ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ವರದಿಯು ಭಾರೀ ಚರ್ಚೆಗೆ ಕಾರಣವಾಗಿದೆ. ಈಗ ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಅದಾನಿ ಗ್ರೂಪ್ ವಿರುದ್ಧ ತನಿಖೆ ನಡೆಸುತ್ತಿರುವ ಸೆಬಿ ಮುಂದೆ ಪ್ರಶ್ನೆ ಇಟ್ಟಿದ್ದಾರೆ. "ಅದಾನಿ ಗ್ರೂಪ್ ಸ್ಟಾಕ್ನಲ್ಲಿ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್ನಷ್ಟು ಹೂಡಿಕೆಯ ಮಾರಿಷಸ್ ಫಂಡ್ ಬಗ್ಗೆ ಸೆಬಿ ಯಾಕಿನ್ನು ಆಳವಾದ ತನಿಖೆಗೆ ಇಳಿದಿಲ್ಲ. ಇದಕ್ಕೂ ಕೂಡಾ ಮಾರುಕಟ್ಟೆ ನಿಯಂತ್ರಕರಿಗೆ ಯಾವುದೇ ತನಿಖಾ ಸಂಸ್ಥೆಯ ಸಹಾಯ ಬೇಕೇ?," ಎಂದು ಪ್ರಶ್ನಿಸಿದ್ದಾರೆ.
ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್ವೆಸ್ಟ್ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್ವೆಸ್ಟ್ಮೆಂಟ್ ಫಂಡ್ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಫಂಡ್ಗಳು ನಿಗೂಢವಾಗಿದೆ. ಶೆಲ್ ಸಂಸ್ಥೆಯಿಂದರೆ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಗಳು ಹಿಂಡನ್ಬರ್ಗ್ ವರದಿಯ ಬಳಿಕ ಮತ್ತೆ ಗಮನಕ್ಕೆ ಬಂದಿದೆ. ಇದು ಸ್ಟಾಕ್ ದರದ ಮೇಲೆ ಪ್ರಭಾವ ಬೀರಿದೆ ಎಂದು ಆರೋಪವಿದೆ. ಆದರೆ ಅದಾನಿ ಗ್ರೂಪ್ ಎಲ್ಲ ಆರೋಪ ತಳ್ಳಿಹಾಕಿದೆ.

"ಸರ್ಕಾರ ಮತ್ತು ವ್ಯಾಪಾರದ ನಡುವೆ ಇಲ್ಲದ ಅಪಾರದರ್ಶಕವಾದ ಲಿಂಕ್ ಅನ್ನು ಕಡಿತಗೊಳಿಸುವುದು (ಪಾರದರ್ಶಕತೆ ಹೆಚ್ಚಿಸುವುದು) ಮತ್ತು ನಿಯಂತ್ರಕರು ತಮ್ಮ ಕಾರ್ಯಮಾಡಲು ಬಿಟ್ಟುಬಿಡುವುದು. ಮಾರಿಷಸ್ ಫಂಡ್ ಮಾಲೀಕತ್ವದ ಆಳಕ್ಕೆ ಇನ್ನು ಸೆಬಿ ಯಾಕೆ ಇಳಿದಿಲ್ಲ. ಯಾವುದೇ ತನಿಖಾ ಸಂಸ್ಥೆಯ ಸಹಾಯ ಬೇಕಾಗಿದೆಯೇ?," ಎಂದು ರಾಜನ್ ಪ್ರಶ್ನಿಸಿದ್ದಾರೆ. ಫಂಡ್ಗಳು ಮಾರಿಷಸ್ ಸಂಸ್ಥೆಗಳ ಹೆಸರಲ್ಲಿದೆ. ಹಾಗೆಯೇ ಮಾಲೀಕತ್ವವು ನಿಗೂಢವಾಗಿದೆ. ಈ ಬಗ್ಗೆ ರಾಜನ್ ಧನಿ ಎತ್ತಿದ್ದಾರೆ.
"ಇಂತಹ ಕುಟುಂಬಗಳು ದೇಶದ ಆಡಳಿತಕ್ಕೆ ನೇರವಾಗಿ ಕೈಹಾಕುವ ಅವಕಾಶವಿದ್ದಾಗ ದೇಶಕ್ಕೆ ಸರಿಯಾದ ಸೇವೆಯನ್ನು ನೀಡಲು ಸಾಧ್ಯವಾಗುವುದಿಲ್ಲ. ವ್ಯಾಪಾರ ಎಂದಿಗೂ ಅದರ ನೆಲೆಯಲ್ಲೇ ಇರಲಿ, ಆಡಳಿತದ ಸಂಪರ್ಕದಲ್ಲಿ ಅಲ್ಲ," ಎಂದು ಕಟುವಾದ ಮಾತುಗಳನ್ನು ಮಾಜಿ ಆರ್ಬಿಐ ಗವರ್ನರ್ ಹೇಳಿದ್ದಾರೆ. ಇನ್ನು ಈಗಾಗಲೇ ದೇಶದ ಉನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಅದಾನಿ ಗ್ರೂಪ್ ವಿರುದ್ಧ ಸೆಬಿ ತನಿಖೆಯನ್ನು ಘೋಷಣೆ ಮಾಡಿದೆ.
ಹಿಂಡನ್ಬರ್ಗ್ ಆರೋಪ, ಇತರೆ ತಿರುವುಗಳು
ಹಿಂಡನ್ಬರ್ಗ್ ತನಿಖಾ ವರದಿಯು ಅದಾನಿ ಗ್ರೂಪ್ ವಂಚನೆಯನ್ನು ಭಾಗಿಯಾಗಿದೆ. ದಶಕಗಳಿಂದ ವಂಚನೆ ನಡೆಸುತ್ತಿದೆ. ಅದಾನಿ ಗ್ರೂಪ್ ಬಗ್ಗೆ ಸುಮಾರು ಎರಡು ವರ್ಷಗಳ ಕಾಲ ತನಿಖೆಯನ್ನು ನಡೆಸಿ ವರದಿ ನೀಡಲಾಗಿದೆ. ಅದಾನಿ ಗ್ರೂಪ್ನ ಹಲವಾರು ವ್ಯಕ್ತಿಗಳ ಸಂದರ್ಶನ ಮಾಡಲಾಗಿದೆ. ಮಾಜಿ ಹಿರಿಯ ಅಧಿಕಾರಿಗಳ ಸಂದರ್ಶನವನ್ನು ಕೂಡಾ ಮಾಡಲಾಗಿದೆ. ದಾಖಲೆಗಳು ನಮ್ಮಲ್ಲಿದೆ ಎಂದು ಹಿಂಡನ್ಬರ್ಗ್ ಮಾಹಿತಿ ನೀಡಿದೆ.
ಜನವರಿ 24ರಂದು ವರದಿ ಬಿಡುಗಡೆ ಮಾಡಿರುವ ಹಿಂಡನ್ಬರ್ಗ್, ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.
ಆದರೆ ಅದಾನಿ ಗ್ರೂಪ್ ಮಾತ್ರ ಇದು ಭಾರತದ ಮೇಲೆ ನಡೆಸುತ್ತಿರುವ ದಾಳಿ ಎಂದು ತನ್ನ 413 ಪುಟಗಳ ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಿದೆ. ಹಾಗೆಯೇ ಎಲ್ಲ ಆರೋಪಗಳನ್ನು ಅದಾನಿ ಗ್ರೂಪ್ ಅಲ್ಲಗಳೆದಿದೆ. ಅದಾದ ಬಳಿಕ ಸ್ಟಾಕ್ ಮಾರುಕಟ್ಟೆಯಲ್ಲಿ ಉಂಟಾದ ಕುಸಿತವನ್ನು ಸರಿದೂಗಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರಿಂದಾಗಿ ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ಕೊಂಚ ಸುಧಾರಿಸುತ್ತಿದೆ. ಆದರೂ ಹಲವಾರು ಡೀಲ್ ಅದಾನಿ ಗ್ರೂಪ್ ಕೈಜಾರಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications