ತಿದ್ದುಪಡಿ ಮಾಡಿದ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ಮೇಲೆ, ಅಂದರೆ ಸೆಪ್ಟೆಂಬರ್ 1ರಿಂದ ಈಚೆಗೆ ದೇಶದ 18 ರಾಜ್ಯಗಳಲ್ಲಿ ಒಟ್ಟು 577.5 ಕೋಟಿ ರುಪಾಯಿ ದಂಡ ವಿಧಿಸಲಾಗಿದೆ. ಈ ಪೈಕಿ ಅತಿ ಹೆಚ್ಚು ದಂಡ ವಸೂಲಿ ಆಗಿರುವುದು ಉತ್ತರಪ್ರದೇಶದಲ್ಲಿ. ವಸೂಲಾದ ಒಟ್ಟು ದಂಡದ ಮೊತ್ತ 201.9 ಕೋಟಿ ರುಪಾಯಿ. ಆ ನಂತರದ ಸ್ಥಾನಗಳಲ್ಲಿ ಗುಜರಾತ್ ಮತ್ತು ಬಿಹಾರ ಇದೆ.
ಅತ್ಯಂತ ಕಡಿಮೆ ದಂಡ ವಸೂಲಿ ಆಗಿರುವುದು ಗೋವಾದಲ್ಲಿ. ಅಲ್ಲಿ ಕೇವಲ 58 ಚಲನ್ ನೀಡಲಾಗಿದ್ದು, 7,800 ರುಪಾಯಿ ದಂಡ ವಸೂಲಿ ಆಗಿದೆ. ಇನ್ನು ಹೊಸ ಕಾಯ್ದೆಯನ್ನು ಜಾರಿ ಮಾಡದ ಮಹಾರಾಷ್ಟ್ರದಲ್ಲಿ 6,416 ಚಲನ್ ನೀಡಲಾಗಿದೆ. 4.16 ಲಕ್ಷ ರುಪಾಯಿ ದಂಡ ವಸೂಲಿ ಮಾಡಲಾಗಿದೆ.
ಅಂದ ಹಾಗೆ, ಈ ಅಂಕಿ- ಅಂಶಗಳನ್ನು ಬಹಿರಂಗ ಮಾಡಿರುವುದು ರಸ್ತೆ ಸಾರಿಗೆ ಸಚಿವಾಲಯ. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಈ ಉತ್ತರ ನೀಡಲಾಗಿದೆ. ಕೇಂದ್ರ ಸರ್ಕಾರದ ವಾಹನ್ ಮತ್ತು ಸಾರಥಿ ಡೇಟಾ ಬೇಸ್ ನಲ್ಲಿ ದೊರೆತ ಮಾಹಿತಿಯ ಸಮಗ್ರ ದತ್ತಾಂಶದ ವಿವರ ಇದಾಗಿದೆ.

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಕೋರ್ಟ್ ನಲ್ಲಿ ಕಟ್ಟಲಾದ ದಂಡ ಮೊತ್ತದ ಚಲನ್ ವಿವರ ಇದಾಗಿದೆ. ಸಂಚಾರ ಪೊಲೀಸರಿಗೆ ಬಂದ ಆದಾಯದ ವಿವರಗಳು ಇಲ್ಲ ಎಂದಿದ್ದಾರೆ. ಹೊಸದಾಗಿ ಕಾಯ್ದೆ ಜಾರಿಗೆ ಬಂದ ಮೇಲೆ ದೊಡ್ಡ ಮೊತ್ತದ ದಂಡ ಹಾಕುವ ಪದ್ಧತಿ ಜಾರಿಗೆ ಬಂದಿದೆ. ಆದರೆ ಗುಜರಾತ್, ಉತ್ತರಾಖಂಡ್ ಮತ್ತು ತಮಿಳುನಾಡಿನಲ್ಲಿ ದಂಡದ ಮೊತ್ತ ಇಳಿಸಲಾಗಿದೆ.
ಹೊಸ ಕಾಯ್ದೆಯ ಅನ್ವಯ ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ದಂಡ ವಸೂಲಿ ಮಾಡಲಾಗುತ್ತಿದೆ. ಅಧಿಸೂಚನೆ ಹೊರಡಿಸಲಾಗಿದ್ದು, ದಂಡವನ್ನು ಸ್ಥಳದಲ್ಲೇ ಪೊಲೀಸರಿಗೆ ಪಾವತಿಸಬಹುದು. ಕೋರ್ಟ್ ಗೆ ತೆರಳಿಯೇ ದಂಡ ಪಾವತಿಸಬೇಕು ಎಂದಿಲ್ಲ ಎಂಬ ಮಾತನ್ನು ಗಡ್ಕರಿ ಹೇಳಿದ್ದಾರೆ.
ಸಚಿವಾಲಯದ ಮಾಹಿತಿ ಪ್ರಕಾರ, 2018ನೇ ಇಸವಿಗೆ ಹೋಲಿಸಿದರೆ ಈ ವರ್ಷ ಅಪಘಾತದ ಪ್ರಮಾಣ ಕಡಿಮೆ ಆಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications