ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿ ಮಂಗಳವಾರ ರಿಲಯನ್ಸ್ ಜಿಯೋ ಮುಖ್ಯಸ್ಥ ಸ್ಥಾನದಿಂದ ಕೆಳಕ್ಕೆ ಇಳಿದಿದ್ದು, ಪುತ್ರ ಆಕಾಶ್ ಅಂಬಾನಿ ನೂತನ ಮುಖ್ಯಸ್ಥರಾಗಿದ್ದಾರೆ.
ಅಂಬಾನಿಯವರ ಪುತ್ರ ಆಕಾಶ್ ಅಂಬಾನಿಯವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ.
ಜೂನ್ 27ರಿಂದ ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜೂನ್ 27ರಂದು ನಡೆದ ಜಿಯೋ ಸಮಿತಿ ಸಭೆಯ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ವರದಿಯು ಉಲ್ಲೇಖ ಮಾಡಿದೆ.

ಇನ್ನು ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಐದು ವರ್ಷಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸ್ವತಂತ್ರ ವ್ಯವಸ್ಥಾಪಕರಾಗಿ ಐದು ವರ್ಷಗಳ ಅವಧಿಗೆ ರಾಮಿಂದರ್ ಸಿಂಗ್ ಗುರ್ಜಲ್ ಹಾಗೂ ಕೆವಿ ಔಧರಿರನ್ನು ನೇಮಕ ಮಾಡಲಾಗಿದೆ. ಇದು ಕೂಡಾ ಜೂನ್ 27ರಿಂದ ಜಾರಿಗೆ ಬರಲಿದೆ.
ಆಕಾಶ್ ಅಂಬಾನಿ ಯಾರು?
ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಈ ಹಿಂದೆ ರಿಲಯನ್ಸ್ ಜಿಯೋ ನಾನ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿದ್ದರು. ಈಗ ನೂತನ ಮುಖ್ಯಸ್ಥರಾಗಿ ಆಯ್ಕೆ ಆಗಿದ್ದಾರೆ. ಯುಎಸ್ನ ಬ್ರೌನ್ ಯೂನಿವರ್ಸಿಟಿಯಿಂದ ಅರ್ಥಶಾಸ್ತ್ರ ಪದವಿ ಪಡೆದಿರುವ ಆಕಾಶ್ ಅಂಬಾನಿ ಹೊಸ ತಂತ್ರಜ್ಞಾನ ಬೆಳವಣಿಗೆ ಕಾರ್ಯದಲ್ಲಿ ತೊಡಗಿಕೊಂಡರು. ಮುಂದಿನ ದಿನಗಳಲ್ಲಿ ತಂತ್ರಜ್ಞಾನವು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ ಎಂದು ಸಂಸ್ತೆಯು ಹೇಳಿಕೆಯಲ್ಲಿ ಉಲ್ಲೇಖ ಮಾಡಿದೆ.
ಇನ್ನು ಟಿಆರ್ಎಐ ಪ್ರಕಾರ ಭಾರತದ ಅತೀ ದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ಏಪ್ರಿಲ್ನಲ್ಲಿ ಸುಮಾರು 16.8ರಷ್ಟು ಚಂದಾದಾರರನ್ನು ಹೊಂದಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications