ಭಾರತದಲ್ಲಿ ಎರಡು ಲಕ್ಷ ಉದ್ಯೋಗಿಗಳನ್ನು ಹೊಂದಿರುವ ಆಕ್ಸೆಂಚರ್ ಕಂಪೆನಿಯು ಕನಿಷ್ಠ 10,000 ಮಂದಿಯನ್ನು ಕೆಲಸದಿಂದ ತೆಗೆಯುವ ಬಗ್ಗೆ ತಿಳಿಸಿದೆ. ಜಾಗತಿಕವಾಗಿ ಆಕ್ಸೆಂಚರ್ ಗೆ ಐದು ಲಕ್ಷ ಮಂದಿ ಉದ್ಯೋಗಿಗಳು ಇದ್ದಾರೆ. ಈ ವರ್ಷದ ಅಪ್ರೈಸಲ್ ಪ್ರಕ್ರಿಯೆ ನಡೆಯುತ್ತಿದ್ದು, ಅದು ಮುಗಿದ ನಂತರ ಹಲವು ಸಾವಿರ ಮಂದಿಯನ್ನು ಕೆಲಸ ಬಿಡುವಂತೆ ಹೇಳುವ ಸೂಚನೆ ನೀಡಲಾಗಿದೆ.
ಆಕ್ಸೆಂಚರ್ ಸಿಇಒ ಜೂಲಿ ಸ್ವೀಟ್ ಮಂಗಳವಾರ ಮಾತನಾಡಿ, ಸಾಮಾನ್ಯವಾಗಿ ವರ್ಷಕ್ಕೆ ಐದು ಪರ್ಸೆಂಟ್ ಮಂದಿ ಬದಲಾವಣೆ ಮಾಡುತ್ತೇವೆ. ಆದರೆ ಬದಲಿಯಾಗಿ ನೇಮಕಾತಿ ಕೂಡ ಮಾಡಿಕೊಳ್ಳುತ್ತೇವೆ. ಆದರೆ ಈ ಬಾರಿ ಸನ್ನಿವೇಶ ಬೇರೆ ಇದೆ. ಆದ್ದರಿಂದ ಬೇಡಿಕೆ ಇಲ್ಲ. ಆದ್ದರಿಂದ ಅಷ್ಟೇ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ತೆಗೆಯುತ್ತೇವೆ. ಆದರೆ ಅದಕ್ಕೆ ಬದಲಿಯಾಗಿ ನೇಮಕಾತಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ.
ಐದು ಪರ್ಸೆಂಟ್ ಎಂಬ ಲೆಕ್ಕಾಚಾರದಲ್ಲಿ ಹೇಳುವುದಾದರೆ ಭಾರತದಲ್ಲಿ ಹತ್ತು ಸಾವಿರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಬಹುದು. ಈ ಬಗ್ಗೆ ಆಕ್ಸೆಂಚರ್ ವಕ್ತಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇದು ಪ್ರತಿ ವರ್ಷದ ಪ್ರಕ್ರಿಯೆ. ಈ ವರ್ಷ ಕೂಡ ಪರ್ಫಾರ್ಮೆನ್ಸ್ ಇಲ್ಲದ 5% ಉದ್ಯೋಗಿಗಳನ್ನು ತೆಗೆಯುತ್ತೇವೆ. ಇದರ ಜತೆಗೆ ದೀರ್ಘಾವಧಿಗೆ ನಮ್ಮ ವ್ಯವಹಾರ ಮುನ್ನಡೆಸಲು ಬೇಕಾದ ವ್ಯವಸ್ಥೆ ಮಾಡುತ್ತೇವೆ. ನೇಮಕಾತಿ ಮಾಡುತ್ತೇವೆ. ಈಚೆಗೆ ಕೂಡ ನಮ್ಮಲ್ಲಿ ಹಲವರಿಗೆ ಬೋನಸ್ ಹಾಗೂ ಪ್ರಮೋಷನ್ ನೀಡಿದ್ದೇವೆ ಎಂದಿದ್ದಾರೆ.

ಕೊರೊನಾ ಬಿಕ್ಕಟ್ಟು ಕಾಣಿಸಿಕೊಂಡ ಮೇಲೆ ಆಕ್ಸೆಂಚರ್ ಆದಾಯ ಕೂಡ ಹೊಡೆತ ಬಿದ್ದಿದೆ. ಆಕ್ಸೆಂಚರ್ ನಿಂದ ಐ.ಟಿ. ಸರ್ವೀಸ್, ಬಿಪಿಒ ಮತ್ತಿತರ ಸೇವೆಗಳನ್ನು ಒದಗಿಸಲಾಗುತ್ತಿದೆ. ಕಂಪೆನಿಯ ಆದಾಯದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ದೃಷ್ಟಿಯಲ್ಲಿ ವೆಚ್ಚವನ್ನು ಕಡಿತ ಮಾಡುವುದು ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications