ಕೊರೊನಾವೈರಸ್ ಲಾಕ್ಡೌನ್ ನಡುವೆ ಲಕ್ಷಾಂತರ ಉದ್ಯೋಗ ನಷ್ಟವಾಗುತ್ತಿದೆ. ಇದಕ್ಕೆ ವ್ಯತಿರಿಕ್ತವಾಗಿ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ತನ್ನ 125,000 ತಾತ್ಕಾಲಿಕ ಉದ್ಯೋಗಿಗಳಿಗೆ 'ಖಾಯಂ' ಉದ್ಯೋಗದ ಅವಕಾಶ ನೀಡಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಅಮೆಜಾನ್ ಗೆ ಗಣನೀಯ ಪ್ರಮಾಣದಲ್ಲಿ ಆನ್ ಲೈನ್ ಶಾಪಿಂಗ್ ಆರ್ಡರ್ ಗಳು ಬಂದಿದ್ದು, ಈ ಆರ್ಡರ್ ಗಳ ರವಾನೆ ಮತ್ತು ಇತರೆ ಪ್ರಕ್ರಿಯೆಗಳಿಗಾಗಿ ಸುಮಾರು 125,000 ಉದ್ಯೋಗಿಗಳನ್ನು ತಾತ್ಕಾಲಿಕವಾಗಿ ಕೆಲಸಕ್ಕೆ ತೆಗೆದುಕೊಂಡಿತ್ತು. ಆದರೆ ಈಗ ಇದೇ ಉದ್ಯೋಗಿಗಳ ಕೆಲಸವನ್ನು ಖಾಯಂ ಮಾಡುವುದಾಗಿ ಸಂಸ್ಥೆ ಘೋಷಣೆ ಮಾಡಿದೆ.

ಮಾರ್ಚ್ ಬಳಿಕ ಅಮೆಜಾನ್ ವಹಿವಾಟು ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದ್ದು, ಇದೇ ಕಾರಣಕ್ಕಾಗಿ ಸಂಸ್ಥೆ 75,000 ಹೊಸ ಉದ್ಯೋಗಿಗಳನ್ನು ಕೆಲಸಕ್ಕೆ ಸೇರಿಸಿಕೊಂಡಿತ್ತು. ಈ ಬಗ್ಗೆ ತನ್ನ ಬ್ಲಾಗ್ ನಲ್ಲಿ ಬರೆದುಕೊಂಡಿರುವ ಅಮೆಜಾನ್ ಸಂಸ್ಥೆ, ಇತರೆ ಸಂಸ್ಥೆಗಳಂತೆಯೇ ತಮ್ಮ ಸಂಸ್ಥೆ ಕೂಡ ಅಗತ್ಯಕ್ಕೆ ಅನುಗುಣವಾಗಿ ಹೊಸ ಸಿಬ್ಬಂದಿಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಕಾರಣಕ್ಕೆ ನಾವು ನಮ್ಮ 125,000 ತಾತ್ಕಾಲಿಕ ಉದ್ಯೋಗಿಗಳಿಗೆ ಪರ್ಮನೆಂಟ್ ಅವಕಾಶ ನೀಡುತ್ತಿದ್ದೇವೆ. ಇವರ ಫುಲ್ ಟೈಮ್ ಕೆಲಸ ಜೂನ್ ತಿಂಗಳಿನಿಂದ ಆರಂಭವಾಗುತ್ತದೆ ಎಂದು ಹೇಳಲಾಗಿದೆ.
ಲಾಕ್ಡೌನ್ ಆರಂಭವಾದ ಸಮಯದಿಂದ ಆನ್ಲೈನ್ ಸರ್ವೀಸ್ ಹೆಚ್ಚು ಪರಿಣಾಮಕಾರಿಯಾಗಿದೆ. ಇದೀಗ ಎಲ್ಲರೂ ಆನ್ಲೈನ್ ಆರ್ಡರ್ ಮೊರೆ ಹೋಗುತ್ತಿದ್ದಾರೆ. ಇ ಕಾಮರ್ಸ್ ದಿಗ್ಗಜನಾಗಿ ಗುರುತಿಸಿಕೊಂಡಿರುವ ಅಮೆಜಾನ್, ಅಗತ್ಯ ವಸ್ತು, ದಿನಸಿ ವಸ್ತುಗಳ ಸೇವೆ ವಿಭಾಗ ನಿರಂತರವಾಗಿ ಕಾರ್ಯನಿರ್ವಹಿಸಿತ್ತು. ಜನರ ಬೇಡಿಕೆ ಹೆಚ್ಚಾದಂತೆ ಅಮೆಜಾನ್ ಕೂಡ ಹೆಚ್ಚುವರಿ ಕೆಲಸ ಮಾಡಿ ಅಗತ್ಯ ವಸ್ತುಗಳ ಪೂರೈಕೆ ಮಾಡಿತ್ತು. ಲಾಕ್ಡೌನ್ ಸಡಿಲಿಕೆಯಾದರೂ ಜನರು ಹೆಚ್ಚಾಗಿ ಆನ್ಲೈನ್ ಸರ್ವೀಸ್ ನೆಚ್ಚಿಕೊಂಡಿದ್ದಾರೆ.
ಅಮೆಜಾನ್ ತನ್ನ ಕಾರ್ಮಿಕರಿಗೆ ಗಂಟೆಗೆ ಕನಿಷ್ಟ ವೇತನ 15 ಡಾಲರ್ ನೀಡುತ್ತಿದ್ದು, ತನ್ನ ಕಾರ್ಮಿಕರನ್ನು ಸುರಕ್ಷಿತವಾಗಿರಿಸಲು ಸುಮಾರು 4 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications