ಈಗಾಗಲೇ ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಕೇಂದ್ರದ ಸಂಸ್ಥೆಗಳಿಗೆ ಖಡಕ್ ಸೂಚನೆ ಕೊಟ್ಟಿದೆ. 10 ಲಕ್ಷ ರುಪಾಯಿಗಿಂತ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳಿಗೆ ಬಾಕಿ ಹಣ ಪಾವತಿಸದಿದ್ರೆ ಟಿಕೆಟ್ ಕೊಡಲ್ಲ ಎಂದಿದೆ.
ಪ್ರಮುಖ ಸರಕಾರಿ ಸಂಸ್ಥೆಗಳಾದ ಸಿಬಿಐ, ಐಬಿ, ಜಾರಿ ನಿರ್ದೇಶನಾಲಯ(ED), ಕೇಂದ್ರ ಕಾರ್ಮಿಕ ಸಂಸ್ಥೆ(ಸಿಎಲ್ಐ), ಭಾರತೀಯ ಲೆಕ್ಕ ಪತ್ರ ಮಂಡಳಿ, ಬಿಎಸ್ಎಫ್ನಂತಹ ಪ್ರಮುಖ ಸರಕಾರಿ ಸಂಸ್ಥೆಗಳು ಏರ್ ಇಂಡಿಯಾಕ್ಕೆ ಹಣ ನೀಡದೆ ಬಾಕಿ ಉಳಿಸಿಕೊಂಡಿದ್ದು, ಇದೇ ಕಾರಣಕ್ಕೆ ಏರ್ ಇಂಡಿಯಾ ಇದೇ ಮೊದಲ ಬಾರಿಗೆ ಟಿಕೆಟ್ ನೀಡಲು ನಿರಾಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯ ಏರ್ ಇಂಡಿಯಾಗೆ ದೇಶದ ಸರ್ಕಾರಿ ಸಂಸ್ಥೆಗಳಿಗೆ ಬರಬೇಕಾಗಿರುವ ಒಟ್ಟಾರೆ ಬಾಕಿ ಮೊತ್ತವು 268 ಕೋಟಿ ರುಪಾಯಿನಷ್ಟಿದೆ. ಇದರಲ್ಲಿ ಕಳೆದ ಕೆಲವು ವಾರಗಳಲ್ಲಿ 50 ಕೋಟಿ ಮರಳಿ ಬಂದಿದೆ. ಇನ್ನೂ ಬಾಕಿ ಉಳಿಸಿಕೊಂಡಿರುವ ಸಂಸ್ಥೆಗಳ ಪಟ್ಟಿಯು ದೊಡ್ಡದಾಗಿ ಬೆಳೆದಿದೆ.
ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ವಿಮಾನಯಾನಕ್ಕೆ ದೇಶದ ಸರ್ಕಾರಿ ಸಂಸ್ಥೆಗಳ ಮೊದಲ ಆದ್ಯತೆಯು ಏರ್ ಇಂಡಿಯಾ ಆಗಿರಬೇಕು. ಏರ್ ಇಂಡಿಯಾ ವಿಮಾನಗಳು ಆ ಜಾಗಕ್ಕೆ ತಲುಪದಿದ್ದರೆ ಮಾತ್ರ, ಬೇರೆ ವಿಮಾನಯಾನ ಸಂಸ್ಥೆಯ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಬೇಕು. ಹೀಗಾಗಿ ಸರ್ಕಾರಿ ಸಂಸ್ಥೆಗಳು ಏರ್ ಇಂಡಿಯಾಗೆ ಮೊದಲ ಆದ್ಯತೆಯನ್ನು ನೀಡುತ್ತವೆ. ಆದ್ರೆ ಇದೇ ಮೊದಲ ಬಾರಿಗೆ ಬಾಕಿ ಹಣ ಕೊಡದಿದ್ರೆ ಟಿಕೆಟ್ ನೀಡುವುದಿಲ್ಲ ಎಂದು ಏರ್ ಇಂಡಿಯಾ ಕಡ್ಡಿ ಮುರಿದಂತೆ ಹೇಳಿದೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಚಿನ್ನದ ಬೆಲೆ ಇಂದು ಏರಿಕೆ? ಖರೀದಿಸುವ ಮುನ್ನ ಇದನ್ನು ನೋಡಿ



Click it and Unblock the Notifications