ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ತಗುಲಿದ ವೆಚ್ಚ, ಅನುಮೋದನೆಗೊಂಡ ಮೊತ್ತಕ್ಕಿಂತ ಎರಡು ಕೋಟಿ ಹೆಚ್ಚು ಎಂದು ವರದಿಯಾಗಿದೆ.
ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ದೂರಿ ಚಾಲನೆಯನ್ನು ನೀಡಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ಸರ್ಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 17.40 ಕೋಟಿ ರೂಪಾಯಿ ಮಂಜೂರು ಮಾಡಿತ್ತು.

ಆದರೆ, ನಿಗದಿತ ಬಜೆಟಿಗಿಂತ ಹೆಚ್ಚುವರಿಯಾಗಿ ಎರಡು ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಅಲ್ಲಿಗೆ, ಈ ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತು ಕೋಟಿ ಸರ್ಕಾರೀ ಖಜಾನೆಯಿಂದ ಮಂಜೂರಾದಂತಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆಯ ಮೇರೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ದಿ ಫೈಲ್ ವರದಿ ಮಾಡಿದೆ.
ಖಾಸಗಿ ಪ್ರಚಾರ ಫಲಕಗಳಲ್ಲಿಯೂ ಯೋಜನೆಯ ಬಗ್ಗೆ ಜಾಹೀರಾತನ್ನು ನೀಡಲು ಆದೇಶ ನೀಡಲಾಗಿತ್ತು. ಹಲವು ಗ್ಯಾರಂಟಿಗಳಿಗೆ ಹಣವನ್ನು ಒದಗಿಸಬೇಕಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಆರ್ಥಿಕ ಇಲಾಖೆಗೆ ಒಪ್ಪಿರಲಿಲ್ಲ ಎಂದು ಹೇಳಲಾಗುತ್ತಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಸಾಮಾಜಿಕ ತಾಣದಲ್ಲಿ ಜಾಹೀರಾತನ್ನು ನೀಡಲು ಐವತ್ತು ಲಕ್ಷ ರೂಪಾಯಿ ಹಣವನ್ನು ಮೀಸಲಿಡಲಾಗಿತ್ತು ಎಂದು ವರದಿಯಾಗಿತ್ತು. ಮೈಸೂರಿನ ಕಾರ್ಯಕ್ರಮಕ್ಕೆ ತಗುಲಿದ ಖರ್ಚನ್ನು ಬಿಡುಗಡೆ ಮಾಡುವಂತೆ ಸೆಪ್ಟಂಬರ್ ಐದರಂದು ಇಲಾಖೆ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ. ಪಂಚ ಗ್ಯಾರಂಟಿಗಳಲ್ಲೊಂದಾದ ಈ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ಹಣವನ್ನು ಸರ್ಕಾರ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡುವ ಯೋಜನೆ ಇದಾಗಿದೆ.
"1.10 ಕೋಟಿ ಫಲಾನುಭವಿಗಳ ಖಾತೆಗೆ ತಲಾ 2,000 ರೂಪಾಯಿ ಜಮೆ ಮಾಡಲಾಗುವುದು. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿ ಮಾಡಿದ್ದೇವೆ. ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ" ಎಂದು ಗೃಹಲಕ್ಷ್ಮಿ ಚಾಲನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.
More From GoodReturns

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications