Anna Bhagya Scheme: ಬರಪೀಡಿತ ತಾಲೂಕುಗಳಲ್ಲಿ ನಗದು ಬದಲಾಗಿ ಅಕ್ಕಿ ನೀಡಲು ಸರ್ಕಾರ ಚಿಂತನೆ

ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಧನಸಹಾಯವನ್ನು ನೀಡುವ ಬದಲಾಗಿ ಬರಪೀಡಿತ ಎಂದು ಗೊತ್ತುಪಡಿಸಿದ ತಾಲ್ಲೂಕುಗಳಲ್ಲಿ 5 ಕೆಜಿ ಅಕ್ಕಿಯನ್ನು ವಿತರಿಸಲು ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಸರ್ಕಾರ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಅಕ್ಕಿ ವಿತರಣೆಯನ್ನು ಪ್ರಾರಂಭಿಸಲಾಗುವುದು ಎಂದು ಮುನಿಯಪ್ಪ ಹೇಳಿದರು. ಪ್ರಸ್ತುತ, ಸಾಕಷ್ಟು ಅಕ್ಕಿ ದಾಸ್ತಾನು ಇಲ್ಲದ ಕಾರಣ, ಸರ್ಕಾರವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಫಲಾನುಭವಿಗಳಿಗೆ ಹಣಕಾಸು ನೆರವನ್ನು ನೀಡುತ್ತಿದೆ.

 ಬರಪೀಡಿತ ತಾಲೂಕುಗಳಲ್ಲಿ ನಗದು ಬದಲಾಗಿ ಅಕ್ಕಿ ನೀಡಲು ಸರ್ಕಾರ ಚಿಂತನೆ

ಮುಂದಿನ ಹತ್ತು ದಿನಗಳಲ್ಲಿ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ನಾವು ಆಂಧ್ರಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದೊಂದಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ಪಡೆಯಲು ಚರ್ಚೆಯಲ್ಲಿ ತೊಡಗಿದ್ದೇವೆ ಎಂದು ಎಂದು ಹೇಳಿದರು.

ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯ ನಂತರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದ 62 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬಹುದು. ಮಳೆ ಕೊರತೆಯಿಂದ ತೀವ್ರ ಬೆಳೆ ನಷ್ಟ ಎದುರಿಸುತ್ತಿರುವ 113 ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ ಈ ತಾಲೂಕುಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

"ಜುಲೈನಲ್ಲಿ, ಸುಮಾರು 3.45 ಕೋಟಿ [34.5 ಮಿಲಿಯನ್] ಜನರಿಗೆ ಒಟ್ಟು 566 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ. ಆಗಸ್ಟ್‌ನಲ್ಲಿ 3.69 ಕೋಟಿ [36.9 ಮಿಲಿಯನ್] ಜನರಿಗೆ 606 ಕೋಟಿ ರೂಪಾಯಿ ವಿತರಿಸಲಾಗಿದೆ. ಪ್ರಸ್ತುತ, 21 ಲಕ್ಷ [2.1 ಮಿಲಿಯನ್] ಜನರು ಬ್ಯಾಂಕ್ ಖಾತೆಗಳನ್ನು ಹೊಂದಿಲ್ಲ. ಆದರೆ ನಾವು 14 ಲಕ್ಷ [1.4 ಮಿಲಿಯನ್] ಖಾತೆಗಳನ್ನು ಆರಂಭಿಸುವ ಪ್ರಕ್ರಿಯೆಯಲ್ಲಿದ್ದೇವೆ," ಎಂದು ಹೇಳಿದರು.

ಸಮೀಕ್ಷೆಯ ನಂತರ ಉಳಿದ 51 ತಾಲ್ಲೂಕುಗಳಲ್ಲಿ ಬರಗಾಲದಂತಹ ಪರಿಸ್ಥಿತಿ ವರದಿಯಾಗಿರುವುದರಿಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಂತಿಮ ಪಟ್ಟಿ ಸಲ್ಲಿಸುವ ಮೊದಲು ಮತ್ತೊಮ್ಮೆ ಸಮೀಕ್ಷೆ ನಡೆಸಲಿದೆ ಎಂದು ತಿಳಿಸಿದರು.

"ರಾಜ್ಯದಲ್ಲಿ ಇದುವರೆಗೆ ಒಟ್ಟಾರೆಯಾಗಿ ಸಾಮಾನ್ಯವಾಗಿ ಇರುವ ಮಳೆ ಪ್ರಮಾಣಕ್ಕಿಂತ ಶೇಕಡ 26ರಷ್ಟು ಕಡಿಮೆ ಮಳೆಯಾಗಿದೆ. ಹಾಗಾಗಿ ಬರಗಾಲ ಉಂಟಾಗುವ ಸಾಧ್ಯತೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಇದುವರೆಗೆ 62 ತಾಲ್ಲೂಕುಗಳು ತೀವ್ರ ಬರ ಇರುವ ಪ್ರದೇಶ ಎಂದು ಘೋಷಿಸಲು ಅರ್ಹವಾಗಿವೆ," ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

"ಈ ಹಿನ್ನೆಲೆಯಲ್ಲಿ ಬರ ಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕಾರ್ಮಿಕರಿಗೆ 100 ದಿನಗಳಿಂದ 150 ದಿನಗಳಿಗೆ ಏರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಶಿಫಾರಸು ಮಾಡಿದೆ," ಎಂದು ಈ ಸಂದರ್ಭದಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+