ತೀವ್ರ ನಷ್ಟಕ್ಕೆ ತುತ್ತಾಗಿರುವ ರಿಲಯನ್ಸ್ ಕಮ್ಯುನಿಕೇಶನ್ಸ್ ಕಂಪನಿಯ ನಿರ್ದೇಶಕ ಹುದ್ದೆಗೆ ಅನಿಲ್ ಧೀರೂಭಾಯಿ ಅಂಬಾನಿ ರಾಜೀನಾಮೆ ನೀಡಿದ್ದಾರೆ.
ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆಯ ಜೊತೆಗೆ ಅನಿಲ್ ಡಿ. ಅಂಬಾನಿ, ಛಾಯಾ ವಿರಾನಿ, ರ್ಯಾನ ಕರಾನಿ,(Ryna karani), ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಕೂಡ ನಿರ್ದೇಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಂಬಾನಿ, ಛಾಯಾ ವಿರಾನಿ, ಮಂಜರಿ ಕಾಕೆರ್ ನವೆಂಬರ್ 15ರಂದು ರಾಜೀನಾಮೆ ನೀಡಿದ್ದಾರೆ. ರ್ಯಾನ ಕರಾನಿ ನವೆಂಬರ್ 14ರಂದು ಮತ್ತು ಸುರೇಶ್ ರಂಗಾಚಾರ್ ನವೆಂಬರ್ 13ರಂದು ರಾಜೀನಾಮೆ ಸಲ್ಲಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಶನ್ಸ್ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಮಣಿಕಂಠನ್ ವಿ. ಕೂಡ ತಮ್ಮ ಸ್ಥಾನಕ್ಕೆ ಅಕ್ಟೋಬರ್ 4ರಂದೇ ರಾಜೀನಾಮೆ ನೀಡಿದ್ದಾರೆ ಎಂದು ರಿಲಯನ್ಸ್ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯ ಹಣಕಾಸು ಅಧಿಕಾರಿ(ಸಿಎಫ್ಒ) ಮಣಿಕಂಠನ್ ವಿ. ಸ್ಥಾನಕ್ಕೆ ಈಗಾಗಲೇ ಡಿ. ವಿಶ್ವನಾಥ್ ಆಯ್ಕೆಯಾಗಿದ್ದು, ಸಾಲಗಾರರ ಸಮಿತಿ (ಸಿಒಸಿ) ಅನುಮೋದನೆ ದೊರೆಯಬೇಕಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2019-20ರ 2ನೇ ತ್ರೈಮಾಸಿಕ ಅವಧಿಯಲ್ಲಿ ಕಂಪನಿಯು 30,158 ಕೋಟಿ ರುಪಾಯಿ ನಿವ್ವಳ ನಷ್ಟ ಅನುಭವಿಸಿದೆ ಎಂದು ವರದಿಯಾಗಿತ್ತು. ಮೊದಲ ತ್ರೈಮಾಸಿಕ ಅವಧಿಯಲ್ಲಿ 366 ಕೋಟಿ ರುಪಾಯಿ ನಷ್ಟವಾಗಿತ್ತು. ಪರಿಣಾಮ ನವೆಂಬರ್ 15ರಂದು ರಿಲಿಯನ್ಸ ಕಮ್ಯುನಿಕೇಶನ್ ಷೇರುಗಳು 52 ವಾರಗಳಲ್ಲಿ ಅತ್ಯಂತ ಹೆಚ್ಚು ಕುಸಿತ ಕಂಡು ಪ್ರತಿ ಷೇರು ಬೆಲೆ 0.55ಪೈಸೆಗೆ ತಲುಪಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications