ಈಗಾಗಲೇ ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಕೇಂದ್ರದ ಸಂಸ್ಥೆಗಳಿಗೆ ಖಡಕ್ ಸೂಚನೆ ಕೊಟ್ಟಿದೆ. 10 ಲಕ್ಷ ರುಪಾಯಿಗಿಂತ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳಿಗೆ ಬಾಕಿ ಹಣ ಪಾವತಿಸದಿದ್ರೆ ಟಿಕೆಟ್ ಕೊಡಲ್ಲ ಎಂದಿದೆ.
ಪ್ರಮುಖ ಸರಕಾರಿ ಸಂಸ್ಥೆಗಳಾದ ಸಿಬಿಐ, ಐಬಿ, ಜಾರಿ ನಿರ್ದೇಶನಾಲಯ(ED), ಕೇಂದ್ರ ಕಾರ್ಮಿಕ ಸಂಸ್ಥೆ(ಸಿಎಲ್ಐ), ಭಾರತೀಯ ಲೆಕ್ಕ ಪತ್ರ ಮಂಡಳಿ, ಬಿಎಸ್ಎಫ್ನಂತಹ ಪ್ರಮುಖ ಸರಕಾರಿ ಸಂಸ್ಥೆಗಳು ಏರ್ ಇಂಡಿಯಾಕ್ಕೆ ಹಣ ನೀಡದೆ ಬಾಕಿ ಉಳಿಸಿಕೊಂಡಿದ್ದು, ಇದೇ ಕಾರಣಕ್ಕೆ ಏರ್ ಇಂಡಿಯಾ ಇದೇ ಮೊದಲ ಬಾರಿಗೆ ಟಿಕೆಟ್ ನೀಡಲು ನಿರಾಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯ ಏರ್ ಇಂಡಿಯಾಗೆ ದೇಶದ ಸರ್ಕಾರಿ ಸಂಸ್ಥೆಗಳಿಗೆ ಬರಬೇಕಾಗಿರುವ ಒಟ್ಟಾರೆ ಬಾಕಿ ಮೊತ್ತವು 268 ಕೋಟಿ ರುಪಾಯಿನಷ್ಟಿದೆ. ಇದರಲ್ಲಿ ಕಳೆದ ಕೆಲವು ವಾರಗಳಲ್ಲಿ 50 ಕೋಟಿ ಮರಳಿ ಬಂದಿದೆ. ಇನ್ನೂ ಬಾಕಿ ಉಳಿಸಿಕೊಂಡಿರುವ ಸಂಸ್ಥೆಗಳ ಪಟ್ಟಿಯು ದೊಡ್ಡದಾಗಿ ಬೆಳೆದಿದೆ.
ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ವಿಮಾನಯಾನಕ್ಕೆ ದೇಶದ ಸರ್ಕಾರಿ ಸಂಸ್ಥೆಗಳ ಮೊದಲ ಆದ್ಯತೆಯು ಏರ್ ಇಂಡಿಯಾ ಆಗಿರಬೇಕು. ಏರ್ ಇಂಡಿಯಾ ವಿಮಾನಗಳು ಆ ಜಾಗಕ್ಕೆ ತಲುಪದಿದ್ದರೆ ಮಾತ್ರ, ಬೇರೆ ವಿಮಾನಯಾನ ಸಂಸ್ಥೆಯ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಬೇಕು. ಹೀಗಾಗಿ ಸರ್ಕಾರಿ ಸಂಸ್ಥೆಗಳು ಏರ್ ಇಂಡಿಯಾಗೆ ಮೊದಲ ಆದ್ಯತೆಯನ್ನು ನೀಡುತ್ತವೆ. ಆದ್ರೆ ಇದೇ ಮೊದಲ ಬಾರಿಗೆ ಬಾಕಿ ಹಣ ಕೊಡದಿದ್ರೆ ಟಿಕೆಟ್ ನೀಡುವುದಿಲ್ಲ ಎಂದು ಏರ್ ಇಂಡಿಯಾ ಕಡ್ಡಿ ಮುರಿದಂತೆ ಹೇಳಿದೆ.
More From GoodReturns

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications