ನವದೆಹಲಿ, ಏಪ್ರಿಲ್ 9: ಭಾರತದಲ್ಲಿ ಕೈಗಾರಿಕೆಗಳ ಬೆಳವಣಿಗೆ ಅತಿ ವೇಗವಾಗಿ ನಡೆಯುತ್ತಿದ್ದು, ಹೀಗಾಗಿ ವಿದ್ಯುತ್ ಮತ್ತು ಇಂಧನದ ಅಗತ್ಯತೆ ಕೂಡ ಹೆಚ್ಚಾಗುತ್ತಿದೆ. ಬೆಳೆಯುತ್ತಿರುವ ಈ ಜನಸಂಖ್ಯೆಗೆ ಅನುಗುಣವಾಗಿ ಈಗಿನ ಪರಿಸ್ಥಿತಿಯಲ್ಲಿ ಇಂಧನ ಬೇಡಿಕೆ ಪೂರೈಕೆ ಮಾಡಲು, ನವೀಕರಿಸಬಹುದಾದ ಇಂಧನ ಕ್ಷೇತ್ರವೇ ಆಧಾರ. ಇದೇ ಕಾರಣಕ್ಕೆ ಅದಾನಿ ಸಮೂಹ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಭಾರತದಲ್ಲಿ ಈಗ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಿಸ್ತರಣೆಗೆ ಅದಾನಿ ಸಮೂಹದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜೊತೆಗೆ ಅದಾನಿ ಸಮೂಹ ತನ್ನ ಒಡೆತನದ ಸೌರ & ಪವನ ವಿದ್ಯುತ್ ಘಟಕಗಳ ಸಾಮರ್ಥ್ಯ ಹೆಚ್ಚಿಸಲು ನಿರ್ಧರಿಸಿದೆ. ಇದೇ ಹಿನ್ನೆಲೆಯಲ್ಲಿ ಮುಂದಿನ 7 ವರ್ಷಗಳವರೆಗೆ ಒಟ್ಟು ₹2.3 ಲಕ್ಷ ಕೋಟಿ ಬಂಡವಾಳ ಹೂಡಲು ತೀರ್ಮಾನಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ. ವ್ಯಾಪಾರದ ನೆಲೆ ವೃದ್ಧಿಗೆ ಒತ್ತು ನೀಡುವುದೇ ಇದರ ಉದ್ದೇಶ ಎನ್ನಲಾಗಿದೆ.

30 ಗೀಗಾವಾಟ್ ಸಾಮರ್ಥ್ಯದ ಗುರಿ
ಅದಾನಿ ಸಮೂಹಕ್ಕೆ ಈ ವಿಚಾರದಲ್ಲಿ ಮತ್ತೊಂದು ಬಲ ಕೂಡ ಇದೆ. ಹೀಗೆ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಭಾರತದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಕಂಪನಿ ಆಗಿದ್ದು, ಗುಜರಾತ್ನ ಕಛ್ ಪ್ರದೇಶದ ಖಾವ್ಡಾದಲ್ಲಿ ಸೌರ & ಪವನ ವಿದ್ಯುತ್ ಘಟಕಗಳನ್ನು ಹೊಂದಿದೆ. ಇಲ್ಲಿ 2 ಗೀಗಾವಾಟ್ ವಿದ್ಯುತ್ ಉತ್ಪಾದನೆ ಕೂಡ ನಡೆಯುತ್ತಿರುವುದು ಗಮನಾರ್ಹ ಸಂಗತಿ. ಈಗಿನ ಸಾಮರ್ಥ್ಯವನ್ನು 30 ಗೀಗಾವಾಟ್ ಸಾಮರ್ಥ್ಯಕ್ಕೆ ಹೆಚ್ಚಿಗೆ ಮಾಡಲು ಈಗ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ಕಾರ್ಯಕ್ಕೆ ಇದೀಗ ₹1.5 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆಯಂತೆ.
₹50 ಸಾವಿರ ಕೋಟಿ ಬಂಡವಾಳ
ಈ ಯೋಜನೆಗಳ ಜೊತೆಯಲ್ಲೇ ಭಾರತದ ಬೇರೆ ಸ್ಥಳದಲ್ಲಿ, ₹50 ಸಾವಿರ ಕೋಟಿ ಬಂಡವಾಳ ಹೂಡಿಕೆ ಮೂಲಕ 6 ರಿಂದ 7 ಗೀಗಾವಾಟ್ ಸಾಮರ್ಥ್ಯದ ಘಟಕದ ಸ್ಥಾಪನೆಗೂ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದಾನಿ ನ್ಯೂ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಅದಾನಿ ಎಂಟರ್ಪ್ರೈಸಸ್ಗೆ ಸೇರಿದ ಘಟಕ ಇದಾಗಿದೆ. ಇದು ಗುಜರಾತ್ನ ಮುಂದ್ರಾದಲ್ಲಿ ಸೌರ ಫಲಕಗಳು ಹಾಗೂ ವಿಂಡ್ ಟರ್ಬೈನ್ ತಯಾರಿಸುತ್ತಿದೆ. ಇದರ ಸಾಮರ್ಥ್ಯ ವಿಸ್ತರಿಸಲು ₹30 ಸಾವಿರ ಕೋಟಿಯ ಹೂಡಿಕೆ ಮಾಡಲು ಈಗ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತದ ಇಂಧನ ಕ್ಷೇತ್ರ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರನ್ನು ಗಳಿಸುತ್ತಿದೆ. ಈ ನಡುವೆ ದೇಶದಲ್ಲೂ ಇಂಧನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಎಲ್ಲಾ ಕಾರಣಕ್ಕೆ ನವೀಕರಿಸಬಹುದಾದ ಇಂಧನ ಕ್ಷೇತ್ರದ ಮೇಲೆ ಹೆಚ್ಚಿನ ಹೂಡಿಕೆ ಮಾಡಲಾಗುತ್ತಿದೆ. ಇದೀಗ ಅದಾನಿ ಸಮೂಹದ ಕಡೆಯಿಂದ ಕೂಡ ಮಹತ್ವದ ನಿರ್ಧಾರ ಕೈಗೊಂಡಿರುವುದು ಗಮನ ಸೆಳೆದಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications