ಅಮೆಜಾನ್.ಕಾಮ್ ಸ್ಥಾಪಕ ಜೆಫ್ ಬೆಜೋಸ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಾವಿರಾರು ಸಂಖ್ಯೆಯಲ್ಲಿ ವರ್ತಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಅಮೆಜಾನ್ ನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮದ ಮೂಲಕ ಸಣ್ಣ ಮತ್ತು ಮಧ್ಯಮ ಗಾತ್ರದ ವ್ಯಾಪಾರಗಳ ಜತೆಗೆ ಸಂಪರ್ಕ ಸಾಧಿಸುವ ಉದ್ದೇಶ ಇರಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅಧಿಕಾರಿಗಳ ಜತೆ ಭೇಟಿಗೂ ಸಮಯ ಕೇಳಿದ್ದಾರೆ. ಇ ಕಾಮರ್ಸ್ ನಿಯಮಾವಳಿಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬೆಜೋಸ್ ಆಗಮನದ ದಿನಾಂಕ, ಭಾರತದಲ್ಲಿ ಎಷ್ಟು ಸಮಯ ಇರಲಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿಲ್ಲ.
ಬೆಜೋಸ್ ಭೇಟಿ ವಿಚಾರವನ್ನು ಅಮೆಜಾನ್ ಕೂಡ ಖಾತ್ರಿ ಪಡಿಸಿಲ್ಲ. ಇನ್ನು ಪ್ರಧಾನಮಂತ್ರಿ ಕಾರ್ಯಾಲಯದಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭಾರತದಲ್ಲಿ ಬೆಜೋಸ್ ಇರುವಷ್ಟು ಸಮಯವೂ ಭಾರತದ ಮುನ್ನೂರು ನಗರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ದ ಕಾನ್ಫಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ತಿಳಿಸಿದೆ.

ಈ ಸಂಘಟನೆಗೆ ಏಳು ಕೋಟಿ ಸದಸ್ಯರಿದ್ದಾರೆ. ಅಂದ ಸಿಎಐಟಿಯಿಂದ ಕಳೆದ ಐದು ವರ್ಷಗಳಿಂದ ಅಮೆಜಾನ್, ಫ್ಲಿಪ್ ಕಾರ್ಟ್ ವಿರುದ್ಧ ಹೋರಾಟ ನಡೆಯುತ್ತಲೇ ಇದೆ. ಕನಿಷ್ಠ ಒಂದು ಲಕ್ಷ ಮಂದಿಯೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ತಿಳಿಸಿದೆ.
ಅಮೆಜಾನ್, ಫ್ಲಿಪ್ ಕಾರ್ಟ್ ನೀಡುತ್ತಿರುವ ಭಾರೀ ಪ್ರಮಾಣದ ರಿಯಾಯಿತಿ, ಆಫರ್ ಗಳಿಂದ ನಷ್ಟ ಉಂಟಾಗುತ್ತಿದೆ ಎಂದು ವರ್ತಕರು ಆರೋಪ ಮಾಡಿದ್ದಾರೆ. ಆದರೆ ಅಮೆಜಾನ್- ಫ್ಲಿಪ್ ಕಾರ್ಟ್ ಎರಡೂ ಕಂಪೆನಿಗಳು ಇದನ್ನು ಅಲ್ಲಗಳೆದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications