ಕೃಷಿ ಮೂಲಸೌಕರ್ಯ ನಿಧಿ ಅಡಿಯಲ್ಲಿ 1 ಲಕ್ಷ ಕೋಟಿ ರುಪಾಯಿ ಹಣಕಾಸು ಸಾಲ ವ್ಯವಸ್ಥೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇದರ ಜತೆಗೆ 8.5 ಕೋಟಿ ರೈತರಿಗೆ ಪಿಎಂ- ಕಿಸಾನ್ ಯೋಜನೆ ಅಡಿಯಲ್ಲಿ ಆರನೇ ಕಂತಿನ ಮೊತ್ತವಾದ 17,000 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದರು.
ರೈತರಿಗೆ ಹಣಕಾಸು ಸಾಲ ಒದಗಿಸುವ ಯೋಜನೆಗೆ ಕೇಂದ್ರ ಸಂಪುಟದಿಂದ ಒಪ್ಪಿಗೆ ಸಿಕ್ಕಿದೆ. ಕೊಯ್ಲಿನ ನಂತರ ಮೂಲ ಸೌಕರ್ಯ ನಿರ್ವಹಣೆಗೆ ಹಾಗೂ ಶೀತಗೃಹ, ಸಂಗ್ರಹ ಕೇಂದ್ರ, ಪ್ರೊಸೆಸಿಂಗ್ ಘಟಕ ಮುಂತಾದ ಸಾಮುದಾಯಿಕ ಕೃಷಿ ಆಸ್ತಿ ಸೃಷ್ಟಿಗೆ ಈ ಮೊತ್ತವನ್ನು ಬಳಸಲಾಗುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.
8.5 ಕೋಟಿ ರೈತರಿಗೆ 17,000 ಕೋಟಿ ವರ್ಗಾವಣೆ
ಪಿಎಂ ಕಿಸಾನ್ ನಿಧಿ ಆಗಿ 8.5 ಕೋಟಿ ರೈತರಿಗೆ 17,000 ಕೋಟಿ ವರ್ಗಾವಣೆ ಮಾಡಿರುವುದರಿಂದ ನನಗೆ ಬಹಳ ತೃಪ್ತಿ ತಂದಿದೆ. ಏಕೆಂದರೆ, ಈ ಯೋಜನೆಯ ಗುರಿಯನ್ನು ತಲುಪಿದ ತೃಪ್ತಿ ಸಿಕ್ಕಿದೆ ಎಂದಿದ್ದಾರೆ ಮೋದಿ. ಕಳೆದ ಒಂದೂವರೆ ವರ್ಷದಲ್ಲಿ ರೈತರು ತಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಇಲ್ಲಿಯ ತನಕ 75 ಸಾವಿರ ಕೋಟಿ ಪಡೆದಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ 22 ಸಾವಿರ ಕೋಟಿ ನೀಡಲಾಗಿದೆ
ಆ ಪೈಕಿ 22 ಸಾವಿರ ಕೋಟಿ ರುಪಾಯಿಯನ್ನು ಲಾಕ್ ಡೌನ್ ಅವಧಿಯಲ್ಲಿ ನೀಡಲಾಗಿದೆ. ಕಳೆದ ಏಳು ವರ್ಷಗಳಿಂದ ನಡೆಯುತ್ತಿದ್ದ "ಒಂದು ದೇಶ- ಒಂದು ಮಂಡಿ" ಕೆಲಸ ಈಗ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ. ಮೊದಲ ಇ- ನ್ಯಾಷನಲ್ ಅಗ್ರಿಕಲ್ಚರ್ ಮಾರ್ಕೆಟ್ (e-NAM) ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಮೂಲಕ ಮತ್ತು ಕಾನೂನು ಮಾಡಿ ರೈತರನ್ನು ಮಾರುಕಟ್ಟೆ ಹಾಗೂ ಮಾರುಕಟ್ಟೆ ತೆರಿಗೆಯಿಂದ ಮುಕ್ತಗೊಳಿಸಲಾಗಿದೆ.
ಮೂಲಸೌಕರ್ಯ ನಿಧಿ ಮೂಲಕ ರೈತರಿಗೆ ಅನುಕೂಲ
"ರೈತರಿಗೆ ಈಗ ಹಲವು ಆಯ್ಕೆಗಳಿವೆ". ರೈತರು ತಮ್ಮ ಜಮೀನಿಂದ ಅಥವಾ ಗೋದಾಮುಗಳಿಂದ ವ್ಯವಹಾರ ನಡೆಸಬಹುದು. ಯಾರು e-NAM ಮೂಲಕ ವರ್ತಕರಿಗೆ ಮತ್ತು ಸಂಸ್ಥೆಗಳಿಗೆ ಹಣ ಪಾವತಿಸುತ್ತಾರೋ ಅಂಥವರಿಗೆ ಉತ್ಪನ್ನ ಮಾರಬಹುದು. ಕೃಷಿ ಮೂಲಸೌಕರ್ಯ ನಿಧಿ ಮೂಲಕ ರೈತರಿಗೆ ಅನುಕೂಲ ಆಗಲಿದೆ. ರೈತರು ತಮ್ಮ ಗ್ರಾಮಗಳಾಲ್ಲಿ ಆಧುನಿಕ ಸಂಗ್ರಹ ವ್ಯವಸ್ಥೆ ಮಾಡಿಕೊಳ್ಳಬಹುದು ಎಂಬುದನ್ನು ಒತ್ತಿ ಹೇಳಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications