ವಿವಿಧ ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ ಸೋಮವಾರದಿಂದ ನಡೆಯಬೇಕಿದ್ದ ಎರಡು ದಿನದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಲಾಗಿದೆ. ಇದಕ್ಕೆ ಕಾರಣವೇನು, ಮಹತ್ವದ ಸಭೆ ನಡೆಯುವುದು ಯಾವಾಗ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ನವದೆಹಲಿ, ಜನವರಿ 29: ವಿವಿಧ ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ ಸೋಮವಾರದಿಂದ ನಡೆಯಬೇಕಿದ್ದ ಎರಡು ದಿನದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಲಾಗಿದೆ.
ಹೌದು, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸದಸ್ಯರು ಸೇರಿದಂತೆ ಕೆಲವು ಬ್ಯಾಂಕ್ ಮುಖ್ಯಸ್ಥರು ಶನಿವಾರ ಮುಂಬೈನಲ್ಲಿ ಸಮನ್ವಯ ಸಭೆ ನಡೆಯಿತು. ಈ ವೇಳೆ ಜನವರಿ 30 ಮತ್ತು 31ರಂದು ನಡೆಸಲು ತೀರ್ಮಾನಿಸಲಾಗಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ (AIBEA) ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ತಿಳಿಸಿದರು.

ಅಷ್ಟೇ ಅಲ್ಲದೇ ಬೇಡಿಕೆಗಳ ಇನ್ನಷ್ಟು ಚರ್ಚೆ, ರಾಷ್ಟ್ರವ್ಯಾಪಿ ಆಯೋಜನೆ ಬಗ್ಗೆ ಜನವರಿ 31 ರಂದು ಒಕ್ಕೂಟಗಳೊಂದಿಗೆ ಸಭೆ ನಡೆಸಲು ಭಾರತೀಯ ಬ್ಯಾಂಕ್ಗಳ ಸಂಘ (IBA) ಒಪ್ಪಿಕೊಂಡಿದೆ ಎಂದು ಇದೇ ವೇಳೆ ಅವರು ಸ್ಪಪ್ಟಪಡಿಸಿದರು.
ಮುಂಬೈನಲ್ಲಿ ನಡೆದ ಸಮನ್ವಯ ಸಭೆಯಲ್ಲಿ, ಮೂರು ಸಾಮಾನ್ಯ ವಿಷಯಗಳಾದ ಐದು ದಿನಗಳ ಬ್ಯಾಂಕಿಂಗ್ ಕಾರ್ಯ, ಪಿಂಚಣಿ ನವೀಕರಣ ಹಾಗೂ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ ಬಗ್ಗೆ ಈಗಾಗಲೇ ಬ್ಯಾಂಕ್ ಯುನಿಯನ್ಗಳು ಬೇಡಿಕೆ ಇಟ್ಟಿವೆ. ಈ ಸಂಬಂಧ ಹಮ್ಮಿಕೊಂಡಿದ್ದ ಮುಷ್ಕರ ಕಾರಣಾಂತರಳಿಂದ ಮುಂದೂಡಿದ್ದು, ಆ ಬಗ್ಗೆಚರ್ಚೆಗೆ ಜನವರಿ 31 ರಂದು ಮಹತ್ವದ ಸಭೆ ನಡೆಸಲು ಸಜ್ಜಾಗಿವೆ.
ಪ್ರಮುಖ ಈ ಮೂರು ಸಮಸ್ಯೆಗಳ ಹೊರತಾಗಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಆಯಾ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಗಳ ಜೊತೆಗೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಹಲವಾರು ಬ್ಯಾಂಕ್ ಯೂನಿಯನ್ಗನ್ನು ಒಳಗೊಂಡ ಮುಖ್ಯ ಸಂಸ್ಥೆ/ಒಕ್ಕೂಟವಾಗಿದೆ. ಇದೇ ಒಕ್ಕೂಟ ಕೆಲವು ದಿನಗಳ ಹಿಂದೆ ಮುಷ್ಕರಕ್ಕ ಕರೆ ನೀಡಿತ್ತು.

ಐದು ದಿನಗಳ ಬ್ಯಾಂಕಿಂಗ್ ಕಾರ್ಯ, ಪಿಂಚಣಿ ನವೀಕರಣಗೊಳಿಸುವುದು, ಉಳಿಕೆ ಸಮಸ್ಯೆಗಳು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS)ರದ್ದುಗೊಳಿಸುವುದು, ವೇತನ ಪರಿಷ್ಕರಣೆ ಮಾಡುವ ಬೇಡಿಕೆಗಳ ಚಾರ್ಟರ್ನಲ್ಲಿ ತಕ್ಷಣದ ಮಾತುಕತೆ ಮತ್ತು ಸಮರ್ಪಕ ನೇಮಕಾತಿಗಾಗಿ ಈ ಕೆಳಗಿನ ಬೇಡಿಕೆಗಳನ್ನು ಒತ್ತಾಯಿಸಲು ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರ ಬಗ್ಗೆ ಮಂಗಳವಾರ ಅಂತಿಮ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications