ಎಲ್ಲ ಬಗೆಯ ಈರುಳ್ಳಿ ರಫ್ತು ತಕ್ಷಣ ನಿಷೇಧ; ಆದರೆ ಹೀಗೆ ಮಾಡಿದ್ದಲ್ಲಿ ತಡೆಯಿಲ್ಲ

ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಸೋಮವಾರದಿಂದ ಎಲ್ಲ ಬಗೆಯ ಈರುಳ್ಳಿ ರಫ್ತು ನಿಷೇಧಿಸಿದೆ. ಆದರೆ ಕತ್ತರಿಸಿದ, ಹೆಚ್ಚಿದ, ತುಂಡಾದ ಹಾಗೂ ಪುಡಿಯ ರೂಪದಲ್ಲಿ ಇರುವ ಈರುಳ್ಳಿ ರಫ್ತಿಗೆ ಸರ್ಕಾರದ ಈ ನಿಷೇಧ ಅನ್ವಯ ಆಗಲ್ಲ. ದೇಶೀಯವಾಗಿ ಈರುಳ್ಳಿ ಪೂರೈಕೆ ಹೆಚ್ಚಾಗಬೇಕು ಹಾಗೂ ಇತ್ತೀಚೆಗೆ ದೆಹಲಿಯಲ್ಲಿ ಕೇಜಿಗೆ 35- 40 ರುಪಾಯಿ ತಲುಪಿರುವ ಈರುಳ್ಳಿ ಬೆಲೆಯಲ್ಲಿ ಇಳಿಕೆ ಆಗಲಿ ಎಂದು ಹೀಗೆ ಮಾಡಲಾಗಿದೆ.

ವಾಣಿಜ್ಯ ಹಾಗೂ ಕೈಗಾರಿಕೆ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ಬಗೆಯ ಈರುಳ್ಳಿ ರಫ್ತು ನಿಷೇಧಿಸಲಾಗಿದೆ" ಎಂದು ಡೆರೆಕ್ಟೊರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (DGFT) ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಎಲ್ಲ ಬಗೆಯ ಈರುಳ್ಳಿ ರಫ್ತು ತಕ್ಷಣ ನಿಷೇಧ; ಆದರೆ ಇವುಗಳಿಗೆ ತಡೆಯಿಲ್ಲ

ಕೇಂದ್ರ ಸರ್ಕಾರದ ವಾಣಿಜ್ಯ ಸಚಿವಾಲಯದ ಅಡಿಯಲ್ಲೇ ಕಾರ್ಯ ನಿರ್ವಹಿಸುವ ಒಂದು ಅಂಗ DGFT. ಆಮದು ಹಾಗೂ ರಫ್ತಿಗೆ ಸಂಬಂಧಿಸಿದ ವಿಚಾರಗಳನ್ನು ಇದು ನೋಡಿಕೊಳ್ಳುತ್ತದೆ. ಸರ್ಕಾರದ ಈ ನಿಷೇಧವು ಬೆಂಗಳೂರು ಈರುಳ್ಳಿ ಹಾಗೂ ಕೃಷ್ಣಪುರಂ ಈರುಳ್ಳಿಗೂ ಅನ್ವಯ ಆಗುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+