ಭೋಪಾಲ್, ಜೂನ್ 23: ಗುರಿ ದೃಢವಾಗಿದ್ದರೇ ಎಂತಹ ಕಠಿಣ ಪಥವನ್ನೇ ಕ್ರಮಿಸಬಹುದು ಎಂಬ ಮಾತಿನಂತೆ ಮಧ್ಯಪ್ರದೇಶದ ಯುವತಿ ಅಪ್ರತಿಮವಾದದ್ದನ್ನು ಸಾಧಿಸಿ ತೋರಿಸಿದ್ದಾಳೆ.
ಮುಧ್ಯಪ್ರದೇಶದ ನಿಮುಚ್ನ 24 ವರ್ಷದ ಅಂಚಲ್ ಗಂಗ್ವಾಲ್ ಇದೀಗ ಭಾರತೀಯ ವಾಯುಸೇನೆಯ ಯುದ್ದವಿಮಾನ ಪೈಲಟ್. ಅಂಚಲ್ ಗಂಗ್ವಾಲ್ ಭಾರತೀಯ ವಾಯುಸೇನೆಯಲ್ಲಿ ಫ್ಲೈಯಿಂಗ್ ಆಫೀಸರ್ ಆಗಿ ಸೇರಿಕೊಂಡಿದ್ದಾರೆ.
ಅಂಚಲ್ ಗಂಗ್ವಾಲ್ ತಂದೆ ಸುರೇಶ್ ಗಂಗ್ವಾಲ್ ಒಬ್ಬ ಚಹ ಮಾರುವವ. ಚಹ ಮಾರುವವನ ಮಗಳು ಭಾರತೀಯ ವಾಯುಸೇನೆಯ ಪೈಲಟ್ ಆಗಿರುವುದು ಸೇನೆಯಷ್ಟೇ ಅಲ್ಲದೇ ಇಡೀ ದೇಶಕ್ಕೆ ಹೆಮ್ಮೆ ಮೂಡಿಸಿದೆ.
ಪ್ರತಿದಿನ ಚಹ ಮಾರುವ ಕಾಯುಕ
ಅಂಚಲ್ ಗಂಗ್ವಾಲ್ ಹುಟ್ಟುತ್ತಲೇ ಬಡತನದ ಬೇಗೆಯಲ್ಲಿ ಬೆಳೆದವಳು. ಅವಳ ತಂದೆ ಸುರೇಶ್ ಗಂಗ್ವಾಲ್ಗೆ ಭೋಪಾಲ್ನಿಂದ 400 ಕಿ.ಮೀ ದೂರದಲ್ಲಿರುವ ನಿಮುಚ್ನಲ್ಲಿ ಕಳೆದ 25 ವರ್ಷಗಳಿಂದ ಪ್ರತಿದಿನ ಚಹ ಮಾರುವ ಕಾಯುಕ. ತಂದೆ ಮಗಳ ಕನಸಿಗೆ ರೆಕ್ಕೆ ಬೆಳೆಸಿದ್ದು ಚಹ ಮಾರುತ್ತಲೇ. ಮಗಳು ಏರೋನಾಟಿಕಲ್ ಎಂಜಿನಿಯರಿಂಗ್ಗೆ ಸೇರುತ್ತೇನೆಂದಾಗ ಅವಳ ತಂದೆಗೆ ಶಿಕ್ಷಣ ಶುಲ್ಕವನ್ನು ಪಾವತಿಸಲು ಸಹ ಹಣವಿರಲಿಲ್ಲ. ಆದರೆ, ಸುರೇಶ್ ಗಂಗ್ವಾಲ್ ಮಾತ್ರ ಕಷ್ಟಪಟ್ಟು ಮಗಳಿಗೆ ಉನ್ನತ ಶಿಕ್ಷಣ ಕೊಡಿಸಿ ಪೈಲಟ್ ಮಾಡಿದ್ದಾರೆ.
ಕೇದಾರನಾಥ ಮೇಘಸ್ಪೋಟ
2013 ರ ಕೇದಾರನಾಥ ಮೇಘಸ್ಪೋಟದ ದುರಂತದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವಲ್ಲಿ ಭಾರತೀಯ ವಾಯು ಸೇನಾ ಸಿಬ್ಬಂದಿಯ ಧೈರ್ಯವನ್ನು ನೋಡಿದ ನಂತರ ತನ್ನ ಮಗಳು ಭಾರತೀಯ ವಾಯುಪಡೆಗೆ ಸೇರುವ ಕನಸು ಕಂಡಿದ್ದಳು. ಈ ಕನಸನ್ನು ನನಸಾಗಿಸುವುದು ನಮ್ಮ ಕುಟುಂಬಕ್ಕೆ ಸುಲಭವಾಗಿರಲಿಲ್ಲ. ಆದರೆ, ಅವಳು ದೃಢನಿಶ್ಚಯ ಹೊಂದಿದ್ದಳು ಎನ್ನುತ್ತಾರೆ ತಂದೆ ಸುರೇಶ್ ಗಂಗ್ವಾಲ್.
ಅವಳನ್ನು ನೋಡಲು ಆಗುತ್ತಿಲ್ಲ
''ನಮ್ಮ ಮಗಳು ವಾಯಸೇನೆಯ ಪೈಲಟ್ ಆಗಿ ನೇಮಕವಾಗಿದ್ದು ನಮ್ಮ ಕುಟುಂಬಕ್ಕೆ ಹೆಮ್ಮೆ ಮೂಡಿಸುತ್ತದೆ. ಈ ಸಂತಸವನ್ನು ಪದಗಳಲ್ಲಿ ಹೇಳಲು ಬರುವುದಿಲ್ಲ. ಈಗ ಅವಳನ್ನು ನೋಡಲು ಆಗುತ್ತಿಲ್ಲ. ಏಕೆಂದರೆ ಕೊರೊನಾವೈರಸ್ ಲಾಕ್ಡೌನ್ ನಿಂದ ಅವಳನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ'' ಎಂದು ಸುರೇಶ್ ಗಂಗ್ವಾಲ್ ಹೇಳುತ್ತಾರೆ.
ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಂಚಲ್ ಗಂಗ್ವಾಲ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಅಂಚಲ್ ಗಂಗ್ವಾಲ್ ಸಾಧನೆ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ. ನೀಮುಚ್ನಲ್ಲಿ ಚಹಾ ಅಂಗಡಿಯೊಂದನ್ನು ನಡೆಸುತ್ತಿರುವ ಸುರೇಶ್ ಗಂಗ್ವಾಲ್ ಅವರ ಪುತ್ರಿ ಅಂಚಲ್ ಈಗ ವಾಯುಸೇನೆಯಲ್ಲಿ ಯುದ್ಧ ವಿಮಾನವನ್ನು ಹಾರಿಸಲಿದ್ದಾರೆ. ಮಧ್ಯಪ್ರದೇಶಕ್ಕೆ ಹೆಮ್ಮೆ ತಂದ ಮಗಳು ಅಂಚಲ್, ಆಕಾಶದ ಎತ್ತರದಲ್ಲಿ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications