ಎಚ್ ಡಿಎಫ್ ಸಿ ಬ್ಯಾಂಕ್ ಮಾಜಿ ಮುಖ್ಯಾಧಿಕಾರಿ ಆದಿತ್ಯ ಪುರಿ ಅವರನ್ನು ಕಂಪೆನಿಯ ಏಷ್ಯಾ ಹಿರಿಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ಜಾಗತಿಕ ಹೂಡಿಕೆ ಸಂಸ್ಥೆ ಕಾರ್ಲೈಲ್ ಸೋಮವಾರ ಘೋಷಣೆ ಮಾಡಲಾಗಿದೆ. ಏಷ್ಯಾದ್ಯಂತ ಹೂಡಿಕೆ ಅವಕಾಶಗಳನ್ನು ಕಾರ್ಲೈಲ್ ತಂಡಕ್ಕೆ ಪುರಿ ಅವರು ಸಲಹೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಆದಿತ್ಯ ಪುರಿ ಅವರು 1994ನೇ ಇಸವಿಯಲ್ಲಿ ಎಚ್ ಡಿಎಫ್ ಸಿ ಬ್ಯಾಂಕ್ ಮೊದಲ ಸಿಇಒ ಆಗಿ ನೇಮಕ ಆಗಿದ್ದರು. ಅವರ 26 ವರ್ಷದ ಅಧಿಕಾರಾವಧಿಯಲ್ಲಿ ಎಚ್ ಡಿಎಫ್ ಸಿ ಬ್ಯಾಂಕ್ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಮತ್ತು ಮಾರುಕಟ್ಟೆ ಮೌಲ್ಯದ ವಿಚಾರದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಬ್ಯಾಂಕ್ ಎನಿಸಿಕೊಂಡಿತು.
ಅದಕ್ಕೂ ಮುನ್ನ ಆದಿತ್ಯ ಪುರಿ 20 ವರ್ಷಗಳ ಕಾಲ ಸಿಟಿ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಭಾರತ, ಗ್ರೀಸ್, ಸೌದಿ ಅರೇಬಿಯಾ, ಹಾಂಕಾಂಗ್, ಕೊರಿಯಾ, ತೈವಾನ್, ಚೀನಾ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಕೊನೆಯದಾಗಿ 1992- 1994ರ ಮಧ್ಯೆ ಮಲೇಷ್ಯಾ ಸಿಟಿ ಬ್ಯಾಂಕ್ ಕಾರ್ಯ ನಿರ್ವಹಣೆಯ ಸಿಇಒ ಆಗಿ ಜವಾಬ್ದಾರಿ ನಿರ್ವಹಿಸಿದ್ದರು.

ಕಾರ್ಲೈಲ್ ನಿಂದ ಏಷ್ಯಾದ್ಯಂತ (ಜಪಾನ್ ಹೊರತುಪಡಿಸಿ) ಸೆಪ್ಟೆಂಬರ್ 30, 2020ಕ್ಕೆ 4.9 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಲಾಗಿದೆ. ಎಸ್ ಬಿಐ ಕಾರ್ಡ್, ಎಸ್ ಬಿಐ ಲೈಫ್, ಎಚ್ ಡಿಎಫ್ ಸಿ ಲಿ., ಪಿಎನ್ ಬಿ ಹೌಸಿಂಗ್ ಫೈನಾನ್ಸ್, ರೆಪ್ಕೊ ಹೌಸಿಂಗ್ ಫೈನಾನ್ಸ್, ಐಐಎಫ್ ಎಲ್ ಸೇರಿದಂತೆ ಅನೇಕ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ.
ನಿರ್ವಹಣಾ ತಂಡಗಳ ಜತೆಗೆ ಸಹಭಾಗಿತ್ವದಲ್ಲಿ ಕೆಲಸ ಮಾಡುವುದರಲ್ಲಿ ಹಾಗೂ ವ್ಯವಹಾರದಲ್ಲಿ ಬದಲಾವಣೆ ತರುವ ಸಾಮರ್ಥ್ಯದಲ್ಲಿ ಕಾರ್ಲೈಲ್ ಹೆಸರುವಾಸಿ. ಕಾರ್ಲೈಲ್ ನ ಇಲ್ಲಿಯವರೆಗಿನ ದಾಖಲೆಗಳಿಂದ ನನಗೆ ಬಹಳ ಸತೋಷ ಇದೆ. ಭಾರತ ಮಾತ್ರವಲ್ಲ, ಏಷ್ಯಾದಾದ್ಯಂತ ಮುಂಚೂಣಿ ಸ್ಥಾನದಲ್ಲಿದೆ ಎಂದು ಪುರಿ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications