ಹಾಗೆಯೇ ಗ್ರಾಮೀಣ ಭಾಗದ ಅರ್ಧದಷ್ಟು ಕುಟುಂಬಗಳು ಅಂತಹ ಪ್ರಯೋಜನವನ್ನು ಪಡೆದಿವೆ ಎಂದು ಸಮೀಕ್ಷೆ ಹೇಳಿದೆ.

ಎಪಿಯು ಭಾರತದ 12 ರಾಜ್ಯಗಳಲ್ಲಿ 4000 ಕಾರ್ಮಿಕರ ನಡುವೆ ನಡೆಸಿದ ಸಮೀಕ್ಷೆಯಲ್ಲಿ, ಜಮೀನು ಹೊಂದಿರುವ 688 ರೈತರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಪಿಎಂ-ಕಿಸಾನ್ ಯೋಜನೆಯ ಮೂಲಕ ನಗದು ವರ್ಗಾವಣೆಯನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಇನ್ಸ್ಟಿಟ್ಯೂಟ್ನಿಂದ ಸಮೀಕ್ಷೆ ನಡೆಸಿದ ಕಾರ್ಮಿಕರು ಮತ್ತು ರೈತರ ಅಭಿಪ್ರಾಯದಂತೆ 500 ರುಪಾಯಿ ತಮ್ಮ ಎರಡು ಮೂರು ದಿನಗಳ ಗಳಿಕೆಯಾಗಿದೆ. ಆದರೆ ಸುಮಾರು 45 ದಿನಗಳವರೆಗೆ ಲಾಕ್ಡೌನ್ ಆಗಿರುವುದರಿಂದ ಮುಂದಿನ ಎರಡು ತಿಂಗಳವರೆಗೆ ಅವರಿಗೆ ಕನಿಷ್ಠ 7000 ರುಪಾಯಿಗಳನ್ನು ನೀಡಬೇಕೆಂದು ಸಂಸ್ಥೆ ಸೂಚಿಸಿದೆ.
ಎಪಿಯು ಸಮೀಕ್ಷೆಯ ಪ್ರಕಾರ, ಲಾಕ್ ಡೌನ್ ಸಮಯದಲ್ಲಿ 90 ಪರ್ಸೆಂಟ್ಕ್ಕಿಂತ ಹೆಚ್ಚು ನಗರ ರೈತರು ತಮ್ಮ ಉತ್ಪನ್ನಗಳನ್ನು ಪೂರ್ಣ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗಲಿಲ್ಲ. ಮತ್ತು ಗ್ರಾಮೀಣ ಭಾರತದ ಸುಮಾರು 88 ಪರ್ಸೆಂಟ್ ರೈತರು ಪೂರ್ಣ ಬೆಲೆ ಪಡೆಯಲು ವಿಫಲರಾಗಿದ್ದಾರೆ.
ಸುಮಾರು 80 ಪರ್ಸೆಂಟ್ ನಗರ ಕುಟುಂಬಗಳು ಮೊದಲಿಗಿಂತ ಕಡಿಮೆ ಆಹಾರವನ್ನು ಸೇವಿಸಿವೆ ಎಂದು ಸಮೀಕ್ಷೆ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications