ನವದೆಹಲಿ, ಸೆಪ್ಟೆಂಬರ್ 17: ಹಸಿರು ಇಂಧನ, ಸೌರ ಮತ್ತು ಪವನ ವಲಯದ ಯೋಜನೆಗಳಲ್ಲಿ 4 ಲಕ್ಷ ಕೋಟಿ. ರೂ ಹೂಡಿಕೆ ಮಾಡುವುದಾಗಿ ಅದಾನಿ ಸಮೂಹವು 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ಪೋ (ರೀ-ಇನ್ವೆಸ್ಟ್) 2024 ಕಾರ್ಯಕ್ರಮದಲ್ಲಿ ಘೋಷಿಸಿದೆ.
ಗುಜರಾತ್ನ ಗಾಂಧಿನಗರ ಜಿಲ್ಲೆಯಲ್ಲಿ ಇಂಧನ ಹೂಡಿಕೆದಾರರ ಸಭೆ (ರೀ-ಇನ್ವೆಸ್ಟ್) 2024 ಸಭೆ ನಡೆಯುತ್ತಿದ್ದು, ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂಎನ್ಆರ್ಇ) ಆಯೋಜಿಸಿರುವ ಮೂರು ದಿನಗಳ ಸಮ್ಮೇಳನವು ಸರ್ಕಾರ, ಕೈಗಾರಿಕೆ ಮತ್ತು ಹಣಕಾಸು ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳು ಸೇರಿದಂತೆ 10,000 ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಸೆಳೆಯುವ ನಿರೀಕ್ಷೆಯಿದೆ. ಸೌರ, ಪವನ ಮತ್ತು ಹಸಿರು ಹೈಡ್ರೋಜನ್ನಂತಹ ನವೀಕರಿಸಬಹುದಾದ ಇಂಧನ ಯೋಜನೆಗಳಲ್ಲಿ ರೂ 4,05,800 ಕೋಟಿ ಹೂಡಿಕೆಯನ್ನು ಅದಾನಿ ಗ್ರೂಪ್ ರೀ-ಇನ್ವೆಸ್ಟ್ ಕಾರ್ಯಕ್ರಮದಲ್ಲಿ ವಾಗ್ದಾನ ಮಾಡಿದೆ.
ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (AGEL) ಮತ್ತು ಅದಾನಿ ನ್ಯೂ ಇಂಡಸ್ಟ್ರೀಸ್ ಲಿಮಿಟೆಡ್ (ANIL) ಸಮೂಹ ಸಂಸ್ಥೆಗಳು, 2030 ರ ವೇಳೆಗೆ ನವೀಕರಿಸಬಹುದಾದ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾಗಿ ಈ ಹಿಂದೆ ತಿಳಿಸಿತ್ತು.
ಭಾರತದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಕಂಪನಿಯಾದ ಅದಾನಿ ಗ್ರೀನ್ ಎನರ್ಜಿ ಪ್ರಸ್ತುತ 11.2 ಗಿಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಕಾರ್ಯಾಚರಣೆಯ ಸಾಮರ್ಥ್ಯ ಹೊಂದಿದ್ದು 2030 ರ ವೇಳೆಗೆ 50 ಗಿಗಾ ವ್ಯಾಟ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಅದಾನಿ ನ್ಯೂ ಇಂಡಸ್ಟ್ರೀಸ್ 10 ಗಿಗಾ ವ್ಯಾಟ್ ಸೌರ ಉತ್ಪಾದನಾ ಘಟಕ, 5 ಗಿಗಾ ವ್ಯಾಟ್ ಪವನ ಉತ್ಪಾದನೆ, 10 ಗಿಗಾ ವ್ಯಾಟ್ ಹಸಿರು ಹೈಡ್ರೋಜನ್ ಉತ್ಪಾದನೆ (ಗ್ರೀನ್ ಹೈಡ್ರೋಜನ್: 0.5 MMTPA, ಗ್ರೀನ್ ಅಮೋನಿಯಾ 2.8 MMTPA) ಮತ್ತು 5 ಗಿಗಾ ವ್ಯಾಟ್ ಎಲೆಕ್ಟ್ರೋಲೈಸರ್ ಉತ್ಪಾದನೆಯನ್ನು ಸ್ಥಾಪಿಸುತ್ತದೆ. 4,05,800 ಕೋಟಿ ರೂ. ಹೂಡಿಕೆಯಿಂದ ಸುಮಾರು 71,100 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಕಂಪನಿ ತಿಳಿಸಿದೆ.
ಇನ್ನು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದ ಪ್ರಧಾನಿ ಮೋದಿ" , 140 ಕೋಟಿ ಭಾರತೀಯರು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. 21 ನೇ ಶತಮಾನದ ಇತಿಹಾಸವನ್ನು ಬರೆಯುವಾಗ, ಭಾರತದ ಸೌರ ಕ್ರಾಂತಿಯ ಅಧ್ಯಾಯವು ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ. ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ, ನಾವು ದೇಶದ ಕ್ಷಿಪ್ರ ಪ್ರಗತಿಗಾಗಿ ಪ್ರತಿಯೊಂದು ವಲಯ ಮತ್ತು ಅಂಶವನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ. ಭಾರತವು ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ಮೂಲವನ್ನು ಸಿದ್ಧಪಡಿಸುತ್ತಿದೆ. ನಮಗೆ ಹಸಿರು ಭವಿಷ್ಯ ಕೇವಲ ಅಲಂಕಾರಿಕ ಪದಗಳಲ್ಲ. ಇವು ದೇಶದ ಅವಶ್ಯಕತೆಗಳು ಮತ್ತು ಅದನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಅಯೋಧ್ಯೆ ಮತ್ತು ಇತರ 16 ನಗರಗಳನ್ನು ಮಾದರಿ ಸೌರ ನಗರಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications