ಬೆಂಗಳೂರು, ಸೆಪ್ಟೆಂಬರ್ 5: ಬೆಂಗಳೂರಿನಲ್ಲಿ 1,400 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ವಿಮಾನಗಳ ಮೆಗಾ ನಿರ್ವಹಣೆ ಮತ್ತು ದುರಸ್ತಿ ಮತ್ತು ಸಂಪೂರ್ಣ ನವೀಕರಣದ ಬೃಹತ್ ಘಟಕ ನಿರ್ಮಾಣಕ್ಕೆ ದೇವನಹಳ್ಳಿ ಬಳಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಬುಧವಾರ ಚಾಲನೆ ನೀಡಿದೆ. ಈ ಕ್ರಮವು ಭಾರತದ ಸ್ವಾವಲಂಬಿ ವಾಯುಯಾನ ವಲಯವನ್ನು ಜಾಗತಿಕವಾಗಿ ವಿಸ್ತರಿಸುತ್ತಿರುವಂತೆ ಅದನ್ನು ಹೆಚ್ಚಿಸುವ ಏರ್ಲೈನ್ನ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.
ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿರುವ ಟಾಟಾ ಒಡೆತನದ ಏರ್ ಇಂಡಿಯಾ ಗ್ರೂಪ್ ಎಂಆರ್ ಓ ಘಟಕ 35 ಎಕರೆಗಳಲ್ಲಿ ಎಕ್ರೆ ಪ್ರದೇಶದಲ್ಲಿ ನಿರ್ಮಿಸಲಿದ್ದು, ಇದು ಏರ್ ಇಂಡಿಯಾ ಸಮೂಹದ ಏರ್ಲೈನ್ಗಳ ನಿರ್ವಹಣಾ ಕಾರ್ಯಾಚರಣೆಗಳಿಗೆ ಪ್ರಮುಖ ಕೇಂದ್ರವಾಗಿ ಪರಿಣಮಿಸುವ ನಿರೀಕ್ಷೆ ಇದೆ. ಜಾಗತಿಕ ತಾಣಗಳೊಂದಿಗೆ ನೇರ ಸಂಪರ್ಕವನ್ನು ಹೆಚ್ಚಿಸುವ ಮೂಲಕ ಬೆಂಗಳೂರನ್ನು ತನ್ನ ಪ್ರಮುಖ ಕೇಂದ್ರಗಳಲ್ಲಿ ಒಂದನ್ನಾಗಿ ಮಾಡುವ ಏರ್ ಇಂಡಿಯಾದ ಯೋಜನೆಯಲ್ಲಿ MRO ಪ್ರಮುಖ ಭಾಗವಾಗಿದೆ.

ಏರ್ ಇಂಡಿಯಾ ತನ್ನ ವಿಮಾನಗಳನ್ನು ಆಧುನೀಕರಿಸುತ್ತಿರುವುದರ ಜೊತೆಗೆ ತನ್ನ ಜಾಗತಿಕ ನಿರ್ವಹಣಾ ಕಾರ್ಯಾಚರಣೆಯನ್ನು ವಿಸ್ತರಿಸುವುದರಿಂದ ಈ ಘಟಕದ ಸ್ಥಾಪನೆಯ ನಂತರ 1200ಕ್ಕೂ ಹೆಚ್ಚು ವಿಮಾನಯಾನ ಇಂಜಿನಿಯರಿಂಗ್ ಗಳಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಜೊತೆಗೆ ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ (SME) ಇದರಿಂದ ಬೆಂಬಲ ಸಿಗಲಿದೆ.
ಇದರ ಜೊತೆಗೆ, ದೆಹಲಿಯಲ್ಲಿ ಹೊಸ ವೈಡ್-ಬಾಡಿ ಹ್ಯಾಂಗರ್ ಮತ್ತು ಅದರ ಲೈನ್ ನಿರ್ವಹಣೆ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ತನ್ನ ನಿರ್ವಹಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಏರ್ ಇಂಡಿಯಾ ಯೋಜಿಸಿದೆ. 2025 ರ ವೇಳೆಗೆ ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ (BMTO) ತೆರೆಯುವ ಗುರಿಯನ್ನು ಏರ್ಲೈನ್ ಹೊಂದಿದೆ, ಇದು ಮಹತ್ವಾಕಾಂಕ್ಷಿ ಎಂಜಿನಿಯರ್ಗಳಿಗೆ ತರಬೇತಿ ಅವಕಾಶಗಳನ್ನು ಒದಗಿಸುತ್ತದೆ.
ಎಂಆರ್ ಓ ಘಟಕ ನಿರ್ಮಾಣ ಕಾರ್ಯದ ಶಿಲಾನ್ಯಾಸ ಸಮಾರಂಭದಲ್ಲಿ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ನ ಸಿಇಒ ಶ್ರೀ ಹರಿ ಮರಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಎಂಆರ್ ಓ ಘಟಕ ನಿರ್ಮಾಣದ ಬಗ್ಗೆ ಶ್ರೀಮತಿ ಗುಂಜನ್ ಕೃಷ್ಣ ಹರ್ಷ ವ್ಯಕ್ತಪಡಿಸುತ್ತಾ "ಇದು ವೇಗವಾಗಿ ಬೆಳೆಯುತ್ತಿರುವ ಭಾರತೀಯ ವಾಯುಯಾನಕ್ಕೆ ಮಾತ್ರವಲ್ಲದೇ, ಬೆಂಗಳೂರು ವಿಮಾನಯಾನ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿರುವ ಕರ್ನಾಟಕ ರಾಜ್ಯಕ್ಕೂ ಸಹ ಮೈಲಿಗಲ್ಲು ನೀಡಲಿದೆ. ಜೊತೆಗೆ ಮುಂಬರುವ ವರ್ಷಗಳಲ್ಲಿ ಪ್ರಮುಖ ಜಾಗತಿಕ ವಾಯುಯಾನ ಕೇಂದ್ರವಾಗಿ ಹೊರಹೊಮ್ಮಲಿದೆ" ಎಂದು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಏರ್ ಇಂಡಿಯಾದ ಸಿಇಓ ಕ್ಯಾಂಪ್ಬೆಲ್ ವಿಲ್ಸನ್, "ಬೆಂಗಳೂರು ಎಂಆರ್ ಒ ಸೌಲಭ್ಯವು ಭಾರತದ ವಾಯುಯಾನ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡಲು ಸರಿಯಾದ ಸಮಯದಲ್ಲಿ ಬರುತ್ತಿದ್ದು, ಇದರಿಂದ ನಮ್ಮ ಆಂತರಿಕ ಸಾಮರ್ಥ್ಯಗಳನ್ನು ಹೆಚ್ಚಾಗಲಿದೆ. ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಮಾಡುವ ನಮ್ಮ ಉದ್ದೇಶದಲ್ಲಿ ಇದು ಒಂದು ಹೆಜ್ಜೆ ಮುಂದಿದೆ" ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ MRO ಘಟಕ ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದ ಜೊತೆಗೆ ಈ ವರ್ಷದ ಆರಂಭದಲ್ಲಿ ತಿಳಿವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿತ್ತು. ಈ ಘಟಕ ಅಭಿವೃದ್ಧಿಪಡಿಸಲು ಏರ್ ಇಂಡಿಯಾ ತನ್ನ ಪಾಲುದಾರ ಕಂಪನಿಯಾಗಿ ಎಸ್ಐಎಎಂ ಜಿನಿಯರಿಂಗ್ ಕಂಪನಿ (ಎಸ್ಐಎಇಸಿ) ಜೊತೆಗೂ ಒಪ್ಪಂದ ಮಾಡಿಕೊಂಡಿದೆ.
"ಓವರ್ಹೆಡ್ ಟೆಲಿ ಪ್ಲಾಟ್ಫಾರ್ಮ್ಗಳು, ಕ್ರೇನ್ಗಳು, ಯುನಿವರ್ಸಲ್ ಡಾಕಿಂಗ್ ಸಿಸ್ಟಮ್ಗಳು ಮತ್ತು ದೇಶದ ಅತಿದೊಡ್ಡ ವರ್ಟಿಕಲ್ ಲಿಫ್ಟ್ ಹ್ಯಾಂಗರ್ ಬಾಗಿಲುಗಳು ಸೇರಿದಂತೆ ಇತ್ತೀಚಿನ ವಿಮಾನ ನಿರ್ವಹಣಾ ತಂತ್ರಜ್ಞಾನವನ್ನು ಹೊಂದಿರುವ ಈ MRO ಸೌಲಭ್ಯವು ವಿಶ್ವದ ಯಾವುದೇ MRO ಗೆ ಸಮಾನವಾಗಿ ವಾಯುಯಾನ ನಿರ್ವಹಣೆಯನ್ನು ಹೊಂದಿರುತ್ತದೆ "ಎಂದು ವಿಮಾನಯಾನ ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
More From GoodReturns

Hosur railway line: ಬೈಯಪ್ಪನಹಳ್ಳಿ-ಹೊಸೂರು ಮಾರ್ಗದ ರೈಲು ಆದಷ್ಟು ಬೇಗ ಆರಂಭ-ಯಾವಾಗೆಂದು ತಿಳಿಯಿರಿ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications