ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಾದ ಏರ್ಟೆಲ್ ಮತ್ತು ಬಿಎಸ್ಎನ್ಎಲ್ ತಮ್ಮ ಪ್ರಿಪೇಯ್ಡ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಕೊರೊನಾಯಿಂದ ದೇಶ ಪೂರ್ತಿ ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರಿಪೇಯ್ಡ್ ವ್ಯಾಲಿಡಿಟಿಯನ್ನು ವಿಸ್ತರಣೆ ಮಾಡಿದೆ.
ಸೋಮವಾರ (ಮಾರ್ಚ್ 30) ಏರ್ಟೆಲ್ ತನ್ನ 8 ಕೋಟಿಗೂ ಹೆಚ್ಚು ಪ್ರಿಪೇಯ್ಡ್ ಗ್ರಾಹಕರ ವ್ಯಾಲಿಡಿಟಿಯನ್ನು ಏಪ್ರಿಲ್ 17ರವರೆಗೆ ವಿಸ್ತರಿಸಿ ಆದೇಶಿಸಿದೆ. ಇಂತಹ ಪ್ರಿಪೇಯ್ಡ್ ಗ್ರಾಹಕರ ಖಾತೆದಾರರಿಗೆ ಕಂಪನಿ 10 ರುಪಾಯಿ ಟಾಕ್ಟೈಮ್ ಜಮೆ ಮಾಡಲಿದೆ.

''ಏರ್ಟೆಲ್ 2020 ರ ಏಪ್ರಿಲ್ 17 ರವರೆಗೆ 80 ಮಿಲಿಯನ್ ಗ್ರಾಹಕರಿಗೆ ಪ್ರಿ ಪೇಯ್ಡ್ ಪ್ಯಾಕ್ ವ್ಯಾಲಿಡಿಟಿಯನ್ನು ವಿಸ್ತರಿಸಿದೆ. ಈ ಯೋಜನೆಯ ಅನ್ವಯ ಎಲ್ಲಾ ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಗಳಿಗೆ ಒಳಬರುವ ಕರೆಗಳನ್ನು ಸ್ವೀಕರಿಸುವುದನ್ನು ಮುಂದುವರಿಸಲಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಇದರ ಲಾಭ ಬಳಕೆದಾರರಿಗೆ ಲಭ್ಯವಾಗಲಿದೆ'' ಎಂದು ಕಂಪನಿ ಹೇಳಿದೆ. ಈ ಮೂಲಕ ಎಲ್ಲಾ ಗ್ರಾಹಕರಿಗೆ ಏಪ್ರಿಲ್ 17 ರವರೆಗೆ ತಡೆ ಇಲ್ಲದೆ ಒಳ ಬರುವ ಕರೆಗಳು ಲಭ್ಯವಿರಲಿವೆ.
ಏರ್ಟೆಲ್ ಜೊತೆಗೆ ಬಿಎಸ್ಎನ್ಎಲ್ ಪ್ರಿಪೇಯ್ಡ್ ಸಿಮ್ ಬಳಕೆದಾರರು ತಮ್ಮ ಸಿಮ್ಗಳನ್ನು ಏಪ್ರಿಲ್ 20 ರವರೆಗೆ ಮುಂದುವರಿಸಬಹುದು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಪ್ರಕಟಿಸಿದ್ದಾರೆ. 21 ದಿನಗಳ ಕೊರೊನಾವೈರಸ್ ಲಾಕ್ಡೌನ್ ಸಮಯದಲ್ಲಿ ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡುವ ಸಲುವಾಗಿ ಹೊರಹೋಗುವ ಕರೆಗಳನ್ನು ಸಕ್ರಿಯಗೊಳಿಸಲು ಸರ್ಕಾರವು 10 ರುಪಾಯಿ ಪ್ರೋತ್ಸಾಹವನ್ನು ನೀಡುತ್ತದೆ.
ಟ್ರಾಯ್ ಎಲ್ಲಾ ಟೆಲಿಕಾಂ ಕಂಪನಿಗಳಿಗೆ ಮನವಿ ಮಾಡಿಕೊಂಡ ಬಳಿಕ ಏರ್ಟೆಲ್ ಹಾಗೂ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ತಮ್ಮ ಪ್ರಿಪೇಯ್ಡ್ ಸೇವೆಗಳ ವ್ಯಾಲಿಡಿಟಿ ಅವಧಿಯನ್ನು ಏಪ್ರಿಲ್ 20ರವರೆಗೆ ವಿಸ್ತರಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications